AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ: ಉದ್ಘಾಟನೆಗೆ ಮುನ್ನವೇ ಕುಸಿದು ಬಿತ್ತು ₹12 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ನೂತನ ಸೇತುವೆ

ಸಿಕ್ತಿ ಪ್ರದೇಶದಲ್ಲಿ ಬಕ್ರಾ ನದಿಗೆ 12 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಸೇತುವೆ ಇದಾಗಿದೆ.  ಸೇತುವೆಯ ಒಂದು ಬದಿ ಕುಸಿಯುತ್ತಿರುವುದನ್ನು ವೈರಲ್ ವಿಡಿಯೊ ತೋರಿಸುತ್ತದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಿಹಾರದ ಅರಾರಿಯಾ ಜಿಲ್ಲೆಯ ಕುರ್ಸಕಾಂತ ಮತ್ತು ಸಿಕ್ತಿ ನಡುವಿನ ಪ್ರಯಾಣವನ್ನು ಸುಲಭಗೊಳಿಸುವುದಕ್ಕಾಗಿ ಈ  ಸೇತುವೆಯನ್ನು ನಿರ್ಮಿಸಲಾಗಿತ್ತು.

ಬಿಹಾರ: ಉದ್ಘಾಟನೆಗೆ ಮುನ್ನವೇ ಕುಸಿದು ಬಿತ್ತು ₹12 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ನೂತನ ಸೇತುವೆ
ಕುಸಿದ ಸೇತುವೆ
ರಶ್ಮಿ ಕಲ್ಲಕಟ್ಟ
|

Updated on: Jun 18, 2024 | 8:40 PM

Share

ದೆಹಲಿ ಜೂನ್ 18: ಬಿಹಾರದ (Bihar) ಅರಾರಿಯಾದಲ್ಲಿ ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿರುವ ಹೊಸದಾಗಿ ನಿರ್ಮಿಸಲಾದ ಸೇತುವೆಯ (bridge Collapse) ಒಂದು ಭಾಗ ಮಂಗಳವಾರ ಕುಸಿದಿದೆ. ಸಿಕ್ತಿ ಪ್ರದೇಶದಲ್ಲಿ ಬಕ್ರಾ ನದಿಗೆ ₹12 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಸೇತುವೆ ಇದಾಗಿದೆ.  ಸೇತುವೆಯ ಒಂದು ಬದಿ ಕುಸಿಯುತ್ತಿರುವುದನ್ನು ವೈರಲ್ ವಿಡಿಯೊ ತೋರಿಸುತ್ತದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಿಹಾರದ ಅರಾರಿಯಾ ಜಿಲ್ಲೆಯ ಕುರ್ಸಕಾಂತ ಮತ್ತು ಸಿಕ್ತಿ ನಡುವಿನ ಪ್ರಯಾಣವನ್ನು ಸುಲಭಗೊಳಿಸುವುದಕ್ಕಾಗಿ ಈ  ಸೇತುವೆಯನ್ನು ನಿರ್ಮಿಸಲಾಗಿತ್ತು.

ಸಿಕ್ತಿ ಶಾಸಕ ವಿಜಯ್ ಕುಮಾರ್ ಎಎನ್‌ಐಗೆ ಹೇಳಿಕೆ ನೀಡಿದ್ದು, ನಿರ್ಮಾಣ ಕಂಪನಿಯ ಮಾಲೀಕರ ನಿರ್ಲಕ್ಷ್ಯದಿಂದ ಸೇತುವೆ ಕುಸಿದಿದೆ. ಆಡಳಿತವು ತನಿಖೆ ನಡೆಸಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದು  ಹೇಳಿದ್ದಾರೆ. ಸೇತುವೆ ನಿರ್ಮಾಣಕ್ಕೆ ಕಡಿಮೆ ಬೆಲೆಯ ಸಾಮಗ್ರಿಗಳನ್ನು ಬಳಸಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸೇತುವೆ ಕುಸಿಯುತ್ತಿರುವ ವಿಡಿಯೊ

ಈ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಇನಾಯತ್ ಖಾನ್ ಭರವಸೆ ನೀಡಿದರು.

“ನದಿಯ ಹರಿವು ಬದಲಾದ ನಂತರ ಸೇತುವೆಯ ಉಪಯುಕ್ತತೆ ಕಡಿಮೆಯಾಗಿದೆ. ಆದರೆ, ಜಿಲ್ಲಾಡಳಿತ ಈ ಘಟನೆಯನ್ನು ಗಮನಕ್ಕೆ ತಂದಿದೆ. ಗ್ರಾಮೀಣ ಕಾಮಗಾರಿ ಇಲಾಖೆಯ ಅಧಿಕಾರಿಗಳು ನಾಳೆ ಅರಾರಿಯಾಕ್ಕೆ ಆಗಮಿಸಿ ಪರಿಸ್ಥಿತಿಯ ಅವಲೋಕನ ನಡೆಸಲಿದ್ದಾರೆ. ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜೆಡಿಯು ನಾಯಕ ನೀರಜ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಹಲವಾರು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ; ಬಿಗಿ ಭದ್ರತೆ

ಮೂರನೇ ಹಂತದಲ್ಲಿ ಎಂಟು ಕಂಬಗಳನ್ನು ನಿರ್ಮಿಸಲಾಗಿದೆ. ಉಳಿದ ಎಂಟು ಪಿಲ್ಲರ್‌ಗಳನ್ನು ಮೊದಲ ಮತ್ತು ಎರಡನೇ ಹಂತದಲ್ಲಿ ನಿರ್ಮಿಸಲಾಗಿದೆ.ಮೊದಲ ಮತ್ತು ಎರಡನೇ ಹಂತಗಳಲ್ಲಿ ಮಾಡಿದ ಎಲ್ಲಾ ಕಂಬಗಳು ಹಾನಿಗೊಳಗಾಗದೆ ಉಳಿದಿವೆ. ಈ ವರ್ಷದ ಮಾರ್ಚ್‌ನಲ್ಲಿ ಸುಪೌಲ್ ಪಟ್ಟಣದಲ್ಲಿ ಕೋಸಿ ನದಿಗೆ ನಿರ್ಮಿಸಲಾಗಿದ್ದ ಸೇತುವೆ ಕುಸಿದು ಒಬ್ಬ ಕಾರ್ಮಿಕ ಮೃತಪಟ್ಟಿದ್ದರು. ಕಳೆದ ವರ್ಷ ಸುಲ್ತಾನ್‌ಗುಂಜ್‌ನಲ್ಲಿ ಗಂಗಾ ನದಿಯ ಸೇತುವೆ ಕುಸಿದಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ