AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ: ಉದ್ಘಾಟನೆಗೆ ಮುನ್ನವೇ ಕುಸಿದು ಬಿತ್ತು ₹12 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ನೂತನ ಸೇತುವೆ

ಸಿಕ್ತಿ ಪ್ರದೇಶದಲ್ಲಿ ಬಕ್ರಾ ನದಿಗೆ 12 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಸೇತುವೆ ಇದಾಗಿದೆ.  ಸೇತುವೆಯ ಒಂದು ಬದಿ ಕುಸಿಯುತ್ತಿರುವುದನ್ನು ವೈರಲ್ ವಿಡಿಯೊ ತೋರಿಸುತ್ತದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಿಹಾರದ ಅರಾರಿಯಾ ಜಿಲ್ಲೆಯ ಕುರ್ಸಕಾಂತ ಮತ್ತು ಸಿಕ್ತಿ ನಡುವಿನ ಪ್ರಯಾಣವನ್ನು ಸುಲಭಗೊಳಿಸುವುದಕ್ಕಾಗಿ ಈ  ಸೇತುವೆಯನ್ನು ನಿರ್ಮಿಸಲಾಗಿತ್ತು.

ಬಿಹಾರ: ಉದ್ಘಾಟನೆಗೆ ಮುನ್ನವೇ ಕುಸಿದು ಬಿತ್ತು ₹12 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ನೂತನ ಸೇತುವೆ
ಕುಸಿದ ಸೇತುವೆ
ರಶ್ಮಿ ಕಲ್ಲಕಟ್ಟ
|

Updated on: Jun 18, 2024 | 8:40 PM

Share

ದೆಹಲಿ ಜೂನ್ 18: ಬಿಹಾರದ (Bihar) ಅರಾರಿಯಾದಲ್ಲಿ ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿರುವ ಹೊಸದಾಗಿ ನಿರ್ಮಿಸಲಾದ ಸೇತುವೆಯ (bridge Collapse) ಒಂದು ಭಾಗ ಮಂಗಳವಾರ ಕುಸಿದಿದೆ. ಸಿಕ್ತಿ ಪ್ರದೇಶದಲ್ಲಿ ಬಕ್ರಾ ನದಿಗೆ ₹12 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಸೇತುವೆ ಇದಾಗಿದೆ.  ಸೇತುವೆಯ ಒಂದು ಬದಿ ಕುಸಿಯುತ್ತಿರುವುದನ್ನು ವೈರಲ್ ವಿಡಿಯೊ ತೋರಿಸುತ್ತದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಿಹಾರದ ಅರಾರಿಯಾ ಜಿಲ್ಲೆಯ ಕುರ್ಸಕಾಂತ ಮತ್ತು ಸಿಕ್ತಿ ನಡುವಿನ ಪ್ರಯಾಣವನ್ನು ಸುಲಭಗೊಳಿಸುವುದಕ್ಕಾಗಿ ಈ  ಸೇತುವೆಯನ್ನು ನಿರ್ಮಿಸಲಾಗಿತ್ತು.

ಸಿಕ್ತಿ ಶಾಸಕ ವಿಜಯ್ ಕುಮಾರ್ ಎಎನ್‌ಐಗೆ ಹೇಳಿಕೆ ನೀಡಿದ್ದು, ನಿರ್ಮಾಣ ಕಂಪನಿಯ ಮಾಲೀಕರ ನಿರ್ಲಕ್ಷ್ಯದಿಂದ ಸೇತುವೆ ಕುಸಿದಿದೆ. ಆಡಳಿತವು ತನಿಖೆ ನಡೆಸಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದು  ಹೇಳಿದ್ದಾರೆ. ಸೇತುವೆ ನಿರ್ಮಾಣಕ್ಕೆ ಕಡಿಮೆ ಬೆಲೆಯ ಸಾಮಗ್ರಿಗಳನ್ನು ಬಳಸಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸೇತುವೆ ಕುಸಿಯುತ್ತಿರುವ ವಿಡಿಯೊ

ಈ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಇನಾಯತ್ ಖಾನ್ ಭರವಸೆ ನೀಡಿದರು.

“ನದಿಯ ಹರಿವು ಬದಲಾದ ನಂತರ ಸೇತುವೆಯ ಉಪಯುಕ್ತತೆ ಕಡಿಮೆಯಾಗಿದೆ. ಆದರೆ, ಜಿಲ್ಲಾಡಳಿತ ಈ ಘಟನೆಯನ್ನು ಗಮನಕ್ಕೆ ತಂದಿದೆ. ಗ್ರಾಮೀಣ ಕಾಮಗಾರಿ ಇಲಾಖೆಯ ಅಧಿಕಾರಿಗಳು ನಾಳೆ ಅರಾರಿಯಾಕ್ಕೆ ಆಗಮಿಸಿ ಪರಿಸ್ಥಿತಿಯ ಅವಲೋಕನ ನಡೆಸಲಿದ್ದಾರೆ. ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜೆಡಿಯು ನಾಯಕ ನೀರಜ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಹಲವಾರು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ; ಬಿಗಿ ಭದ್ರತೆ

ಮೂರನೇ ಹಂತದಲ್ಲಿ ಎಂಟು ಕಂಬಗಳನ್ನು ನಿರ್ಮಿಸಲಾಗಿದೆ. ಉಳಿದ ಎಂಟು ಪಿಲ್ಲರ್‌ಗಳನ್ನು ಮೊದಲ ಮತ್ತು ಎರಡನೇ ಹಂತದಲ್ಲಿ ನಿರ್ಮಿಸಲಾಗಿದೆ.ಮೊದಲ ಮತ್ತು ಎರಡನೇ ಹಂತಗಳಲ್ಲಿ ಮಾಡಿದ ಎಲ್ಲಾ ಕಂಬಗಳು ಹಾನಿಗೊಳಗಾಗದೆ ಉಳಿದಿವೆ. ಈ ವರ್ಷದ ಮಾರ್ಚ್‌ನಲ್ಲಿ ಸುಪೌಲ್ ಪಟ್ಟಣದಲ್ಲಿ ಕೋಸಿ ನದಿಗೆ ನಿರ್ಮಿಸಲಾಗಿದ್ದ ಸೇತುವೆ ಕುಸಿದು ಒಬ್ಬ ಕಾರ್ಮಿಕ ಮೃತಪಟ್ಟಿದ್ದರು. ಕಳೆದ ವರ್ಷ ಸುಲ್ತಾನ್‌ಗುಂಜ್‌ನಲ್ಲಿ ಗಂಗಾ ನದಿಯ ಸೇತುವೆ ಕುಸಿದಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್