AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕ್​ನಲ್ಲಿ ರುಂಡವಿಲ್ಲದ ನವಜಾತ ಶಿಶುವನ್ನು ಎಳೆದೊಯ್ಯುತ್ತಿತ್ತು ನಾಯಿ

ಪಾರ್ಕ್​ವೊಂದರಲ್ಲಿ ನವಜಾತ ಶಿಶುವನ್ನು ಕಚ್ಚಿ ಎಳೆದೊಯ್ಯುತ್ತಿದ್ದ ನಾಯಿಯೊಂದು ಪತ್ತೆಯಾಗಿದೆ. ಶಿಶುವಿನ ತಲೆ ಸೇರಿದಂತೆ ಹಲವು ಭಾಗಗಳು ನಾಪತ್ತೆಯಾಗಿವೆ.

ಪಾರ್ಕ್​ನಲ್ಲಿ ರುಂಡವಿಲ್ಲದ ನವಜಾತ ಶಿಶುವನ್ನು ಎಳೆದೊಯ್ಯುತ್ತಿತ್ತು ನಾಯಿ
ಶಿಶು-ಸಾಂದರ್ಭಿಕ ಚಿತ್ರImage Credit source: Firstcry
ನಯನಾ ರಾಜೀವ್
|

Updated on: Aug 07, 2024 | 12:49 PM

Share

ದೆಹಲಿಯ ರೋಹಿಣಿ ಬಳಿಯ ಪಾರ್ಕ್​ವೊಂದರಲ್ಲಿ ನಾಯಿಯೊಂದು ರುಂಡವಿಲ್ಲದ ನವಜಾತ ಶಿಶುವಿನ ದೇಹವನ್ನು ಎಳೆದೊಯ್ಯುತ್ತಿದ್ದ ಭಯಾನಕ ದೃಶ್ಯ ಕಂಡುಬಂದಿತ್ತು. ಶನಿವಾರ ಬೆಳಗ್ಗೆ 10.08ರ ಸುಮಾರಿಗೆ ಈ ಘಟನೆ ನಡೆದಿದೆ. ಮೃತದೇಹ ಕೊಳೆತ ಸ್ಥಿತಿಯಲ್ಲಿತ್ತು. ಪ್ರಾಥಮಿಕ ತನಿಖೆಯಲ್ಲಿ ಪಾರ್ಕ್​ನಲ್ಲಿ ಶಿಶುವನ್ನು ಎಸೆದ ಬಳಿಕ ಅದು ಮೃತಪಟ್ಟಿರುವಂತೆ ಕಾಣುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಲ್ಲೇ ಪಾರ್ಕ್​ನಲ್ಲಿ ಓಡಾಡುವವರು ತಲೆ ಇಲ್ಲದ ಶಿಶುವನ್ನು ನಾಯಿ ಎಳೆದೊಯ್ಯುತ್ತಿದ್ದುದನ್ನು ಕಂಡು ಬಳಿಕ ನಮಗೆ ಮಾಹಿತಿ ನೀಡಿದ್ದಾರೆ. ಎರಡು ಅಥವಾ ಮೂರು ದಿನಗಳ ಹಿಂದೆ ಮಗುವನ್ನು ಪಾರ್ಕ್​ನಲ್ಲಿ ಎಸೆದಿರಬಹುದು ಎಂದು ಹೇಳಲಾಗುತ್ತಿದೆ.

ಮೃತದೇಹವನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಉದ್ಯಾನದಿಂದ ಒಂದು ಕಿಮೀ ವ್ಯಾಪ್ತಿಯಲ್ಲಿ ಖಾಸಗಿ ಆಸ್ಪತ್ರೆ ಇದ್ದು ಅಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಸ್ಥಳದಲ್ಲಿ ಯಾವುದೇ ಭದ್ರತಾ ಸಿಬ್ಬಂದಿ ಇರಲಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.

ಶಾಲೆಯ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಬಾಲಕಿ, ಶಿಶು ಸಾವು

ಎಲ್ಲಾ ಕಡೆಯೂ ದೇಹ ಊದಿಕೊಂಡಿದೆ ಜತೆಗೆ ದೇಹ ಊನವಾಗಿರುವ ಹಿನ್ನೆಲೆಯಲ್ಲಿ ಲಿಂಗಪತ್ತೆ ಸಾಧ್ಯವಾಗುತ್ತಿಲ್ಲ, ತಲೆ ಸೇರಿದಂತೆ ಹಲವು ಭಾಗಗಳು ನಾಪತ್ತೆಯಾಗಿವೆ. ಅವುಗಳನ್ನು ಪ್ರಾಣಿಗಳು ತಿಂದಿರಬಹುದು ಎಂದು ಅಂದಾಜಿಸಿದ್ದಾರೆ. ಶಿಶುವನ್ನು ಎಸೆದ ವ್ಯಕ್ತಿಯನ್ನು ಗುರುತಿಸಲು ಹತ್ತಿರವಿರುವ ಸಿಸಿಟಿವಿಯನ್ನು ಪರೀಕ್ಷಿಸಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ