AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಬರಿ ಬದಲು ಹೊಸ ಮಸೀದಿ: ನಿರ್ಮಾಣದ ಹೊಣೆ ಹೊತ್ತ ಬಿಜೆಪಿ ನಾಯಕ

ರಾಮಮಂದಿರ ನಿರ್ಮಾಣ ಪೂರ್ಣಗೊಳುತ್ತಿರುವ ವೇಳೆಯಲ್ಲಿ ವಿವಾದಿತ ಬಾಬರಿ ಮಸೀದಿಗೆ ನೀಡಿದ ಸ್ಥಳದಲ್ಲಿ ಹೊಸದಾಗಿ ಮಸೀದಿ ನಿರ್ಮಾಣದ ಹೊಣೆಯನ್ನು ಬಿಜೆಪಿ ನಾಯಕನಿಗೆ ನೀಡಲಾಗಿದೆ. ಸುಪ್ರೀಂ ಕೋರ್ಟ್​​​​​​ ಆದೇಶದ ನಂತರ ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಕೆಡವಿ. ಮಸೀದಿ ನಿರ್ಮಾಣಕ್ಕೆ ಬೇರೆ ಸ್ಥಳವನ್ನು ನೀಡಲಾಗಿತ್ತು.

ಬಾಬರಿ ಬದಲು ಹೊಸ ಮಸೀದಿ: ನಿರ್ಮಾಣದ ಹೊಣೆ ಹೊತ್ತ ಬಿಜೆಪಿ ನಾಯಕ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Dec 18, 2023 | 3:01 PM

Share

ದೆಹಲಿ, ಡಿ.18: ರಾಮಮಂದಿರ (Ram Mandir) ನಿರ್ಮಾಣ ಪೂರ್ಣಗೊಳುತ್ತಿರುವ ವೇಳೆಯಲ್ಲಿ ವಿವಾದಿತ ಬಾಬರಿ ಮಸೀದಿಗೆ (Babri mosque) ನೀಡಿದ ಸ್ಥಳದಲ್ಲಿ ಹೊಸದಾಗಿ ಮಸೀದಿ ನಿರ್ಮಾಣದ ಹೊಣೆಯನ್ನು ಬಿಜೆಪಿ ನಾಯಕನಿಗೆ ನೀಡಲಾಗಿದೆ. ಸುಪ್ರೀಂ ಕೋರ್ಟ್​​​​​​ ಆದೇಶದ ನಂತರ ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಕೆಡವಿ. ಮಸೀದಿ ನಿರ್ಮಾಣಕ್ಕೆ ಬೇರೆ ಸ್ಥಳವನ್ನು ನೀಡಲಾಗಿತ್ತು. ಇದೀಗ ಬಾಬರಿ ಮಸೀದಿಯ ನಿರ್ಮಾಣದ ಜವಾಬ್ದಾರಿಯನ್ನು ಮುಂಬೈನ ಹಾಜಿ ಅರಾಫತ್ ಶೇಖ್ ಅವರಿಗೆ ನೀಡಲಾಗಿದೆ. ಹಾಜಿ ಅರಾಫತ್ ಶೇಖ್ ಬಿಜೆಪಿ ನಾಯಕ ಮತ್ತು ಮಹಾರಾಷ್ಟ್ರ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷರು.

ಇವರು ಅನೇಕ ಸಾಮಾಜಿಕ ಕಾರ್ಯಕ್ರಮಗಳಲ್ಲಿ ತಮ್ಮನ್ನು ಸೇರಿಸಿಕೊಂಡಿದ್ದಾರೆ. ಹಾಗೂ ಇಸ್ಲಾಂ ಧರ್ಮಕ್ಕೆ ಇವರ ಕೊಡುಗೆ ಮಹತ್ತರವಾದ್ದದು. ಬಾಬರಿ ಮಸೀದಿಯನ್ನು ಅಯೋಧ್ಯೆಯ ಧನ್ನಿಪುರಗೆ ಸ್ಥಳಾಂತರಿಸಿದ ನಂತರ 2023 ಅಕ್ಟೋಬರ್​​ನಲ್ಲಿ ಈ ಮಸೀದಿಗೆ ಪ್ರವಾದಿ ‘ಮುಹಮ್ಮದ್ ಬಿನ್ ಅಬ್ದುಲ್ಲಾ ಮಸೀದಿ’ ಎಂದು ಹೆಸರಿಸಲು ಅಖಿಲ ಭಾರತ ರಬ್ತಾ-ಎ-ಮಸ್ಜಿದ್ ಸೂಚಿಸಿತ್ತು.

ಇದೀಗ ಉತ್ತರ ಪ್ರದೇಶ ಸುನ್ನಿ ಮಂಡಳಿಯ ಅಧ್ಯಕ್ಷ ಜಾಫರ್ ಫಾರೂಕಿ ಅವರು ಹಾಜಿ ಅರಾಫತ್ ಅವರನ್ನು ಮಸೀದಿ ನಿರ್ಮಾಣದ ಮೇಲ್ವಿಚಾರಣೆಯ ಅಭಿವೃದ್ಧಿ ಸಮಿತಿಯ ಮುಖ್ಯಸ್ಥರನ್ನಾಗಿ ಮಾಡಲು ನಿರ್ಧರಿಸಿದ್ದಾರೆ. ಅಬ್ದುಲ್ಲಾ ಇಬ್ನ್ ಕಮರ್, ಡಾ. ಅಬಿದ್ ಸೈಯದ್, ಮೌಲಾನಾ ಮುಹಮ್ಮದ್ ಮದನಿ ಅಬ್ದುಲ್ ರಬ್ ಅವರ ಉಪಸ್ಥಿತಿಯಲ್ಲಿ ಇವರನ್ನು ನೇಮಕ ಮಾಡಲಾಗಿದೆ.

ಮಸೀದಿ ನಿರ್ಮಾಣ ಹೊಣೆಯನ್ನು ನನಗೆ ನೀಡಿರುವುದು, ತುಂಬಾ ಖುಷಿ ಇದೆ. ಈ ಕಾರ್ಯಕ್ಕೆ ನನ್ನ ಕೈಯಲಾದ ಸಹಾಯವನ್ನು ಮಾಡುತ್ತೇನೆ ಹಾಗೂ ವಿಶ್ವಕ್ಕೆ ಮಾದರಿಯಾಗುವಂತೆ ಇದರ ಅಭಿವೃದ್ಧಿಯನ್ನು ಮಾಡುವೆ, ಇದರ ಜತೆಗೆ ಮುಸ್ಲಿಂ ಸಮುದಾಯದ ಅಭಿವೃದ್ಧಿ ಕೂಡ ನಡೆಯುತ್ತದೆ ಎಂದು ಹೇಳಿದ್ದಾರೆ. ಹಲವು ವರ್ಷಗಳಿಂದ ಈ ಬಗ್ಗೆ ಚರ್ಚೆಯಲ್ಲಿ ಇತ್ತು. ಇದೀಗ ಈ ಸಮಸ್ಯೆಯನ್ನು ಪರಿಹಾರಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ:ಬಾಬರಿ ಮಸೀದಿ ಧ್ವಂಸಕ್ಕೆ 29 ವರ್ಷ, 1992 ಡಿಸೆಂಬರ್ 6ರಂದು ಅಲ್ಲಿ ನಡೆದದ್ದೇನು?

ಇದು ದೇವರ ಇಚ್ಛೆ, ನಾನು ಖಂಡಿತವಾಗಿಯೂ ಈ ಮಸೀದಿಯನ್ನು ಪೂರ್ಣಗೊಳಿಸುತ್ತೇನೆ. ಈ ಉದಾತ್ತ ಕಾರ್ಯದಲ್ಲಿ, ನಾನು ದೇಶದ ಎಲ್ಲಾ ಧರ್ಮ ಮತ್ತು ಪ್ರತಿಯೊಂದು ಪ್ರದೇಶದ ಎಲ್ಲಾ ಧಾರ್ಮಿಕ ವಿದ್ವಾಂಸರು, ಧಾರ್ಮಿಕ ಮುಖಂಡರು, ಇಸ್ಲಾಮಿಕ್ ವಿದ್ವಾಂಸರ ಸಹಾಯವನ್ನು ತೆಗೆದುಕೊಳ್ಳುತ್ತೇನೆ. ಎಲ್ಲಾ ಶರಿಯತ್ ಅಂಶಗಳನ್ನು ಪಾಲಿಸಿ ಇದರ ನಿರ್ಮಾಣವನ್ನು ಪೂರ್ಣಗೊಳಿಸುತ್ತೇನೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ