AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸೀದಿ, ದೇಗುಲಗಳಲ್ಲಿ ಮೈಕ್ ಬಳಕೆ: ಹೊಸ ಮಾರ್ಗಸೂಚಿ ಹೊರಡಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

ಈದ್ ಮತ್ತು ಅಕ್ಷಯ ತೃತೀಯ ಸೇರಿದಂತೆ ಮುಂಬರುವ ಹಬ್ಬಗಳ ಮುನ್ನ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆದೇಶ ಹೊರಡಿಸಿದ್ದು, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮೈಕ್‌ಗಳನ್ನು ಬಳಸಬಹುದಾದರೂ, ಆವರಣದ ಹೊರಗೆ ಧ್ವನಿ ಕೇಳಬಾರದು ಮತ್ತು ಇತರರಿಗೆ ಅನಾನುಕೂಲತೆಯನ್ನು ಉಂಟುಮಾಡಬಾರದು ಎಂದು ಹೇಳಿದ್ದಾರೆ.

ಮಸೀದಿ, ದೇಗುಲಗಳಲ್ಲಿ ಮೈಕ್ ಬಳಕೆ:  ಹೊಸ ಮಾರ್ಗಸೂಚಿ ಹೊರಡಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
S Chandramohan
| Edited By: |

Updated on: Apr 19, 2022 | 5:40 PM

Share

ದೇಶದಲ್ಲಿ ಈಗ ಮಹಾರಾಷ್ಟ್ರದಿಂದ ಹಿಡಿದು ಕರ್ನಾಟಕದವರೆಗೂ ಮೈಕ್ ಅನ್ನು ಬಳಸಿ ಧಾರ್ಮಿಕ ಘೋಷಣೆ, ಪ್ರವಚನ, ಹನುಮಾನ್ ಚಾಲೀಸಾ ಪಠಣ ವಿವಾದಕ್ಕೆ ಕಾರಣವಾಗಿದೆ. ಹೀಗಾಗಿ ಈಗ ಮುಂದಿನ ದಿನಗಳಲ್ಲಿ ಈದ್ ಹಾಗೂ ಅಕ್ಷಯ ತೃತೀಯ ಹಬ್ಬಗಳು ಬರುತ್ತಿರುವುದರಿಂದ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಮೈಕ್ ಬಳಕೆ ಬಗ್ಗೆ ಹೊಸ ಮಾರ್ಗಸೂಚಿಯನ್ನೇ ಹೊರಡಿಸಿದ್ದಾರೆ. ಅನುಮತಿ ಪಡೆಯದೇ, ಧಾರ್ಮಿಕ ಮೆರವಣಿಗೆ ನಡೆಸದಂತೆ ನಿರ್ಬಂಧ ವಿಧಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಮೈಕ್ ಬಳಕೆಗೆ ಹೊಸ ನಿಯಮ ಜಾರಿ ಈದ್ ಮತ್ತು ಅಕ್ಷಯ ತೃತೀಯ ಸೇರಿದಂತೆ ಮುಂಬರುವ ಹಬ್ಬಗಳ ಮುನ್ನ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆದೇಶ ಹೊರಡಿಸಿದ್ದು, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮೈಕ್‌ಗಳನ್ನು ಬಳಸಬಹುದಾದರೂ, ಆವರಣದ ಹೊರಗೆ ಧ್ವನಿ ಕೇಳಬಾರದು ಮತ್ತು ಇತರರಿಗೆ ಅನಾನುಕೂಲತೆಯನ್ನು ಉಂಟುಮಾಡಬಾರದು ಎಂದು ಹೇಳಿದ್ದಾರೆ.

ಸ್ಥಳೀಯ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳ ರಜೆ ಕ್ಯಾನ್ಸಲ್: ಕಾನೂನು ಮತ್ತು ಸುವ್ಯವಸ್ಥೆ ಕುರಿತ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೊಸ ಸ್ಥಳಗಳಲ್ಲಿ ಮೈಕ್‌ಗಳನ್ನು ಬಳಸದಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. “ಪ್ರತಿಯೊಬ್ಬರಿಗೂ ಅವರವರ ಸ್ವಂತ ಧಾರ್ಮಿಕ ಸಿದ್ಧಾಂತದ ಪ್ರಕಾರ ಅವರವರ ಆರಾಧನಾ ವಿಧಾನವನ್ನು ಅಭ್ಯಾಸ ಮಾಡುವ ಸ್ವಾತಂತ್ರ್ಯವಿದೆ. ಮೈಕ್ರೊಫೋನ್‌ಗಳನ್ನು ಬಳಸಬಹುದು ಆದರೆ ಮೈಕ್ರೊಫೋನ್‌ನಿಂದ ಧ್ವನಿ ಆವರಣದಿಂದ ಹೊರಗೆ ಹೋಗುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು. ಇದರಿಂದ ಇತರರಿಗೆ ತೊಂದರೆಯಾಗಬಾರದು. ಯಾವುದೇ ಹೊಸ ಸ್ಥಳಗಳಲ್ಲಿ ಮೈಕ್ರೊಫೋನ್‌ಗಳನ್ನು ಅಳವಡಿಸಲು ಅನುಮತಿ ನೀಡಬಾರದು,” ಎಂದು ಆದಿತ್ಯನಾಥ್ ಹೇಳಿರುವುದಾಗಿ ಸರಕಾರದ ಪ್ರಕಟಣೆ ತಿಳಿಸಿದೆ.

ಪ್ರಚಲಿತ ಸಂದರ್ಭಗಳ ದೃಷ್ಟಿಯಿಂದ ಪೊಲೀಸರು ಹೆಚ್ಚು ಎಚ್ಚರಿಕೆ ಮತ್ತು ಜಾಗರೂಕರಾಗಿರಬೇಕು. ಸ್ಟೇಷನ್ ಹೌಸ್ ಆಫೀಸರ್‌ಗಳಿಂದ (ಎಸ್‌ಎಚ್‌ಒ) ಎಡಿಜಿ ವರೆಗೆ ಮುಂದಿನ 24 ಗಂಟೆಗಳಲ್ಲಿ ಧಾರ್ಮಿಕ ಮುಖಂಡರು ಮತ್ತು ಸಮಾಜದ ಇತರ ಗಣ್ಯ ವ್ಯಕ್ತಿಗಳೊಂದಿಗೆ ಮಾತನಾಡಬೇಕು ಎಂದು ಹೇಳಿರುವ ಸಿಎಂ ಯೋಗಿ ಆದಿತ್ಯನಾಥ್, ರಾಜ್ಯಕ್ಕೆ ತೊಂದರೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರಸ್ತೆಗಳಲ್ಲಿ ಸಂಚಾರಕ್ಕೆ ಅಡ್ಡಿಯಾಗದಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ನಿಗದಿತ ಸ್ಥಳಗಳಲ್ಲಿ ಆಯೋಜಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ, ಅಧಿಕಾರಿಗಳಿಂದ ಅನುಮತಿ ಪಡೆಯದೆ ಧಾರ್ಮಿಕ ಮೆರವಣಿಗೆಗಳನ್ನು ನಡೆಸಬಾರದು. “ಮೆರವಣಿಗೆಗಳಿಗೆ ಅನುಮತಿ ನೀಡುವ ಮೊದಲು, ಅನುಮತಿ ನೀಡುವ ಪ್ರಾಧಿಕಾರವು ಶಾಂತಿ ಮತ್ತು ಸೌಹಾರ್ದತೆ ಕಾಪಾಡಲು ಸಂಘಟಕರಿಂದ ಅಫಿಡವಿಟ್ ತೆಗೆದುಕೊಳ್ಳಬೇಕು. ಅಲ್ಲದೆ, ಸಾಂಪ್ರದಾಯಿಕ ಮೆರವಣಿಗೆಗಳಿಗೆ ಮಾತ್ರ ಅನುಮತಿ ನೀಡಲಾಗುವುದು… ಯಾವುದೇ ಹೊಸ ಮೆರವಣಿಗೆಗಳಿಗೆ ಅನುಮತಿ ನೀಡಬಾರದು ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ. ಮೇ 4 ರವರೆಗೆ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳ ರಜೆಯನ್ನು ಸರ್ಕಾರ ರದ್ದುಗೊಳಿಸಿದೆ.

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು