AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo ರೈತ ಸಮುದಾಯದಲ್ಲಿ ಒಡಕು ಮೂಡಿಸಿದ ನೂತನ ಕೃಷಿ ಕಾಯ್ದೆಗಳು

ದೇಶದ ಕೆಲ ಭಾಗದ ರೈತರು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಸೇರುತ್ತಿದ್ದರೆ, ಇನ್ನು ಕೆಲವು ಭಾಗದ ರೈತರು ಕಾಯ್ದೆ ಬೆಂಬಲಿಸಲು ರಾಜಧಾನಿಯತ್ತ ಹೊರಟಿದ್ದಾರೆ. ಪರ-ವಿರೋಧ ಸಹಿ ಸಂಗ್ರಹಿಸಿ ಸರ್ಕಾರ ಮತ್ತು ರಾಷ್ಟ್ರಪತಿಗಳಿಗೆ ಸಲ್ಲಿಸುವ ಪ್ರಕ್ರಿಯಿಯೂ ಸಾಗುತ್ತಿದೆ.

Delhi Chalo ರೈತ ಸಮುದಾಯದಲ್ಲಿ ಒಡಕು ಮೂಡಿಸಿದ ನೂತನ ಕೃಷಿ ಕಾಯ್ದೆಗಳು
ಪ್ರತಿಭಟನಾ ನಿರತ ರೈತರು
guruganesh bhat
| Edited By: |

Updated on: Dec 24, 2020 | 11:33 AM

Share

ದೆಹಲಿ: ಪಂಜಾಬ್ ರೈತರ ಚಳವಳಿಗೆ ತಿಂಗಳು ಭರ್ತಿಯಾಗುತ್ತಿದೆ. ದೇಶದ ರೈತ ಸಮುದಾಯ ಮತ್ತು ಒಕ್ಕೂಟಗಳ ನಡುವೆ ನೂತನ ಕೃಷಿ ಕಾಯ್ದೆ ಒಡಕು ಮೂಡಿಸಿರುವುದು ನಿಚ್ಚಳವಾಗುತ್ತಿದೆ. ಕೃಷಿ ಕಾಯ್ದೆ ವಿರೋಧಿಸಿ ಮಹಾರಾಷ್ಟ್ರದ ನಾಸಿಕ್​ನಿಂದ ಹೊರಟ ಸಾವಿರಾರು ರೈತರು ಇಂದು ದೆಹಲಿಯಲ್ಲಿ ಚಳವಳಿ ಸೇರಲಿದ್ದಾರೆ.

ಇನ್ನು, ಕೃಷಿ ಕಾಯ್ದೆ ಬೆಂಬಲಿಸಿ ಉತ್ತರ ಪ್ರದೇಶ ಕಿಸಾನ್ ಸೇನಾ ಸಂಘಟನೆಯ 20 ಸಾವಿರ ರೈತರು ರಾಷ್ಟ್ರ ರಾಜಧಾನಿಯತ್ತ ಮೆರವಣಿಗೆ ಹೊರಟಿದ್ದಾರೆ. ಆಗ್ರಾ, ಮಥುರಾ, ಮೀರತ್, ಹಥ್ರಾಸ್, ಫಿರೋಜಾಬಾದ್ ಮತ್ತು ಮುಜಾಫರ್​​ನಗರಗಳ ರೈತರನ್ನು ಒಗ್ಗೂಡಿಸಿಕೊಂಡು ಕಿಸಾನ್ ಸೇನಾ ದೆಹಲಿತ್ತ ತೆರಳಲಿದೆ.

ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ವಿಜಯ್ ಚೌಕದಿಂದ ರಾಷ್ಟ್ರಪತಿ ಭವನಕ್ಕೆ ಜಾಥಾ ಕೈಗೊಳ್ಳಲಿದೆ. ನಂತರ ರಾಷ್ಟ್ರಪತಿ ರಾಮನಾಥ್ ಕೋವಿಂದ್​ರನ್ನು ಭೇಟಿಯಾಗಿ ಕೃಷಿ ಕಾಯ್ದೆ ವಿರೋಧಿಸಿ ಸಂಗ್ರಹಿಸಲಾದ 2 ಕೋಟಿ ಸಹಿಗಳನ್ನು ಹಸ್ತಾಂತರಿಸಲಿದೆ.

ಗ್ರಾಮೀಣ ಸರ್ಕಾರೇತರ ಸಂಸ್ಥೆಗಳ ಒಕ್ಕೂಟಗಳು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್​ಗೆ ನೂತನ ಕೃಷಿ ಕಾಯ್ದೆಗಳ ಪರ ಸಂಗ್ರಹಿಸಲಾದ 3.13,363 ಸಹಿಗಳನ್ನು ಹಸ್ತಾಂತರಿಸಿವೆ. 1 ಲಕ್ಷ ಗ್ರಾಮಗಳ ರೈತರಿಂದ ಈ ಸಹಿ ಸಂಗ್ರಹಿಸಲಾಗಿದೆ.

6 ರಾಜ್ಯದ ರೈತರ ಜೊತೆ ಪ್ರಧಾನಿ ನರೇಂದ್ರ ಮೋದಿ ಸಂವಾದ ದೇಶದ 6 ರಾಜ್ಯಗಳ ರೈತರ ಜೊತೆ ಪ್ರಧಾನಿ ನರೇಂದ್ರ ಮೋದಿ ನಾಳೆ ವರ್ಚುವಲ್ ಸಂವಾದ ನಡೆಸಲಿದ್ದಾರೆ. ಇದೇ ವೇಳೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಒಂಬತ್ತು ಕೋಟಿ ರೈತರ ಖಾತೆಗೆ ಒಟ್ಟು 18,000 ಕೋಟಿ ಹಣವನ್ನು ಪ್ರಧಾನಿ ವರ್ಗಾಯಿಸಲಿದ್ದಾರೆ.

ವೆಬಿನಾರ್ ಆಯೋಜಿಸಿದ ರೈತ ಒಕ್ಕೂಟಗಳು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸುತ್ತಿರುವ ಕಾರಣಗಳನ್ನು ನೇರವಾಗಿ ವಿವರಿಸಲು ದೆಹಲಿ ಚಲೋ ನಿರತ ರೈತ ಮುಖಂಡರು ವೆಬಿನಾರ್ ಆಯೋಜಿಸಿದ್ದಾರೆ. ವೆಬಿನಾರ್​ನಲ್ಲಿ ನೂತನ ಕೃಷಿ ಕಾಯ್ದೆಗಳಿಂದ ಉಂಟಾಗಲಿರುವ ಹಾನಿಗಳನ್ನು ವಿವರಿಸಲಿದ್ದಾರೆ. ಕೃಷಿ ಕಾಯ್ದೆ ಬೆಂಬಲಿಸಿರುವ ನಟಿ ಕಂಗನಾ ರನೌತ್, ಮುಖೇಶ್ ಖನ್ನಾ ಮತ್ತು ಪಾಯಲ್ ರೋಹ್ಟಗಿ ಅವರನ್ನೂ ವೆಬಿನಾರ್​ಗೆ ಆಹ್ವಾನಿಸಲಾಗಿದೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?