AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾ ವಿಕಾಸ್ ಅಘಾಡಿಯ ನೂತನ ಶಾಸಕರು ಇಂದು ಪ್ರಮಾಣ ವಚನ ಸ್ವೀಕರಿಸುವುದಿಲ್ಲ: ಆದಿತ್ಯ ಠಾಕ್ರೆ

ನಮಗೆ ಇವಿಎಂ ಬಗ್ಗೆ ಅನುಮಾನ ಇದೆ, ಹಾಗಾಗಿ ಇಂದು ನಮ್ಮ ಮಹಾ ವಿಕಾಸ್ ಅಘಾಡಿ ನೂತನ ಶಾಸಕರು ಪ್ರಮಾಣ ವಚನ ಸ್ವೀಕರಿಸುವುದಿಲ್ಲ. ಇಂದು ಇವಿಎಂನಲ್ಲಿ ನಡೆದ ಮೋಸದ ಬಗ್ಗೆ ಪ್ರತಿಭಟನೆ ಮಾಡುತ್ತೇವೆ. ಯಾವುದೇ ಕಾರಣಕ್ಕೂ ನಮ್ಮ ಶಾಸಕರು ಪ್ರಮಾಣ ವಚನದಲ್ಲಿ ಭಾಗಿಯಾಗುವುದಿಲ್ಲ. ಇಂದು ಮಹಾರಾಷ್ಟ್ರದಲ್ಲಿ ವಿಶೇಷ ವಿಧಾನಸಭೆ ಅಧಿವೇಶನ ಕರೆಯಲಾಗಿದೆ. ಈ ವೇಳೆ ನೂತನ ಶಾಸಕರು ಪ್ರಮಾಣ ವಚನ, ನೂತನ ಸ್ಪೀಕರ್​​​ ನೇಮಕ, ರಾಜ್ಯಪಾಲರ ಭಾಷಣ ನಡೆಯಲಿದೆ. ಇದರ ಮಧ್ಯೆ ಮಹಾ ವಿಕಾಸ್ ಅಘಾಡಿ ಈ ನಿರ್ಧಾರವನ್ನು ತೆಗೆದುಕೊಂಡಿದೆ.

ಮಹಾ ವಿಕಾಸ್ ಅಘಾಡಿಯ ನೂತನ ಶಾಸಕರು ಇಂದು ಪ್ರಮಾಣ ವಚನ ಸ್ವೀಕರಿಸುವುದಿಲ್ಲ: ಆದಿತ್ಯ ಠಾಕ್ರೆ
ಸಾಂದರ್ಭಿಕ ಚಿತ್ರ ( ಮಹಾ ವಿಕಾಸ್ ಅಘಾಡಿ)
ಅಕ್ಷಯ್​ ಪಲ್ಲಮಜಲು​​
|

Updated on: Dec 07, 2024 | 12:55 PM

Share

ಮುಂಬೈ, ಡಿ.7: ಇಂದು ಯಾವುದೇ ಕಾರಣಕ್ಕೂ ಮಹಾ ವಿಕಾಸ್ ಅಘಾಡಿ (ಎಂವಿಎ)ಯ ನೂತನ ಶಾಸಕರು ಪ್ರಮಾಣವಚನ ಸ್ವೀಕಾರ ಮಾಡುವುದಿಲ್ಲ ಎಂದು ನಿರ್ಧಾರ ಮಾಡಿದ್ದಾರೆ. ಈ ಮೂಲಕ ವಿಧಾನಸಭೆಯ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಬಹಿಷ್ಕರಿಸಲಿದ್ದಾರೆ. ಈ ಬಗ್ಗೆ ಶಿವಸೇನಾ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಇಂದು ಹೇಳಿದ್ದಾರೆ. ಮತಯಂತ್ರಗಳನ್ನು (ಇವಿಎಂ) ಟ್ಯಾಂಪರಿಂಗ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಇದು ಜನರಿಂದ ಬಂದ ತೀರ್ಪು ಅಲ್ಲ. ಇಲ್ಲಿ ಮಹಾ ಮೋಸ ನಡೆದಿದೆ. ಆ ಕಾರಣದಿಂದ ನಮ್ಮ ಮಹಾ ವಿಕಾಸ್ ಅಘಾಡಿ ಯಾವ ಶಾಸಕರು ಕೂಡ ಪ್ರಮಾಣವಚನ ಸ್ವೀಕಾರ ಮಾಡುವುದಿಲ್ಲ ಎಂದು ಹೇಳಿದರು.

ಇಂದು ನಮ್ಮ ನೂತನ ಶಾಸಕರು ಪ್ರಮಾಣ ವಚನ ಸ್ವೀಕಾರಿಸುವುದಿಲ್ಲ, ಇಎಂವಿ ಬಗ್ಗೆ ನಮಗೆ ಅನುಮಾನವಿದೆ. ಈ ಬಗ್ಗೆ ನಾವು ಪ್ರತಿಭಟನೆ ಮಾಡುತ್ತವೆ. ಆ ಕಾರಣದಿಂದ ನಮ್ಮ ಶಾಸಕರು ಇಂದು ಪ್ರಮಾಣ ವಚನ ಸ್ವೀಕರ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ. ವಿಧಾನಸಭೆಯ ವಿಶೇಷ ಮೂರು ದಿನಗಳ ಅಧಿವೇಶನದ ನಡೆಯಲಿದೆ. ಈ ಸಮಯದಲ್ಲಿ  ಮಹಾ ವಿಕಾಸ್ ಅಘಾಡಿ ಈ ನಿರ್ಧಾರವನ್ನು ತೆಗೆದುಕೊಂಡಿದೆ.

ಇದನ್ನೂಓದಿ: ಬ್ಯಾಲೆಟ್ ಪೇಪರ್ ಮತದಾನ ಬೇಕು ಎಂಬ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ, ಕಾಂಗ್ರೆಸ್​​​ಗೆ ಶಾಕ್

ಹಂಗಾಮಿ ಸ್ಪೀಕರ್ ಕಾಳಿದಾಸ್ ಕೊಳಂಬ್ಕರ್ ಅವರ ಮೇಲ್ವಿಚಾರಣೆಯ ಅಧಿವೇಶನದಲ್ಲಿ ಶಾಸಕರಿಗೆ ಪ್ರಮಾಣವಚನ, ವಿಧಾನಸಭಾ ಸ್ಪೀಕರ್ ಆಯ್ಕೆ, ಹೊಸ ಸರ್ಕಾರಕ್ಕೆ ವಿಶ್ವಾಸ ಮತ ಮತ್ತು ರಾಜ್ಯಪಾಲರ ಭಾಷಣ ನಡೆಯಲಿದೆ. ಬಿಜೆಪಿಯ ಹಿರಿಯ ಶಾಸಕ ಕೊಲಂಬ್ಕರ್ ಅವರನ್ನು ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಹಂಗಾಮಿ ಸ್ಪೀಕರ್ ಆಗಿ ನೇಮಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!