AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸೀದಿ, ದೇಗುಲಗಳಲ್ಲಿ ಮೈಕ್ ಬಳಕೆ: ಹೊಸ ಮಾರ್ಗಸೂಚಿ ಹೊರಡಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

ಈದ್ ಮತ್ತು ಅಕ್ಷಯ ತೃತೀಯ ಸೇರಿದಂತೆ ಮುಂಬರುವ ಹಬ್ಬಗಳ ಮುನ್ನ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆದೇಶ ಹೊರಡಿಸಿದ್ದು, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮೈಕ್‌ಗಳನ್ನು ಬಳಸಬಹುದಾದರೂ, ಆವರಣದ ಹೊರಗೆ ಧ್ವನಿ ಕೇಳಬಾರದು ಮತ್ತು ಇತರರಿಗೆ ಅನಾನುಕೂಲತೆಯನ್ನು ಉಂಟುಮಾಡಬಾರದು ಎಂದು ಹೇಳಿದ್ದಾರೆ.

ಮಸೀದಿ, ದೇಗುಲಗಳಲ್ಲಿ ಮೈಕ್ ಬಳಕೆ:  ಹೊಸ ಮಾರ್ಗಸೂಚಿ ಹೊರಡಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
S Chandramohan
| Updated By: ಸಾಧು ಶ್ರೀನಾಥ್​|

Updated on: Apr 19, 2022 | 5:40 PM

Share

ದೇಶದಲ್ಲಿ ಈಗ ಮಹಾರಾಷ್ಟ್ರದಿಂದ ಹಿಡಿದು ಕರ್ನಾಟಕದವರೆಗೂ ಮೈಕ್ ಅನ್ನು ಬಳಸಿ ಧಾರ್ಮಿಕ ಘೋಷಣೆ, ಪ್ರವಚನ, ಹನುಮಾನ್ ಚಾಲೀಸಾ ಪಠಣ ವಿವಾದಕ್ಕೆ ಕಾರಣವಾಗಿದೆ. ಹೀಗಾಗಿ ಈಗ ಮುಂದಿನ ದಿನಗಳಲ್ಲಿ ಈದ್ ಹಾಗೂ ಅಕ್ಷಯ ತೃತೀಯ ಹಬ್ಬಗಳು ಬರುತ್ತಿರುವುದರಿಂದ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಮೈಕ್ ಬಳಕೆ ಬಗ್ಗೆ ಹೊಸ ಮಾರ್ಗಸೂಚಿಯನ್ನೇ ಹೊರಡಿಸಿದ್ದಾರೆ. ಅನುಮತಿ ಪಡೆಯದೇ, ಧಾರ್ಮಿಕ ಮೆರವಣಿಗೆ ನಡೆಸದಂತೆ ನಿರ್ಬಂಧ ವಿಧಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಮೈಕ್ ಬಳಕೆಗೆ ಹೊಸ ನಿಯಮ ಜಾರಿ ಈದ್ ಮತ್ತು ಅಕ್ಷಯ ತೃತೀಯ ಸೇರಿದಂತೆ ಮುಂಬರುವ ಹಬ್ಬಗಳ ಮುನ್ನ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆದೇಶ ಹೊರಡಿಸಿದ್ದು, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮೈಕ್‌ಗಳನ್ನು ಬಳಸಬಹುದಾದರೂ, ಆವರಣದ ಹೊರಗೆ ಧ್ವನಿ ಕೇಳಬಾರದು ಮತ್ತು ಇತರರಿಗೆ ಅನಾನುಕೂಲತೆಯನ್ನು ಉಂಟುಮಾಡಬಾರದು ಎಂದು ಹೇಳಿದ್ದಾರೆ.

ಸ್ಥಳೀಯ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳ ರಜೆ ಕ್ಯಾನ್ಸಲ್: ಕಾನೂನು ಮತ್ತು ಸುವ್ಯವಸ್ಥೆ ಕುರಿತ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೊಸ ಸ್ಥಳಗಳಲ್ಲಿ ಮೈಕ್‌ಗಳನ್ನು ಬಳಸದಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. “ಪ್ರತಿಯೊಬ್ಬರಿಗೂ ಅವರವರ ಸ್ವಂತ ಧಾರ್ಮಿಕ ಸಿದ್ಧಾಂತದ ಪ್ರಕಾರ ಅವರವರ ಆರಾಧನಾ ವಿಧಾನವನ್ನು ಅಭ್ಯಾಸ ಮಾಡುವ ಸ್ವಾತಂತ್ರ್ಯವಿದೆ. ಮೈಕ್ರೊಫೋನ್‌ಗಳನ್ನು ಬಳಸಬಹುದು ಆದರೆ ಮೈಕ್ರೊಫೋನ್‌ನಿಂದ ಧ್ವನಿ ಆವರಣದಿಂದ ಹೊರಗೆ ಹೋಗುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು. ಇದರಿಂದ ಇತರರಿಗೆ ತೊಂದರೆಯಾಗಬಾರದು. ಯಾವುದೇ ಹೊಸ ಸ್ಥಳಗಳಲ್ಲಿ ಮೈಕ್ರೊಫೋನ್‌ಗಳನ್ನು ಅಳವಡಿಸಲು ಅನುಮತಿ ನೀಡಬಾರದು,” ಎಂದು ಆದಿತ್ಯನಾಥ್ ಹೇಳಿರುವುದಾಗಿ ಸರಕಾರದ ಪ್ರಕಟಣೆ ತಿಳಿಸಿದೆ.

ಪ್ರಚಲಿತ ಸಂದರ್ಭಗಳ ದೃಷ್ಟಿಯಿಂದ ಪೊಲೀಸರು ಹೆಚ್ಚು ಎಚ್ಚರಿಕೆ ಮತ್ತು ಜಾಗರೂಕರಾಗಿರಬೇಕು. ಸ್ಟೇಷನ್ ಹೌಸ್ ಆಫೀಸರ್‌ಗಳಿಂದ (ಎಸ್‌ಎಚ್‌ಒ) ಎಡಿಜಿ ವರೆಗೆ ಮುಂದಿನ 24 ಗಂಟೆಗಳಲ್ಲಿ ಧಾರ್ಮಿಕ ಮುಖಂಡರು ಮತ್ತು ಸಮಾಜದ ಇತರ ಗಣ್ಯ ವ್ಯಕ್ತಿಗಳೊಂದಿಗೆ ಮಾತನಾಡಬೇಕು ಎಂದು ಹೇಳಿರುವ ಸಿಎಂ ಯೋಗಿ ಆದಿತ್ಯನಾಥ್, ರಾಜ್ಯಕ್ಕೆ ತೊಂದರೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರಸ್ತೆಗಳಲ್ಲಿ ಸಂಚಾರಕ್ಕೆ ಅಡ್ಡಿಯಾಗದಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ನಿಗದಿತ ಸ್ಥಳಗಳಲ್ಲಿ ಆಯೋಜಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ, ಅಧಿಕಾರಿಗಳಿಂದ ಅನುಮತಿ ಪಡೆಯದೆ ಧಾರ್ಮಿಕ ಮೆರವಣಿಗೆಗಳನ್ನು ನಡೆಸಬಾರದು. “ಮೆರವಣಿಗೆಗಳಿಗೆ ಅನುಮತಿ ನೀಡುವ ಮೊದಲು, ಅನುಮತಿ ನೀಡುವ ಪ್ರಾಧಿಕಾರವು ಶಾಂತಿ ಮತ್ತು ಸೌಹಾರ್ದತೆ ಕಾಪಾಡಲು ಸಂಘಟಕರಿಂದ ಅಫಿಡವಿಟ್ ತೆಗೆದುಕೊಳ್ಳಬೇಕು. ಅಲ್ಲದೆ, ಸಾಂಪ್ರದಾಯಿಕ ಮೆರವಣಿಗೆಗಳಿಗೆ ಮಾತ್ರ ಅನುಮತಿ ನೀಡಲಾಗುವುದು… ಯಾವುದೇ ಹೊಸ ಮೆರವಣಿಗೆಗಳಿಗೆ ಅನುಮತಿ ನೀಡಬಾರದು ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ. ಮೇ 4 ರವರೆಗೆ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳ ರಜೆಯನ್ನು ಸರ್ಕಾರ ರದ್ದುಗೊಳಿಸಿದೆ.

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?