AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ವಿಮಾನಯಾನಕ್ಕೆ ಹೊಸ ಕೊವಿಡ್ ಮಾರ್ಗಸೂಚಿ ಬಿಡುಗಡೆ; ನೀವು ತಿಳಿದಿರಬೇಕಾದ ವಿಚಾರಗಳು ಇಲ್ಲಿದೆ

Corona Guidelines: ಹೊಸ ನಿಯಮಾವಳಿಯ ಪ್ರಕಾರ ಮುಂದಿನ 14 ದಿನಗಳ ಕಾಲ ಯುಕೆ, ಯುರೋಪ್ ಹಾಗೂ ಮಧ್ಯಪೂರ್ವ ದೇಶಗಳಿಂದ ಆಗಮಿಸುತ್ತಿರುವ ಪ್ರಯಾಣಿಕರು ತಮ್ಮ ವಿವರಗಳನ್ನು ನೀಡಬೇಕು.

ಅಂತಾರಾಷ್ಟ್ರೀಯ ವಿಮಾನಯಾನಕ್ಕೆ ಹೊಸ ಕೊವಿಡ್ ಮಾರ್ಗಸೂಚಿ ಬಿಡುಗಡೆ; ನೀವು ತಿಳಿದಿರಬೇಕಾದ ವಿಚಾರಗಳು ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 06, 2022 | 7:47 PM

Share

ದೆಹಲಿ: ಕೊರೊನಾ ರೂಪಾಂತರ ಹಾಗೂ ಕೊವಿಡ್ 19 ಎರಡನೇ ಅಲೆಯ ಹಿನ್ನೆಲೆಯಲ್ಲಿ ಭಾರತಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ (International Arrivals) ಹೊಸ ನಿಯಮಾವಳಿಗಳನ್ನು ಸೂಚಿಸಿ ಕೇಂದ್ರ ಆರೋಗ್ಯ ಸಚಿವಾಲಯ (Union Health Ministry) ಆದೇಶ ಹೊರಡಿಸಿದೆ. ಹೊಸ ಕೊವಿಡ್ ಮಾರ್ಗಸೂಚಿಗಳು ಇಂದಿನಿಂದ (ಫೆ.22) ಮುಂದಿನ ಆದೇಶ ನೀಡುವವರೆಗೆ ಜಾರಿಯಾಗಲಿದೆ. ಹೊಸ ನಿಯಮಾವಳಿಯ ಪ್ರಕಾರ ಮುಂದಿನ 14 ದಿನಗಳ ಕಾಲ ಯುಕೆ, ಯುರೋಪ್ ಹಾಗೂ ಮಧ್ಯಪೂರ್ವ ದೇಶಗಳಿಂದ ಆಗಮಿಸುತ್ತಿರುವ ಪ್ರಯಾಣಿಕರು ತಮ್ಮ ವಿವರಗಳನ್ನು ನೀಡಬೇಕಾಗಿದೆ. ಹೊಸ ಕೊವಿಡ್ ಮಾರ್ಗಸೂಚಿಗಳು ಈ ಕೆಳಗಿನಂತಿವೆ. 

ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರು, ಪ್ರಯಾಣಕ್ಕೂ ಮೊದಲು ಆನ್​ಲೈನ್ ಏರ್ ಸುವಿಧಾ ಪೋರ್ಟಲ್​ನಲ್ಲಿ ಕೊವಿಡ್ ಸೋಂಕು ಪರೀಕ್ಷೆಯ ಬಗ್ಗೆ ಸ್ವಯಂಘೋಷಣೆ (Self Declaration) ಮಾಡಬೇಕು.

ಕೊವಿಡ್-19 RT-PCR ಪರೀಕ್ಷೆ ನಡೆಸಿ ಕೊರೊನಾ ನೆಗೆಟಿವ್ ವರದಿಯನ್ನು www.newdelhiairport.in ಆನ್​ಲೈನ್ ಪೋರ್ಟಲ್​ನಲ್ಲಿ ಅಪ್​ಲೋಡ್ ಮಾಡಬೇಕು.

ಪ್ರಯಾಣಿಕರು ಅಂತಾರಾಷ್ಟ್ರೀಯ ಪ್ರಯಾಣ ನಡೆಸುವುದಕ್ಕೆ 72 ಗಂಟೆಗಳ ಮೊದಲು ಕೊರೊನಾ ಪರೀಕ್ಷೆ ನಡೆಸಿರಬೇಕು. ಜತೆಗೆ, ಪ್ರಯಾಣಿಕರು ವರದಿಯನ್ನು ಪ್ರಮಾಣೀಕರಿಸಿರಬೇಕು.

ವಿಮಾನ ಪ್ರಯಾಣಕ್ಕೂ ಮೊದಲು ಪ್ರತಿಯೊಬ್ಬ ಪ್ರಯಾಣಿಕನ ತಾಪಮಾನ ಪರೀಕ್ಷೆ ನಡೆಸಲಾಗುತ್ತದೆ. ರೋಗಲಕ್ಷಣಗಳಿಲ್ಲದ ಪ್ರಯಾಣಿಕರಿಗೆ ಮಾತ್ರ ವಿಮಾನಯಾನ ನಡೆಸಲು ಅನುಮತಿ ನೀಡಲಾಗುತ್ತದೆ.

ವಿಮಾನಯಾನದ ಉದ್ದಕ್ಕೂ ಎಲ್ಲಾ ಪ್ರಯಾಣಿಕರು ಮಾಸ್ಕ್ ಧರಿಸಿರಬೇಕು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಆರೋಗ್ಯ ಸೇತು ಆ್ಯಪ್​ನ್ನು ಕೂಡ ಡೌನ್​ಲೋಡ್ ಮಾಡಿಕೊಂಡಿರಬೇಕು.

ವಿಮಾನಯಾನದ ಹೊರತಾಗಿ, ಜಲಮಾರ್ಗ ಹಾಗೂ ಭೂಮಾರ್ಗದ ಮುಖಾಂತರ ದೇಶಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕೂಡ ಇದೇ ಕೊವಿಡ್-19 ಮಾರ್ಗಸೂಚಿಗಳು ಅನ್ವಯವಾಗುತ್ತದೆ. ಆದರೆ, ಆನ್​ಲೈನ್ ರಿಜಿಸ್ಟ್ರೇಷನ್ ಸೌಲಭ್ಯ ಸದ್ಯ ವಿಮಾನಯಾನ ಪ್ರಯಾಣಿಕರಿಗೆ ಮಾತ್ರ ಲಭ್ಯವಿರುತ್ತದೆ.

ಯುನೈಟೆಡ್ ಕಿಂಗ್​ಡಂ, ಬ್ರೆಜಿಲ್ ಹಾಗೂ ದಕ್ಷಿಣ ಆಫ್ರಿಕಾದಿಂದ ಆಗಮಿಸುತ್ತಿರುವ ಪ್ರಯಾಣಿಕರನ್ನು ಏರ್​ಲೈನ್ ಪ್ರತ್ಯೇಕವಾಗಿ ಗುರುತಿಸಬೇಕು ಎಂದು ಕೂಡ ತಿಳಿಸಲಾಗಿದೆ.

ಪ್ರಯಾಣ ಮಾಡಿದ ಬಳಿಕ  14 ದಿನಗಳ ಕಾಲ ಜಾಗರೂಕರಾಗಿರಬೇಕು.. ಯುರೋಪ್ ಹಾಗೂ ಮಧ್ಯಪೂರ್ವ ದೇಶಗಳಿಂದ ಬರುವ ಪ್ರಯಾಣಿಕರು ತಮ್ಮ ಗಂಟಲು ದ್ರವ ಮಾದರಿಗಳನ್ನು ಪ್ರಯಾಣದ ಕೊನೆಗೆ ಏರ್​ಪೋರ್ಟ್​ನಲ್ಲಿ ನೀಡಬೇಕು. ಕೊರೊನಾ ಪರೀಕ್ಷೆ ವರದಿ ನೆಗೆಟಿವ್ ಬಂದರೆ, ನಂತರದ 14 ದಿನಗಳಲ್ಲಿ ಜಾಗರೂಕರಾಗಿ ಇರುವಂತೆ ಪ್ರಯಾಣಿಕರಿಗೆ ತಿಳಿಸಲಾಗುತ್ತದೆ. ಒಂದುವೇಳೆ ಕೊವಿಡ್-19 ವರದಿ ಪಾಸಿಟಿವ್ ಬಂದರೆ ಆರೋಗ್ಯ ಸೂಚನೆಗಳನ್ನು ಪಾಲಿಸಿ, ಚಿಕಿತ್ಸೆ ಪಡೆಯಬೇಕಾಗುತ್ತದೆ.

ನಿಗದಿತ ವೇಳಾಪಟ್ಟಿಯ ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನಗಳು ಸದ್ಯ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಮಾರ್ಚ್ 23ರಿಂದ ಕೊರೊನಾ ಸಾಂಕ್ರಾಮಿಕ ಕಾರಣದಿಂದ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಗಳು ಸ್ಥಗಿತಗೊಂಡಿದ್ದವು. ಭಾರತದಿಂದ ವಿದೇಶಕ್ಕೆ ಹಾಗೂ ವಿದೇಶದಿಂದ ಭಾರತಕ್ಕೆ ಪ್ರಯಾಣಿಸುವ ವಿಮಾನಗಳು ಏರ್ ಬಬಲ್ ಒಪ್ಪಂದದ ಅನ್ವಯ ಸದ್ಯ ಕೆಲಸ ಮಾಡುತ್ತಿವೆ. ದೇಶೀಯ ವಿಮಾಗಳು ಮೇ 25ರಿಂದ ಕಾರ್ಯನಿರ್ವಹಿಸುತ್ತಿದೆ. ಕೊರೊನಾ ಕಾರಣದಿಂದ 2 ತಿಂಗಳು ಸ್ಥಗಿತಗೊಂಡಿದ್ದ ದೇಶೀಯ ವಿಮಾನಯಾನ ಈಗ ಪ್ರಯಾಣಿಕರಿಗೆ ಸೇವೆ ನೀಡುತ್ತಿದೆ.

ಇದನ್ನೂ ಒದಿ: Viral Video | ಎಂಜಲು ಹಚ್ಚಿ ರೊಟ್ಟಿ ಮಾಡುತ್ತಿದ್ದ ಭೂಪ ಅರೆಸ್ಟ್​: ಕೊರೊನಾ ಹರಡೋಕೆ ಈ ತಂತ್ರವಾ?

‘ಪತಂಜಲಿ’ ಹೇಳಿದ ಕೊರೊನಿಲ್ ಕಟ್ಟುಕಥೆಗೆ ಆರೋಗ್ಯ ಸಚಿವರ ಉತ್ತೇಜನ: ಐಎಂಎ ಖಂಡನೆ

Published On - 6:04 pm, Mon, 22 February 21

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ