AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಸಂಸತ್ ಭವನವು ಆತ್ಮನಿರ್ಭರ ಭಾರತದ ಗುಡಿಯಾಗಲಿದೆ: ಓಮ್ ಬಿರ್ಲಾ

2022 ರ ಹೊತ್ತಿಗೆ ತಯಾರಾಗಲಿರುವ ಹೊಸ ಸಂಸತ್ ಭವನದ ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಗುರುವಾರದಂದು ನೆರವೇರಿಸಲಿದ್ದು, ಒಟ್ಟು 11,000 ಕಾರ್ಮಿಕರು ಇದರ ನಿರ್ಮಾಣ ಕಾರ್ಯದಲ್ಲಿ ತೊಡಗಲಿದ್ದಾರೆ.

ಹೊಸ ಸಂಸತ್ ಭವನವು ಆತ್ಮನಿರ್ಭರ ಭಾರತದ ಗುಡಿಯಾಗಲಿದೆ: ಓಮ್ ಬಿರ್ಲಾ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ| Edited By: |

Updated on:Dec 10, 2020 | 11:59 AM

Share

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಓಮ್ ಬಿರ್ಲಾ

ಡಿಸೆಂಬರ್ 10ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಲಿರುವ ಹೊಸ ಸಂಸತ್ ಭವನದ ಕಟ್ಟಡವು ಆತ್ಮನಿರ್ಭರ ಭಾರತದ ಗುಡಿಯಾಗಲಿದೆಯೆಂದು ಲೋಕಸಭೆಯ ಸ್ಪೀಕರ್ ಓಮ್ ಬಿರ್ಲಾ ಹೇಳಿದ್ದಾರೆ.

ನವದೆಹಲಿಯಲ್ಲಿ ಸುದ್ದಿಸಂಸ್ಥೆಯೊಂದರ ಜತೆ ಮಾತಾಡಿದ ಬಿರ್ಲಾ ಆವರು, ‘‘ ಈಗಿನ ಪಾರ್ಲಿಮೆಂಟ್ ಭವನಕ್ಕಿಂತ 17,000 ಚದರ ಮೀಟರ್​ಗಳಷ್ಟು ದೊಡ್ಡದಾಗಿರುವ ಈ ಹೊಸ ಸಂಸತ್ ಭವನವು ಭಾರತದ ವೈವಿಧ್ಯತೆಯನ್ನು ಬಿಂಬಿಸುವ ಆತ್ಮನಿರ್ಭರ ಭಾರತದ ದೇವಸ್ಥಾನವೆನಿಸಿಕೊಳ್ಳಲಿದೆ,’’ ಎಂದರು.

ಕಟ್ಟಡದ ನಿರ್ಮಾಣ ಕಾರ್ಯದಲ್ಲಿ 11,000 ಜನ ತೊಡಗಲಿದ್ದಾರೆ ಎಂದು ಹೇಳಿದ ಲೋಕಸಭಾಧ್ಯಕ್ಷ, ‘‘ಈ ಬೃಹತ್ ರಚನೆಯು ಭೂಕಂಪ ನಿರೋಧಕವಾಗಿರಲಿದೆ, ನಿರ್ಮಾಣದ ಗುತ್ತಿಗೆಯನ್ನು ಸೆಪ್ಟೆಂಬರ್ 29ರಂದು ಟಾಟಾ ಪ್ರಾಜೆಕ್ಟ್ಸ್ ಸಂಸ್ಥೆಗೆ ನೀಡಲಾಗಿದೆ,’’ ಎಂದರು.

ಸುಮಾರು 971 ಕೋಟಿ ರೂಪಾಯಿ ವೆಚ್ಚದಲ್ಲಿ ಕಟ್ಟಲಾಗುತ್ತಿರುವ ಹೊಸ ಸಂಸತ್ ಭವನದ ಒಟ್ಟು ವಿಸ್ತೀರ್ಣ64,000 ಚದರ ಮೀಟರ್​ಗಳಷ್ಟಿದೆ ಮತ್ತು ಅದರ ನಿರ್ಮಾಣ ಕಾರ್ಯ ಮುಗಿದ ನಂತರ 1,224 ಸದಸ್ಯರನ್ನೊಳಗೊಂಡ ಸಂಸತ್ ಕಲಾಪಗಳು ಅದರಲ್ಲಿ ನಡೆಯಲಿವೆಯೆಂದು ಬಿರ್ಲಾ ಹೇಳಿದರು.

ಸಂಸತ್ತಿನ ಎರಡೂ ಮನೆಗಳ ಸಂಸದರಿಗಾಗಿ ಈಗಿನ ಶ್ರಮ್ ಶಕ್ತಿ ಭವನ್ ಇರುವ ಸ್ಥಳದಲ್ಲಿ ಒಂದು ಹೊಸ ಕಾಂಪ್ಲೆಕ್ಸ್ ಸಹ ನಿರ್ಮಿಸಲಾಗುವುದೆಂದು ಬಿರ್ಲಾ ಹೇಳಿದರು. 2022 ರ ಹೊತ್ತಿಗೆ ಈ ಕಟ್ಟಡದ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ.

ಮೂಲಗಳ ಪ್ರಕಾರ ನಿರ್ಮಾಣ ಕಾರ್ಯದಲ್ಲಿ ತೊಡಗುವ ಕೆಲಸಗಾರರ ಪೈಕಿ ಶೇಕಾಡಾ 50 ರಷ್ಟು ಜನ ಕಲ್ಲು ಕೆತ್ತನೆ ಮತ್ತು ಫ್ರೆಸ್ಕೊ (ಸೀಲಿಂಗ್​ಗಳಿಗೆ ಬಣ್ಣ ಬಳಿಯುವುದು) ಕೆಲಸದಲ್ಲಿ ನುರಿತವರಾಗಿದ್ದಾರೆ. ಹಾಗೆಯೇ, ಕಟ್ಟಡದ ನಿರ್ಮಾಣ ಹಂತದಲ್ಲಿ ಕೊವಿಡ್-19ಗೆ ಸಂಬಂಧಿಸಿದ ಎಲ್ಲಾ ಮುಂಜಾಗ್ರತೆಗಳನ್ನು ತೆಗೆದುಕೊಳ್ಳಲಾಗಿದೆ.

Published On - 9:45 pm, Sat, 5 December 20

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ