AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo ರೈತ ಸಮುದಾಯದಲ್ಲಿ ಒಡಕು ಮೂಡಿಸಿದ ನೂತನ ಕೃಷಿ ಕಾಯ್ದೆಗಳು

ದೇಶದ ಕೆಲ ಭಾಗದ ರೈತರು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಸೇರುತ್ತಿದ್ದರೆ, ಇನ್ನು ಕೆಲವು ಭಾಗದ ರೈತರು ಕಾಯ್ದೆ ಬೆಂಬಲಿಸಲು ರಾಜಧಾನಿಯತ್ತ ಹೊರಟಿದ್ದಾರೆ. ಪರ-ವಿರೋಧ ಸಹಿ ಸಂಗ್ರಹಿಸಿ ಸರ್ಕಾರ ಮತ್ತು ರಾಷ್ಟ್ರಪತಿಗಳಿಗೆ ಸಲ್ಲಿಸುವ ಪ್ರಕ್ರಿಯಿಯೂ ಸಾಗುತ್ತಿದೆ.

Delhi Chalo ರೈತ ಸಮುದಾಯದಲ್ಲಿ ಒಡಕು ಮೂಡಿಸಿದ ನೂತನ ಕೃಷಿ ಕಾಯ್ದೆಗಳು
ಪ್ರತಿಭಟನಾ ನಿರತ ರೈತರು
guruganesh bhat
| Updated By: ಸಾಧು ಶ್ರೀನಾಥ್​|

Updated on: Dec 24, 2020 | 11:33 AM

Share

ದೆಹಲಿ: ಪಂಜಾಬ್ ರೈತರ ಚಳವಳಿಗೆ ತಿಂಗಳು ಭರ್ತಿಯಾಗುತ್ತಿದೆ. ದೇಶದ ರೈತ ಸಮುದಾಯ ಮತ್ತು ಒಕ್ಕೂಟಗಳ ನಡುವೆ ನೂತನ ಕೃಷಿ ಕಾಯ್ದೆ ಒಡಕು ಮೂಡಿಸಿರುವುದು ನಿಚ್ಚಳವಾಗುತ್ತಿದೆ. ಕೃಷಿ ಕಾಯ್ದೆ ವಿರೋಧಿಸಿ ಮಹಾರಾಷ್ಟ್ರದ ನಾಸಿಕ್​ನಿಂದ ಹೊರಟ ಸಾವಿರಾರು ರೈತರು ಇಂದು ದೆಹಲಿಯಲ್ಲಿ ಚಳವಳಿ ಸೇರಲಿದ್ದಾರೆ.

ಇನ್ನು, ಕೃಷಿ ಕಾಯ್ದೆ ಬೆಂಬಲಿಸಿ ಉತ್ತರ ಪ್ರದೇಶ ಕಿಸಾನ್ ಸೇನಾ ಸಂಘಟನೆಯ 20 ಸಾವಿರ ರೈತರು ರಾಷ್ಟ್ರ ರಾಜಧಾನಿಯತ್ತ ಮೆರವಣಿಗೆ ಹೊರಟಿದ್ದಾರೆ. ಆಗ್ರಾ, ಮಥುರಾ, ಮೀರತ್, ಹಥ್ರಾಸ್, ಫಿರೋಜಾಬಾದ್ ಮತ್ತು ಮುಜಾಫರ್​​ನಗರಗಳ ರೈತರನ್ನು ಒಗ್ಗೂಡಿಸಿಕೊಂಡು ಕಿಸಾನ್ ಸೇನಾ ದೆಹಲಿತ್ತ ತೆರಳಲಿದೆ.

ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ವಿಜಯ್ ಚೌಕದಿಂದ ರಾಷ್ಟ್ರಪತಿ ಭವನಕ್ಕೆ ಜಾಥಾ ಕೈಗೊಳ್ಳಲಿದೆ. ನಂತರ ರಾಷ್ಟ್ರಪತಿ ರಾಮನಾಥ್ ಕೋವಿಂದ್​ರನ್ನು ಭೇಟಿಯಾಗಿ ಕೃಷಿ ಕಾಯ್ದೆ ವಿರೋಧಿಸಿ ಸಂಗ್ರಹಿಸಲಾದ 2 ಕೋಟಿ ಸಹಿಗಳನ್ನು ಹಸ್ತಾಂತರಿಸಲಿದೆ.

ಗ್ರಾಮೀಣ ಸರ್ಕಾರೇತರ ಸಂಸ್ಥೆಗಳ ಒಕ್ಕೂಟಗಳು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್​ಗೆ ನೂತನ ಕೃಷಿ ಕಾಯ್ದೆಗಳ ಪರ ಸಂಗ್ರಹಿಸಲಾದ 3.13,363 ಸಹಿಗಳನ್ನು ಹಸ್ತಾಂತರಿಸಿವೆ. 1 ಲಕ್ಷ ಗ್ರಾಮಗಳ ರೈತರಿಂದ ಈ ಸಹಿ ಸಂಗ್ರಹಿಸಲಾಗಿದೆ.

6 ರಾಜ್ಯದ ರೈತರ ಜೊತೆ ಪ್ರಧಾನಿ ನರೇಂದ್ರ ಮೋದಿ ಸಂವಾದ ದೇಶದ 6 ರಾಜ್ಯಗಳ ರೈತರ ಜೊತೆ ಪ್ರಧಾನಿ ನರೇಂದ್ರ ಮೋದಿ ನಾಳೆ ವರ್ಚುವಲ್ ಸಂವಾದ ನಡೆಸಲಿದ್ದಾರೆ. ಇದೇ ವೇಳೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಒಂಬತ್ತು ಕೋಟಿ ರೈತರ ಖಾತೆಗೆ ಒಟ್ಟು 18,000 ಕೋಟಿ ಹಣವನ್ನು ಪ್ರಧಾನಿ ವರ್ಗಾಯಿಸಲಿದ್ದಾರೆ.

ವೆಬಿನಾರ್ ಆಯೋಜಿಸಿದ ರೈತ ಒಕ್ಕೂಟಗಳು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸುತ್ತಿರುವ ಕಾರಣಗಳನ್ನು ನೇರವಾಗಿ ವಿವರಿಸಲು ದೆಹಲಿ ಚಲೋ ನಿರತ ರೈತ ಮುಖಂಡರು ವೆಬಿನಾರ್ ಆಯೋಜಿಸಿದ್ದಾರೆ. ವೆಬಿನಾರ್​ನಲ್ಲಿ ನೂತನ ಕೃಷಿ ಕಾಯ್ದೆಗಳಿಂದ ಉಂಟಾಗಲಿರುವ ಹಾನಿಗಳನ್ನು ವಿವರಿಸಲಿದ್ದಾರೆ. ಕೃಷಿ ಕಾಯ್ದೆ ಬೆಂಬಲಿಸಿರುವ ನಟಿ ಕಂಗನಾ ರನೌತ್, ಮುಖೇಶ್ ಖನ್ನಾ ಮತ್ತು ಪಾಯಲ್ ರೋಹ್ಟಗಿ ಅವರನ್ನೂ ವೆಬಿನಾರ್​ಗೆ ಆಹ್ವಾನಿಸಲಾಗಿದೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ