AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನಗಳ ಕರ್ಕಶ ಹಾರ್ನ್​ ಸಹಿಸಿಕೊಳ್ಳದ ನಿತಿನ್​ ಗಡ್ಕರಿಯಿಂದ ಹೊಸ ಪ್ಲ್ಯಾನ್​; ಶೀಘ್ರವೇ ತಬಲಾ, ಕೊಳಲು, ಪಿಟೀಲು ನಾದದ ಹಾರ್ನ್​

ವಾಹನಗಳ ತಯಾರಕರು ಹಾರ್ನ್​ಗಳನ್ನು ಇಡುವಾಗಲೇ ಅದರಲ್ಲಿ ಭಾರತೀಯ ಸಂಗೀತ ವಾದ್ಯಗಳ ಶಬ್ದವನ್ನು ಅಳವಡಿಸಬೇಕು ಎಂದು ಸೂಚನೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.

ವಾಹನಗಳ ಕರ್ಕಶ ಹಾರ್ನ್​ ಸಹಿಸಿಕೊಳ್ಳದ ನಿತಿನ್​ ಗಡ್ಕರಿಯಿಂದ ಹೊಸ ಪ್ಲ್ಯಾನ್​; ಶೀಘ್ರವೇ ತಬಲಾ, ಕೊಳಲು, ಪಿಟೀಲು ನಾದದ ಹಾರ್ನ್​
ನಿತಿನ್​ ಗಡ್ಕರಿ
TV9 Web
| Edited By: |

Updated on: Sep 04, 2021 | 3:53 PM

Share

ವಾಹನ ದಟ್ಟಣೆಯಿಂದ ಬರೀ ವಾಯುಮಾಲಿನ್ಯವಷ್ಟೇ ಅಲ್ಲ, ಶಬ್ದಮಾಲಿನ್ಯವೂ ಆಗುತ್ತದೆ. ಅದರಲ್ಲೂ ವಾಹನಗಳ ಕರ್ಕಶ ಹಾರ್ನ್​​ನಿಂದ ಆಗುವ ಕೆಟ್ಟ ಕಿರಿಕಿರಿಯಂತೂ ಹೇಳತೀರದ್ದು. ಆದರೆ ಈಗ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್​ ಗಡ್ಕರಿ (Nitin Gadkari) ಇದಕ್ಕೊಂದು ಪರಿಹಾರ ಸೂಚಿಸುವ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಹಾಗೇ, ಹೊಸದಾದ..ವಿನೂತನ ಕಾಯ್ದೆ ಜಾರಿ ಮಾಡುವ ಬಗ್ಗೆಯೂ ತಿಳಿಸಿದ್ದಾರೆ. ಈ ನೂತನ ನಿಯಮವೇನಾದರೂ ಜಾರಿಯಾದರೆ, ದೇಶದಲ್ಲಿ ವಾಹನಗಳ ಹಾರ್ನ್​ (Vehicle Horn) ನಿಂದ ತಬಲಾ, ಕೊಳಲು, ಪಿಟೀಲು, ತಾಳ ಇತ್ಯಾದಿ ಭಾರತೀಯ ಸಂಗೀತ ಸಾಧನಗಳ ನಾದ ಕೇಳಿಬರಲಿದೆ..!

ವಾಹನಗಳ ತಯಾರಕರು ಹಾರ್ನ್​ಗಳನ್ನು ಇಡುವಾಗಲೇ ಅದರಲ್ಲಿ ಭಾರತೀಯ ಸಂಗೀತ ವಾದ್ಯಗಳ ಶಬ್ದವನ್ನು ಅಳವಡಿಸಬೇಕು ಎಂದು ಸೂಚನೆ ನೀಡುವ ಸಂಬಂಧ ಹೊಸ ಕಾಯ್ದೆ ಜಾರಿಗೊಳಿಸಲು ಕೇಂದ್ರ ಸಾರಿಗೆ ಇಲಾಖೆ ಮುಂದಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ನಿತಿನ್​ ಗಡ್ಕರಿ ತಿಳಿಸಿದ್ದಾರೆ. ನಾನು ನಾಗ್ಪುರದ ಕಟ್ಟಡವೊಂದರ 11ನೇ ಫ್ಲೋರ್​​ನಲ್ಲಿ ವಾಸವಾಗಿದ್ದೇನೆ. ಪ್ರತಿ ಮುಂಜಾನೆ ಒಂದು ಗಂಟೆ ಪ್ರಾಣಾಯಾಮ ಮಾಡುತ್ತೇನೆ. ಆದರೆ ಅಂಥ ಮುಂಜಾನೆಯ ಮೌನದ ಹೊತ್ತಲ್ಲೂ ವಾಹನಗಳ ಕರ್ಕಶ ಹಾರ್ನ್​ಗಳು ನನ್ನನ್ನು ಡಿಸ್ಟರ್ಬ್​ ಮಾಡುತ್ತವೆ. ಈ ಗಲಾಟೆಯನ್ನು ಪ್ರತಿದಿನ ಕೇಳಿ ಸಾಕಾಗಿದೆ. ಹಾಗೇ ನನ್ನಲ್ಲಿ ಒಂದು ಯೋಚನೆಯೂ ಬಂದಿದೆ..ವಾಹನಗಳ ಹಾರ್ನ್​ಗಳು ಸರಿಯಾಗಿ, ಇಂಪಾಗಿ ಇರಬೇಕು. ಅದರಂತೆ ಭಾರತೀಯ ಸಂಗೀತ ವಾದ್ಯಗಳ ಧ್ವನಿಯನ್ನು ವಾಹನಗಳ ಹಾರ್ನ್​​ನಲ್ಲಿ ಅಳವಡಿಸಬೇಕು ಎಂದೆನಿಸಿದೆ. ಎಲ್ಲವೂ ಸರಿ ಎನ್ನಿಸಿದರೆ ಮುಂದೆ ವಾಹನಗಳು ಹಾರ್ನ್​ ಹಾಕಿದಾಗ, ಅದರಿಂದ ತಬಲಾ, ಕೊಳಲು, ಪಿಟೀಲಿನ ಇಂಪು ನಾದ ಕೇಳಿಬರಲಿದೆ ಎಂದು ನಿತಿನ್​ ಗಡ್ಕರಿ ಹೇಳಿದ್ದಾರೆ.

ಗತಿಶಕ್ತಿ ಯೋಜನೆಯಿಂದ ಅನುಕೂಲ ಇನ್ನು ಸೆಪ್ಟೆಂಬರ್​ 2ರಂದು ಮಾಧ್ಯಮಗಳೊಂದಿಗೆ ಮಾತನಾಡಿದ್ದ ನಿತಿನ್ ಗಡ್ಕರಿ 100 ಲಕ್ಷ ಕೋಟಿ ರೂಪಾಯಿ ವೆಚ್ಚದ ಗತಿಶಕ್ತಿ ಯೋಜನೆ ಬಗ್ಗೆ ಮಾಹಿತಿ ನೀಡಿದ್ದರು. ಈ ಯೋಜನೆ ರಾಷ್ಟ್ರೀಯ ಮೂಲಸೌಕರ್ಯ ಪೈಪ್​ಲೈನ್​ ಕಾರ್ಯಕ್ರಮಕ್ಕೆ ಒಂದು ಚೌಕಟ್ಟು ಒದಗಿಸುತ್ತದೆ. ಹಾಗೇ ಲಾಜಿಸ್ಟಿಕ್​ ವೆಚ್ಚವನ್ನು ಕಡಿಮೆ ಮಾಡಿ, ಪೂರೈಕೆ ಸರಪಳಿಯನ್ನು ಅಭಿವೃದ್ಧಿಗೊಳಿಸುತ್ತದೆ. ಈ ಮೂಲಕ ಭಾರತೀಯ ಉತ್ಪನ್ನಗಳು ಜಾಗತಿಕ ಮಾರುಕಟ್ಟೆಯಲ್ಲಿ ಹೆಚ್ಚು ಸ್ಪರ್ಧೆ ಒಡ್ಡುವಂತೆ ಮಾಡುತ್ತದೆ ಎಂದು ಹೇಳಿದ್ದರು.

ಇದನ್ನೂ ಓದಿ: Afghanistan: ಶಿಕ್ಷಣ ಮತ್ತು ಉದ್ಯೋಗದ ಹಕ್ಕು ಪಡೆಯಲು ಆಫ್ಘನ್ ಮಹಿಳೆಯರಿಂದ ಬೀದಿಗಿಳಿದು ಹೋರಾಟ

Ban Online Gambling: ರಾಜ್ಯದಲ್ಲಿ ಆನ್ಲೈನ್​ ಗ್ಯಾಂಬ್ಲಿಂಗ್ ನಿಷೇಧ; ಎಷ್ಟರ ಮಟ್ಟಿಗೆ ಪರಿಣಾಮಕಾರಿ?

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ