AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್​ 19 ತಡೆಗಟ್ಟಲು ಡಿಸೆಂಬರ್ ಒಂದರಿಂದ ಜಾರಿಯಾಗಲಿದೆ ಹೊಸ ಮಾರ್ಗಸೂಚಿ

ನೂತನ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚಿಸಿದ್ದು, ಕೊರೊನಾ ಹಾವಳಿ ಹೆಚ್ಚಿರುವಲ್ಲಿ ನಿಯಮಗಳು ಕಠಿಣವಾಗಿರಲಿವೆ.

ಕೋವಿಡ್​ 19 ತಡೆಗಟ್ಟಲು ಡಿಸೆಂಬರ್ ಒಂದರಿಂದ ಜಾರಿಯಾಗಲಿದೆ ಹೊಸ ಮಾರ್ಗಸೂಚಿ
Skanda
| Edited By: |

Updated on: Nov 25, 2020 | 6:29 PM

Share

ದೆಹಲಿ: ಕೋವಿಡ್ 19 ನಿಯಂತ್ರಿಸಲು ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿಯನ್ನು ರೂಪಿಸಿದ್ದು ಡಿಸೆಂಬರ್ 1ರಿಂದ ಹೊಸ ನಿಯಮಗಳು ಜಾರಿಯಾಗಲಿವೆ. ನೂತನ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚಿಸಿದ್ದು, ಕೊರೊನಾ ಹಾವಳಿ ಹೆಚ್ಚಿರುವಲ್ಲಿ ನಿಯಮಗಳು ಕಠಿಣವಾಗಿರಲಿವೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೊರಡಿಸಿರುವ ಸುತ್ತೋಲೆಯಲ್ಲಿ ಕಂಟೈನ್ಮೆಂಟ್ ವಲಯಗಳತ್ತ ತೀವ್ರ ನಿಗಾ ವಹಿಸುವಂತೆ ಸೂಚಿಸಲಾಗಿರುವ ಕಾರಣ ಕಂಟೈನ್ಮೆಂಟ್ ವಲಯಗಳೆಂದು ಗುರುತಿಸಿಕೊಂಡ ಪ್ರದೇಶಗಳಲ್ಲಿ ತುರ್ತು ಪರಿಸ್ಥಿತಿಗಳನ್ನು ಹೊರತುಪಡಿಸಿ ಸಂಚಾರ ನಿರ್ಬಂಧನೆಗೊಳ್ಳಲಿದೆ. ಆರೋಗ್ಯ ಕಾರ್ಯಕರ್ತರಿಗೆ ಮನೆಮನೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸಲು ಸೂಚಿಸಿದ್ದು ಯಾವುದೇ ವ್ಯಕ್ತಿಗೆ ಪಾಸಿಟಿವ್ ಲಕ್ಷಣಗಳು ಕಂಡುಬಂದಲ್ಲಿ 72 ಗಂಟೆಯ ಒಳಗಾಗಿ ಅವರ ಸಂಪರ್ಕಿತರನ್ನು ಗುರುತಿಸಿ 14 ದಿನಗಳ ಕ್ವಾರಂಟೈನ್​ಗೆ ಒಳಪಡಿಸಬೇಕಿದೆ.

ಸ್ಥಳೀಯ ಆಡಳಿತ ವರ್ಗಕ್ಕೆ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದ್ದು ಅವಶ್ಯಕತೆ ಕಂಡುಬಂದಲ್ಲಿ ನೈಟ್​ ಕರ್ಫ್ಯೂ ವಿಧಿಸುವ ಅಧಿಕಾರವನ್ನೂ ನೀಡಲಾಗಿದೆ. ಆದರೆ, ಕೇಂದ್ರದ ಅನುಮತಿಯ ಹೊರತಾಗಿ ಲಾಕ್​ಡೌನ್ ಮಾಡುವಂತಿಲ್ಲ ಎಂಬುದನ್ನೂ ಮಾರ್ಗಸೂಚಿಯಲ್ಲಿ ಉಲ್ಲೇಖಿಸಿದ್ದು ಈ ಮಾರ್ಗಸೂಚಿ ಡಿಸೆಂಬರ್​ 31ರ ತನಕವೂ ಜಾರಿಯಲ್ಲಿರುತ್ತದೆ ಎಂದು ತಿಳಿಸಲಾಗಿದೆ.

ಯಾವುದಕ್ಕೆ ಅನುಮತಿ? * ಗೃಹ ಸಚಿವಾಲಯದ ಆದೇಶದಂತೆ ವಿಮಾನಯಾನ ಕೈಗೊಳ್ಳಬಹುದು. * ಕ್ರೀಡಾ ಸ್ಪರ್ಧಾಳುಗಳಿಗೆ ಮಾತ್ರ ಈಜುಕೊಳ ಬಳಸಲು ಅನುಮತಿ. * ಚಿತ್ರಮಂದಿರಗಳಲ್ಲಿ ಸಾಮರ್ಥ್ಯಕ್ಕಿಂತ ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ. * ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ, ಮನರಂಜನಾ ಕಾರ್ಯಕ್ರಮಗಳಲ್ಲಿ ಶೇ.50ರಷ್ಟು ಜನ ಮಾತ್ರ ಭಾಗವಹಿಸಬಹುದು.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ