AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುವಾಗಲೇ ಮಗು ಮೃತಪಟ್ಟಿತ್ತು ಎಂದಿದ್ದ ವೈದ್ಯರು, ಅಂತ್ಯಕ್ರಿಯೆ ವೇಳೆ ಕಣ್ಣು ತೆರೆದ ಶಿಶು

ಮಗುವನ್ನು ನೋಡಲು 9 ತಿಂಗಳು ತಾಯಿ ಕಾತುರದಿಂದ ಕಾಯುತ್ತಿರುತ್ತಾಳೆ, ಯಾವಾಗ ಮಗುವನ್ನು ಎತ್ತಿಕೊಂಡು ಮುದ್ದಾಡುತ್ತೀನೋ ಎಂದು ಕನಸು ಕಂಡಿರುತ್ತಾಳೆ, ಅದೇ ಮಗು ಹುಟ್ಟಿದಾಕ್ಷಣ ಸತ್ತೇ ಹೋಗಿದೆ ಎಂದರೆ ಆ ತಾಯಿಗೆ ಹೇಗಾಗಬೇಡ ಹೇಳಿ. ಅದೇ ಮಗು ಕೊನೆಯ ಕ್ಷಣದಲ್ಲಿ ಬದುಕಿಬಂದರೆ ಎಲ್ಲಿಲ್ಲದ ಸಂತಸ. ಅಸ್ಸಾಂನ ಸಿಲ್ಚಾರ್ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರು ಸಾವನ್ನಪ್ಪಿದೆ ಎಂದು ಘೋಷಿಸಿದ್ದ ಮಗು ಅಂತ್ಯ ಕ್ರಿಯೆ ವೇಳೆ ಕಣ್ಣು ತೆರೆದಿರುವ ಘಟನೆ ನಡೆದಿದೆ.

ಹುಟ್ಟುವಾಗಲೇ ಮಗು ಮೃತಪಟ್ಟಿತ್ತು ಎಂದಿದ್ದ ವೈದ್ಯರು, ಅಂತ್ಯಕ್ರಿಯೆ ವೇಳೆ ಕಣ್ಣು ತೆರೆದ ಶಿಶು
ಮಗುImage Credit source: Moneycontrol.com
ನಯನಾ ರಾಜೀವ್
|

Updated on: Oct 05, 2023 | 10:02 AM

Share

ಮಗುವನ್ನು ನೋಡಲು 9 ತಿಂಗಳು ತಾಯಿ ಕಾತುರದಿಂದ ಕಾಯುತ್ತಿರುತ್ತಾಳೆ, ಯಾವಾಗ ಮಗುವನ್ನು ಎತ್ತಿಕೊಂಡು ಮುದ್ದಾಡುತ್ತೀನೋ ಎಂದು ಕನಸು ಕಂಡಿರುತ್ತಾಳೆ, ಅದೇ ಮಗು ಹುಟ್ಟಿದಾಕ್ಷಣ ಸತ್ತೇ ಹೋಗಿದೆ ಎಂದರೆ ಆ ತಾಯಿಗೆ ಹೇಗಾಗಬೇಡ ಹೇಳಿ. ಅದೇ ಮಗು ಕೊನೆಯ ಕ್ಷಣದಲ್ಲಿ ಬದುಕಿಬಂದರೆ ಎಲ್ಲಿಲ್ಲದ ಸಂತಸ. ಅಸ್ಸಾಂನ ಸಿಲ್ಚಾರ್ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರು ಸಾವನ್ನಪ್ಪಿದೆ ಎಂದು ಘೋಷಿಸಿದ್ದ ಮಗು ಅಂತ್ಯ ಕ್ರಿಯೆ ವೇಳೆ ಕಣ್ಣು ತೆರೆದಿರುವ ಘಟನೆ ನಡೆದಿದೆ.

ರತನ್ ದಾಸ್ ಅವರು ತಮ್ಮ ಗರ್ಭಿಣಿ ಪತ್ನಿಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ವೈದ್ಯರು ಹಲವು ತೊಡಕುಗಳಿಂದಾಗಿ ತಾಯಿ ಅಥವಾ ಮಗು ಯಾವುದಾದರೊಂದನ್ನು ಮಾತ್ರ ಉಳಿಸಲು ಸಾಧ್ಯ ಎಂದು ಹೇಳಿದ್ದರು. ನಾವು ಅವರಿಗೆ ಹೆರಿಗೆ ಮಾಡಲು ಅವಕಾಶ ಮಾಡಿಕೊಟ್ಟಿದ್ದೆವು, ಅವರ ಪತ್ನಿ ಸತ್ತ ಮಗುವಿಗೆ ಜನ್ಮ ನೀಡಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ, ಮಗುವನ್ನು ಮೃತದೇಹವನ್ನು ತೆಗೆದುಕೊಂಡು ಮನೆಗೆ ಹೋದೆವು. ಶವವನ್ನು ಪ್ಯಾಕೆಟ್‌ನಲ್ಲಿ ಕೊಟ್ಟಿದ್ದರು, ನಂತರ ಶವವನ್ನು ಸ್ಮಶಾನಕ್ಕೆ ಕೊಂಡೊಯ್ದರು.

ಸಿಲ್ಚಾರ್ ಸ್ಮಶಾನವನ್ನು ತಲುಪಿದ ನಂತರ, ಅಂತಿಮ ಸಂಸ್ಕಾರದ ಮೊದಲು ಪ್ಯಾಕೆಟ್ ಅನ್ನು ತೆರೆದಾಗ, ಮಗು ಅಳುತ್ತಿತ್ತು. ತಕ್ಷಣ ಮತ್ತೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಶ್ರೀದಾಸ್ ಹೇಳಿದ್ದಾರೆ.

ಮತ್ತಷ್ಟು ಓದಿ: ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಒಂದೇ ದಿನದಲ್ಲಿ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು

ಘಟನೆ ನಡೆದ ಕೂಡಲೇ ಸಿಲ್ಚಾರ್‌ನ ಮಾಲಿನಿಬಿಲ್ ಪ್ರದೇಶದ ಜನರ ಗುಂಪೊಂದು ಖಾಸಗಿ ಆಸ್ಪತ್ರೆ ಎದುರು ಜಮಾಯಿಸಿ ಆಸ್ಪತ್ರೆಯ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದರು.

ಇದೇ ವೇಳೆ ಕರ್ತವ್ಯ ನಿರ್ಲಕ್ಷ್ಯದ ಆರೋಪದ ಮೇಲೆ ಕುಟುಂಬಸ್ಥರು ಆಸ್ಪತ್ರೆ ಹಾಗೂ ವೈದ್ಯರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಮತ್ತೊಂದೆಡೆ, ಆಸ್ಪತ್ರೆಯ ಅಧಿಕಾರಿಗಳು ಮಗುವನ್ನು ಸತ್ತಿದೆ ಎಂದು ಘೋಷಿಸುವ ಮೊದಲು ಎಂಟು ಗಂಟೆಗಳ ಕಾಲ ಮಗುವನ್ನು ನಿಗಾದಲ್ಲಿ ಇರಿಸಿದ್ದರು ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ