ಕೊರೊನಾ ಕಡಿಮೆಯಾದ್ರೆ ಬೇಗ ಡಿಸ್ಚಾರ್ಜ್! ಹೊಸ ಮಾರ್ಗಸೂಚಿ ಏನು? ಯಾಕೆ?

ಕೇಂದ್ರ ಆರೋಗ್ಯ ಇಲಾಖೆಯು ಕೊರೊನಾ ಸೋಂಕಿತ ರೋಗಿಗಳ ಡಿಸ್ಚಾರ್ಜ್ ಕುರಿತಾದ ಮಾರ್ಗಸೂಚಿಯಲ್ಲಿ ಸಾಕಷ್ಟು ಬದಲಾವಣೆ ಮಾಡಿದೆ. ಹೊಸ ಮಾರ್ಗಸೂಚಿ ಪ್ರಕಾರ ಅಲ್ಪ ಪ್ರಮಾಣದ ಲಕ್ಷಣವಿದ್ರೆ 10 ದಿನ ಮಾತ್ರ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯಬೇಕು. ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಮನೆಗೆ ಕಳಿಸಬೇಕು. 3 ದಿನಗಳ ಕಾಲ ಜ್ವರ ಇಲ್ಲದಿದ್ರೆ ಡಿಸ್ಚಾರ್ಜ್ ಮಾಡಬೇಕು. ಡಿಸ್ಚಾರ್ಜ್ ವೇಳೆ ಕೊರೊನಾ ಸ್ಯಾಂಪಲ್ ಪರೀಕ್ಷೆ ಅಗತ್ಯವಿಲ್ಲ ಎಂದು ಹೊಸ ಕ್ರಮಗಳನ್ನು ಅನ್ವಯಗೊಳಿಸಿದೆ. ದೇಶದಲ್ಲಿ ಕೊರೊನಾದಿಂದ ಗಂಭೀರ ಸ್ಥಿತಿಯಲ್ಲಿರುವವರಿಗೆ ಆಸ್ಪತ್ರೆಯಲ್ಲಿ ಬೆಡ್ ಸಿಗದಿರುವುದನ್ನು ತಪ್ಪಿಸಲು […]

ಕೊರೊನಾ ಕಡಿಮೆಯಾದ್ರೆ ಬೇಗ ಡಿಸ್ಚಾರ್ಜ್! ಹೊಸ ಮಾರ್ಗಸೂಚಿ ಏನು? ಯಾಕೆ?
ಸಾಧು ಶ್ರೀನಾಥ್​

Updated on: May 09, 2020 | 4:46 PM

ಕೇಂದ್ರ ಆರೋಗ್ಯ ಇಲಾಖೆಯು ಕೊರೊನಾ ಸೋಂಕಿತ ರೋಗಿಗಳ ಡಿಸ್ಚಾರ್ಜ್ ಕುರಿತಾದ ಮಾರ್ಗಸೂಚಿಯಲ್ಲಿ ಸಾಕಷ್ಟು ಬದಲಾವಣೆ ಮಾಡಿದೆ. ಹೊಸ ಮಾರ್ಗಸೂಚಿ ಪ್ರಕಾರ ಅಲ್ಪ ಪ್ರಮಾಣದ ಲಕ್ಷಣವಿದ್ರೆ 10 ದಿನ ಮಾತ್ರ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯಬೇಕು. ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಮನೆಗೆ ಕಳಿಸಬೇಕು. 3 ದಿನಗಳ ಕಾಲ ಜ್ವರ ಇಲ್ಲದಿದ್ರೆ ಡಿಸ್ಚಾರ್ಜ್ ಮಾಡಬೇಕು. ಡಿಸ್ಚಾರ್ಜ್ ವೇಳೆ ಕೊರೊನಾ ಸ್ಯಾಂಪಲ್ ಪರೀಕ್ಷೆ ಅಗತ್ಯವಿಲ್ಲ ಎಂದು ಹೊಸ ಕ್ರಮಗಳನ್ನು ಅನ್ವಯಗೊಳಿಸಿದೆ.

ದೇಶದಲ್ಲಿ ಕೊರೊನಾದಿಂದ ಗಂಭೀರ ಸ್ಥಿತಿಯಲ್ಲಿರುವವರಿಗೆ ಆಸ್ಪತ್ರೆಯಲ್ಲಿ ಬೆಡ್ ಸಿಗದಿರುವುದನ್ನು ತಪ್ಪಿಸಲು ಈ ಪ್ಲ್ಯಾನ್ ಮಾಡಲಾಗಿದೆ. ದೇಶದಲ್ಲಿ ಶೇ.80ರಷ್ಟು ರೋಗಿಗಳಿಗೆ ಅಲ್ಪಪ್ರಮಾಣದ ಕೊರೊನಾ ಲಕ್ಷಣಗಳು ಮಾತ್ರ ಇವೆ. ಈ ಲಕ್ಷಣ ಇರುವವರನ್ನು ಆಸ್ಪತ್ರೆಗೆ ದಾಖಲಿಸುವ ಅಗತ್ಯವಿಲ್ಲ. ತಾವಾಗಿಯೇ ಕೊರೊನಾ ಸೋಂಕಿನಿಂದ ಗುಣಮುಖರಾಗ್ತಾರೆ. ಹೀಗಾಗಿ ಈ ರೀತಿ ಇರುವವರನ್ನು ಆಸ್ಪತ್ರೆಗೆ ದಾಖಲಿಸಿದರೆ ಗಂಭೀರ ಸ್ಥಿತಿಯಲ್ಲಿ ಇರುವವರಿಗೆ ಆಸ್ಪತ್ರೆಯ ಬೆಡ್ ಸಿಗಲ್ಲ. ಈ ಸಮಸ್ಯೆ ಪರಿಹರಿಸಲು ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ಡಿಸ್ಚಾರ್ಜ್ ಬಳಿಕ ರೋಗಿಗಳು ಮನೆಯಲ್ಲೇ 7 ದಿನ ಐಸೋಲೇಷನ್​ನಲ್ಲಿ ಇರಬೇಕು. ರೋಗಿಗಳಿಗೆ ಏನಾದರೂ ಉಸಿರಾಟದ ಸಮಸ್ಯೆಯಾದರೆ ಡೇಡಿಕೇಟೆಡ್ ಕೊವಿಡ್ ಹೆಲ್ತ್ ಸೆಂಟರ್ ಗೆ ದಾಖಲಿಸಬೇಕು. ಆಸ್ಪತ್ರೆಯಿಂದ ರೋಗಿಗಳು ಡಿಸ್ಚಾರ್ಜ್ ಆದ ಬಳಿಕ ಜ್ವರ, ಕಫ, ಉಸಿರಾಟದ ಸಮಸ್ಯೆ ಎದುರಾದ್ರೆ ಕೊವಿಡ್ ಕೇರ್ ಸೆಂಟರ್ ಅಥವಾ ರಾಜ್ಯದ ಹೆಲ್ಪ್ ಲೈನ್ ಸಂಪರ್ಕ ಮಾಡಬೇಕು.

14ನೇ ದಿನಕ್ಕೆ ಟೆಲಿ ಕಾನ್ಫರೆನ್ಸ್ ಮೂಲಕ ವೈದ್ಯರು ರೋಗಿಯನ್ನ ಸಂಪರ್ಕ ಮಾಡುತ್ತಾರೆ. ಇನ್ನು ಸಾಮಾನ್ಯ ರೋಗಿಗಳನ್ನು ಕೊವಿಡ್ ಹೆಲ್ತ್ ಕೇರ್ ಸೆಂಟರ್ ಗೆ ದಾಖಲು ಮಾಡಬೇಕು. 3 ದಿನ ಶೇ.95ರಷ್ಟು ಸ್ವಂತ ಶಕ್ತಿ ಮೇಲೆ ಉಸಿರಾಡುವಂತಿದ್ರೆ ಈ ರೀತಿಯ ರೋಗಿಗಳನ್ನು ಡಿಸ್ಚಾರ್ಜ್ ಮಾಡಬೇಕು. ಇನ್ನು ಗಂಭೀರ ಸ್ಥಿತಿಯಲ್ಲಿರುವವರಿಗೆ RT-PCR ಪರೀಕ್ಷೆ ಕಡ್ಡಾಯ. RT-PCR ಪರೀಕ್ಷೆಯಲ್ಲಿ ನೆಗೆಟಿವ್ ಬಂದ್ರೆ ಡಿಸ್ಚಾರ್ಜ್ ಮಾಡಬಹುದು.

Published On - 4:43 pm, Sat, 9 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us