ಮೋದಿ ವಿರುದ್ಧ ಬಿಲಾವಲ್ ಭುಟ್ಟೋ ಆಕ್ಷೇಪಾರ್ಹ ಹೇಳಿಕೆಗೆ ಖಂಡನೆ; ಪಾಕ್ ಅತ್ಯಂತ ಕೆಳಮಟ್ಟಕ್ಕೆ ಇಳಿದಿದೆ ಎಂದ ಭಾರತ

Bilawal Bhutto ಪಾಕಿಸ್ತಾನವು ಒಸಾಮಾ ಬಿನ್ ಲಾಡೆನ್ ಅನ್ನು ಹುತಾತ್ಮ ಎಂದು ವೈಭವೀಕರಿಸುವ, ಲಖ್ವಿ, ಹಫೀಜ್ ಸಯೀದ್, ಮಸೂದ್ ಅಜರ್, ಸಾಜಿದ್ ಮಿರ್ ಮತ್ತು ದಾವೂದ್ ಇಬ್ರಾಹಿಂ ಅವರಂತಹ ಭಯೋತ್ಪಾದಕರಿಗೆ ಆಶ್ರಯ ನೀಡುವ ದೇಶವಾಗಿದೆ

ಮೋದಿ ವಿರುದ್ಧ ಬಿಲಾವಲ್ ಭುಟ್ಟೋ ಆಕ್ಷೇಪಾರ್ಹ ಹೇಳಿಕೆಗೆ ಖಂಡನೆ; ಪಾಕ್ ಅತ್ಯಂತ ಕೆಳಮಟ್ಟಕ್ಕೆ ಇಳಿದಿದೆ ಎಂದ ಭಾರತ
ಬಿಲಾವಲ್ ಭುಟ್ಟೋ ಜರ್ದಾರಿ
Follow us
| Updated By: ರಶ್ಮಿ ಕಲ್ಲಕಟ್ಟ

Updated on:Dec 16, 2022 | 8:31 PM

ದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಮೇಲಿನ ವೈಯಕ್ತಿಕ ದಾಳಿ ಮಾಡಿರುವ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಜರ್ದಾರಿ (Bilawal Bhutto Zardari)  ವಿರುದ್ಧ ಭಾರತ ಇಂದು ಸಿಡಿದೆದ್ದು ಪಾಕಿಸ್ತಾನ (Pakistan) ಅತ್ಯಂತ ಕೆಳಮಟ್ಟಕ್ಕೆ ಇಳಿದಿದೆ ಎಂದು ಹೇಳಿದೆ. ಪಾಕಿಸ್ತಾನವು ಒಸಾಮಾ ಬಿನ್ ಲಾಡೆನ್ ಅನ್ನು ಹುತಾತ್ಮ ಎಂದು ವೈಭವೀಕರಿಸುವ, ಲಖ್ವಿ, ಹಫೀಜ್ ಸಯೀದ್, ಮಸೂದ್ ಅಜರ್, ಸಾಜಿದ್ ಮಿರ್ ಮತ್ತು ದಾವೂದ್ ಇಬ್ರಾಹಿಂ ಅವರಂತಹ ಭಯೋತ್ಪಾದಕರಿಗೆ ಆಶ್ರಯ ನೀಡುವ ದೇಶವಾಗಿದೆ. ವಿಶ್ವಸಂಸ್ಥೆ ಹೆಸರಿಸಿದ 126ಭಯೋತ್ಪಾದಕರು ಮತ್ತು 27 ಭಯೋತ್ಪಾದಕ ಘಟಕಗಳನ್ನು ಹೊಂದಿರುವ ದೇಶ ಅದು ಎಂದು ಪಾಕಿಸ್ತಾನದ ವಿದೇಶಾಂಗ ಸಚಿವರ ಹೇಳಿಕೆ ಖಂಡಿಸಿ ಭಾರತ ಖಾರವಾಗಿಯೇ ಪ್ರತಿಕ್ರಿಯಿಸಿದೆ.ಪಾಕಿಸ್ತಾನದ ವಿದೇಶಾಂಗ ಸಚಿವರು ನಿನ್ನೆ (ಗುರುವಾರ) ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಅಜ್ಮಲ್ ಕಸಬ್‌ನ ಗುಂಡುಗಳಿಂದ 20 ಗರ್ಭಿಣಿಯರನ್ನು ರಕ್ಷಿಸಿದ ಮುಂಬೈ ನರ್ಸ್ ಅಂಜಲಿ ಕುಲ್ತೆ ಅವರ ಸಾಕ್ಷ್ಯವನ್ನು ಹೆಚ್ಚು ಪ್ರಾಮಾಣಿಕವಾಗಿ ಆಲಿಸಿರಬೇಕಿತ್ತು ಎಂದು ನಾವು ಬಯಸುತ್ತೇವೆ. ಸ್ಪಷ್ಟವಾಗಿ, ವಿದೇಶಾಂಗ ಸಚಿವರು ಪಾಕಿಸ್ತಾನದ ಪಾತ್ರ ಏನೂ ಇಲ್ಲ ಎಂದು ತೋರಿಸುವುದರಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದರು. ಪಾಕಿಸ್ತಾನದ ವಿದೇಶಾಂಗ ಸಚಿವರ  ಹತಾಶೆಯು ಭಯೋತ್ಪಾದನೆಯನ್ನು ತಮ್ಮ ರಾಜ್ಯ ನೀತಿಯ ಭಾಗವನ್ನಾಗಿ ಮಾಡಿಕೊಂಡಿರುವ ತನ್ನದೇ ದೇಶದ ಭಯೋತ್ಪಾದಕ ಉದ್ಯಮಗಳ ಮಾಸ್ಟರ್‌ಮೈಂಡ್‌ಗಳ ಕಡೆಗೆ ಉತ್ತಮವಾಗಿ ನಿರ್ದೇಶಿಸಲ್ಪಡುತ್ತದೆ .ಪಾಕಿಸ್ತಾನ ತನ್ನದೇ ಆದ ಮನಸ್ಥಿತಿಯನ್ನು ಬದಲಾಯಿಸಬೇಕು ಅಥವಾ ದೂರವೇ ಉಳಿಯಬೇಕು ಎಂದು ಭಾರತ ಹೇಳಿದೆ.

ಬಿಲಾವಲ್ ಭುಟ್ಟೊ ಅವರ ಹೇಳಿಕೆ ಖಂಡಿಸಿದ ಕಿರಿಯ ವಿದೇಶಾಂಗ ಸಚಿವೆ ಮೀನಾಕ್ಷಿ ಲೇಖಿ ಪಾಕಿಸ್ತಾನದ ವಿದೇಶಾಂಗ ಸಚಿವರು ಬಳಸುವ ಭಾಷೆ ಅವರು ದಿವಾಳಿಯಾದ ದೇಶವನ್ನು ಪ್ರತಿನಿಧಿಸುವುದು ಮಾತ್ರವಲ್ಲ, ಮಾನಸಿಕವಾಗಿಯೂ ದಿವಾಳಿಯಾಗಿದ್ದಾರೆ ಎಂಬುದನ್ನು ತೋರಿಸುತ್ತದೆ ಎಂದಿದ್ದಾರೆ.

ಭಾರತ ಪಾಕಿಸ್ತಾನವನ್ನು “ಭಯೋತ್ಪಾದನೆಯ ಕೇಂದ್ರ” ಎಂದು ಕರೆದಿದ್ದಕ್ಕೆ ಪ್ರತಿಕ್ರಿಯಿಸಿದ್ದ ಪಾಕ್ ಸಚಿವ ಬಿಲಾವಲ್ ಭುಟ್ಟೋ, ಒಸಾಮಾ ಬಿನ್ ಲಾಡೆನ್ ಸತ್ತಿದ್ದಾನೆ, ಆದರೆ ಗುಜರಾತ್‌ನ ಕಟುಕ ಬದುಕಿದ್ದಾನೆ ಎಂದಿದ್ದರು.

ಇದನ್ನೂ ಓದಿ: ಭಾರತದ ಟೀಕೆಗೆ ಪ್ರತಿಕ್ರಿಯೆಯಾಗಿ ಮೋದಿ ವಿರುದ್ಧ ವೈಯಕ್ತಿಕ ದಾಳಿ ಮಾಡಿದ ಪಾಕ್ ವಿದೇಶಾಂಗ ಸಚಿವ

ಒಬ್ಬರ ಹುದ್ದೆಯಿಂದ ಜವಾಬ್ದಾರಿ ಬರುವುದಿಲ್ಲ, ಜವಾಬ್ದಾರಿಯು ವ್ಯಕ್ತಿಯ ಪಾತ್ರದ ಒಂದು ಭಾಗವಾಗಿದೆ, ಅನೇಕ ಜನರು ಯಾವುದೇ ಹುದ್ದೆಯಿಲ್ಲದೆ ಜವಾಬ್ದಾರಿಯುತವಾಗಿ ಮಾತನಾಡುತ್ತಾರೆ. ಅನೇಕರು ಹುದ್ದೆಗಳನ್ನು ಹೊಂದಿದ್ದರೂ ಬೇಜವಾಬ್ದಾರಿಯಿಂದ ಮಾತನಾಡುತ್ತಾರೆ.ಅವರು ವಿಫಲ ರಾಜ್ಯದ ಪ್ರತಿನಿಧಿ ಮತ್ತು ಸ್ವತಃ ವಿಫಲರಾಗಿದ್ದಾರೆ, ಆದ್ದರಿಂದ ಪಾಕಿಸ್ತಾನವೂ ವಿಫಲವಾಗಿದೆ, ಭಯೋತ್ಪಾದಕ ಮನಸ್ಥಿತಿ ಹೊಂದಿರುವವರಿಂದ ನೀವು ಏನನ್ನು ನಿರೀಕ್ಷಿಸಬಹುದು? ಎಂದಿದ್ದಾರೆ ಲೇಖಿ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರು ಭುಟ್ಟೋ ಹೇಳಿಕೆಯನ್ನು “ನಾಚಿಕೆಗೇಡು” ಎಂದಿದ್ದಾರೆ. “ಬಹುಶಃ ಅವರು (ಪಾಕಿಸ್ತಾನ) 1971 ರ ನೋವನ್ನು ಇನ್ನೂ ಅನುಭವಿಸುತ್ತಿದ್ದಾರೆ. ಅವರ ಅಜ್ಜ (ಜುಲ್ಫಿಕರ್ ಅಲಿ ಭುಟ್ಟೊ, ಪಾಕಿಸ್ತಾನದ ಮಾಜಿ ಅಧ್ಯಕ್ಷ) ಅವರು ಸೋತಾಗ ಕಣ್ಣೀರು ಹಾಕಿದರು. ಪಾಕಿಸ್ತಾನದ ಮಣ್ಣನ್ನು ಭಯೋತ್ಪಾದನೆಯನ್ನು ಪೋಷಿಸಲು ಮತ್ತು ರಕ್ಷಿಸಲು ಬಳಸಲಾಗಿದೆ. ಅವರ ನೀಚ ಯೋಜನೆಗಳನ್ನು ಜಗತ್ತಿಗೆ ಬಹಿರಂಗಪಡಿಸಲಾಗಿದೆ ಎಂದು ಠಾಕೂರ್ ಹೇಳಿದ್ದಾರೆ.

ಭುಟ್ಟೋ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಬಿಜೆಪಿ ಕರೆ

ಆಡಳಿತಾರೂಢ ಬಿಜೆಪಿ ಶನಿವಾರ ಪಾಕಿಸ್ತಾನ ಮತ್ತು ಅದರ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗಳನ್ನು ನಡೆಸಲಿದ್ದು, ಪ್ರತಿಕೃತಿಗಳನ್ನು ಸುಡಲಿದೆ. ರಾಜ್ಯ ರಾಜಧಾನಿಗಳಲ್ಲಿ ಬಿಜೆಪಿ ಪಾಕ್ ವಿರುದ್ಧ ಪ್ರತಿಭಟನೆ ನಡೆಸಲಿದೆ. ಭುಟ್ಟೊ ಅವರ ಹೇಳಿಕೆಗಳನ್ನು ಟೀಕಿಸಿದ ಬಿಜೆಪಿ, ಪಾಕ್ ಸಚಿವರ ಹೇಳಿಕೆ ಖಂಡನೀಯ. ಈ ಟೀಕೆ ಜಾಗತಿಕ ವೇದಿಕೆಯಲ್ಲಿ ಪಾಕಿಸ್ತಾನದ ಇಮೇಜ್ ಅನ್ನು ಮತ್ತಷ್ಟು ಕಡಿಮೆ ಮಾಡಿದೆ. ಭಾರತದ ತ್ರಿವರ್ಣ ಧ್ವಜದ ರಕ್ಷಣೆಯಲ್ಲಿ ತಮ್ಮ ವಿದ್ಯಾರ್ಥಿಗಳನ್ನು ಯುದ್ಧ ಪೀಡಿತ ಉಕ್ರೇನ್‌ನಿಂದ ಸ್ಥಳಾಂತರಿಸಲಾಗಿದೆ ಎಂಬುದನ್ನು ಪಾಕಿಸ್ತಾನ ಮರೆಯಬಾರದು. ಭುಟ್ಟೊ ಅವರ ಹೇಳಿಕೆ ಅತ್ಯಂತ ಅವಹೇಳನಕಾರಿ ಮತ್ತು ಮಾನಹಾನಿಕರ ಎಂದು ಬಿಜೆಪಿ ಟೀಕಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:51 pm, Fri, 16 December 22

ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
Nithya Bhavishya: ನವರಾತ್ರಿಯ ಐದನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಐದನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ನವರಾತ್ರಿ ಐದನೇ ದಿನ ಸ್ಕಂದ ಮಾತೆಯ ಆರಾಧನೆ ಮಹತ್ವ ತಿಳಿಯಿರಿ
ನವರಾತ್ರಿ ಐದನೇ ದಿನ ಸ್ಕಂದ ಮಾತೆಯ ಆರಾಧನೆ ಮಹತ್ವ ತಿಳಿಯಿರಿ
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ