AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಿ 5 ತಿಂಗಳ ಹಿಂದೆ ಮದುವೆಯಾಗಿದ್ದರು, ಬೇಡವೆಂದರೂ ಹೊರಗೆ ಹೋದ ಗಂಡನ ಬಗ್ಗೆ ಕೋಪಗೊಂಡ ಪತ್ನಿ ಏನು ಮಾಡಿದಳು ನೋಡಿ

ಮೊನ್ನೆ ಬುಧವಾರ ಮನೆಯಿಂದ ಹೊರಗೆ ಹೋಗುವುದಾಗಿ ಭಾಷಾ, ತನ್ನ ಪತ್ನಿ ಜೋತ್ನ್ಸಾಗೆ ಹೇಳಿ ಹೋಗಿದ್ದರು. ಆದರೆ ಅದಕ್ಕೆ ಚಕಾರವೆತ್ತಿದ ಪತ್ನಿ ಜೋತ್ನ್ಸಾ, ಮನೆಯಿಂದ ಹೊರಗೆ ಹೋಗಬೇಡಿ ಎಂದು ಹೇಳಿದ್ದಾರೆ. ಆದಾಗ್ಯೂ ಭಾಷಾ ತನಗೆ ಕೆಲಸವಿರುವುದರಿಂದ ಹೊರಗೆ ಹೋಗುವುದಾಗಿ ಹಠ ಹಿಡಿದಿದ್ದಾನೆ. ಹೆಂಡತಿಯ ಮನವಿಯನ್ನು ಕೇಳದೆ ಹೊರಗೆ ಹೋಗಿದ್ದಾರೆ. ಇದರಿಂದ ಜೋತ್ನ್ಸಾ ತೀವ್ರ ಮನನೊಂದಿದ್ದಾರೆ.

ಪ್ರೀತಿಸಿ 5 ತಿಂಗಳ ಹಿಂದೆ ಮದುವೆಯಾಗಿದ್ದರು, ಬೇಡವೆಂದರೂ ಹೊರಗೆ ಹೋದ ಗಂಡನ ಬಗ್ಗೆ ಕೋಪಗೊಂಡ ಪತ್ನಿ ಏನು ಮಾಡಿದಳು ನೋಡಿ
ಬೇಡವೆಂದರೂ ಹೊರಗೆ ಹೋದ ಗಂಡನ ಬಗ್ಗೆ ಕೋಪಗೊಂಡ ಪತ್ನಿ ಏನು ಮಾಡಿದಳು ನೋಡಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 17, 2023 | 1:50 PM

Share

Guntur (AP): ಪತಿ-ಪತ್ನಿಯರ ನಡುವೆ ಸಣ್ಣ ಪುಟ್ಟ ಜಗಳ ಸಹಜ.. ಆದರೆ ಈಗಿನ ಕಾಲದಲ್ಲಿ ಸಣ್ಣಪುಟ್ಟ ಜಗಳವೇ ಗಂಡ-ಹೆಂಡತಿ ಬೇರೆಯಾಗುವುದಕ್ಕೆ ಕಾರಣವಾಗುತ್ತಿದೆ. ಇನ್ನು ಕೆಲವರು ಆತ್ಮಹತ್ಯೆಗೂ ಸಿದ್ಧವಾಗಿಬಿಡುತ್ತಿದ್ದಾರೆ. ಇಂತಹದೊಂದು ಘಟನೆ ಗುಂಟೂರು ನಗರದಲ್ಲಿ ನಡೆದಿದೆ. ಅವರು ಪ್ರೀತಿಸಿ ಮದುವೆಯಾದವರು. ಇರುವಷ್ಟು ಕಾಲ ಶಾಶ್ವತವಾಗಿ ಒಟ್ಟಿಗೆ ಇರಲು ಪ್ರತಿಜ್ಞೆ ಮಾಡಿದ್ದರು. ಆದರೆ ಮದುವೆ ಆದ ಹೊಸತು, ಮನೆಯಿಂದ ಹೊರಗೆ ಹೋಗಬೇಡಿ ಎಂದು ತನ್ನ ಗಂಡನಿಗೆ ಹೆಂಡತಿ ಹೇಳಿದ್ದಾರೆ. ಆದರೆ ಆತ ಅದೇನು ಅರ್ಜೆಂಟಿತ್ತೂ ಹೊರಗೆ ಹೋದಾಗ, ಇತ್ತ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತನ ಹೆಸರು ನಾಗೂರ್ ಭಾಷಾ.. ಆಕೆಯ ಹೆಸರು ಜೋತ್ನ್ಸಾ.. ಇಬ್ಬರೂ ಕಲ್ಯಾಣಿ ನಗರದಲ್ಲಿ ವಾಸಿಸುತ್ತಿದ್ದರು. ಇಬ್ಬರೂ ಇವೆಂಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮಗಳನ್ನು ಆಯೋಜಿಸುವ ಕೆಲಸ ಮಾಡುತ್ತಿದ್ದರು. ವೃತ್ತಿಯ ಭಾಗವಾಗಿ ಏರ್ಪಟ್ಟ ಪರಿಚಯ ಇಬ್ಬರ ನಡುವೆ ಪ್ರೀತಿಗೆ ತಿರುಗಿತ್ತು. ಎರಡೂ ಮನೆಯವರು ಒಪ್ಪಿ ಐದು ತಿಂಗಳ ಹಿಂದೆ ವಿವಾಹವಾಗಿದ್ದರು. ಇಬ್ಬರೂ ಪರಸ್ಪರ ಪ್ರೀತಿ ವೀಶ್ವಾಸದಿಂದ ಬದುಕುತ್ತಿದ್ದರು. ಆದರೆ, ಒಂದು ಸಣ್ಣ ಘಟನೆ ಅವರಿಬ್ಬರ ಜೀವನದಲ್ಲಿ ತೀರದ ದುಃಖವನ್ನುಂಟು ಮಾಡಿದೆ.

ಮೊನ್ನೆ ಬುಧವಾರ ಮನೆಯಿಂದ ಹೊರಗೆ ಹೋಗುವುದಾಗಿ ಭಾಷಾ, ತನ್ನ ಪತ್ನಿ ಜೋತ್ನ್ಸಾಗೆ ಹೇಳಿ ಹೋಗಿದ್ದರು. ಆದರೆ ಅದಕ್ಕೆ ಚಕಾರವೆತ್ತಿದ ಪತ್ನಿ ಜೋತ್ನ್ಸಾ, ಮನೆಯಿಂದ ಹೊರಗೆ ಹೋಗಬೇಡಿ ಎಂದು ಹೇಳಿದ್ದಾರೆ. ಆದಾಗ್ಯೂ ಭಾಷಾ ತನಗೆ ಕೆಲಸವಿರುವುದರಿಂದ ಹೊರಗೆ ಹೋಗುವುದಾಗಿ ಹಠ ಹಿಡಿದಿದ್ದಾನೆ. ಹೆಂಡತಿಯ ಮನವಿಯನ್ನು ಕೇಳದೆ ಹೊರಗೆ ಹೋಗಿದ್ದಾರೆ. ಇದರಿಂದ ಜೋತ್ನ್ಸಾ ತೀವ್ರ ಮನನೊಂದಿದ್ದಾರೆ.

Also read: ದುರಾಸೆಯ ಫಲ – ಇತ್ತೀಚೆಗೆ ಮದುವೆಯಾಗಿದ್ದ ಟೆಕ್ಕಿ ಪ್ರಾಣ ಕಳೆದುಕೊಂಡ- ಎಲ್ಲಿ, ಏನಾಗಿತ್ತು?

ಹೊರಗೆ ಹೋದ ನಾಗೂರ್ ಭಾಷಾ ಸಂಜೆಯವರೆಗೂ ಮನೆಗೆ ಬಂದಿರಲಿಲ್ಲ. ಇತ್ತ, ಮುದ್ದಿನ ಮಡದಿ ಜೋತ್ಸ್ನಾಗೆ ಅವರ ತಾಯಿ ಕರೆ ಮಾಡಿದ್ದಾರೆ. ಆದರೆ ಜೋತ್ಸ್ನಾ ಫೋನ್ ಎತ್ತಲಿಲ್ಲ. ಅನುಮಾನ ಬಂದು ಜೋತ್ಸ್ನಾ ತಾಯಿ ತಕ್ಷಣ ಅಳಿಯನಿಗೆ ಕರೆ ಮಾಡಿ ಕೇಳಿದ್ದಾರೆ. ಇದರಿಂದ ಗಾಬರಿಗೆ ಬಿದ್ದ ನಾಗೂರ್ ಭಾಷಾ ಮನೆಗೆ ಓಡೋಡಿ ಬಂದಿದ್ದಾರೆ. ಆದರೆ ಹೆಂಡತಿಯಾದವಳು ಬಾಗಿಲು ತಟ್ಟಿದರೂ ತೆರೆಯಲಿಲ್ಲ. ಅನುಮಾನಗೊಂಡ ನಾಗೂರ್, ಅಕ್ಕಪಕ್ಕದವರ ನೆರವಿನೊಂದಿಗೆ ಬಾಗಿಲು ಒಡೆದು ಒಳ ಹೋಗಿ ನೊಡಿದ್ದಾರೆ.

ಅದಾಗಲೇ ಜೋತ್ಸ್ನಾ ನೇಣು ಬಿಗಿದುಕೊಂಡಿರುವ ಭೀಕರ ದೃಸ್ಯ ಅಲ್ಲಿ ಕಾಣಿಸಿದೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಕೆ ಅದಾಗಲೇ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಅಷ್ಟೊಂದು ಸಣ್ಣ ವಿಚಾರಕ್ಕೆ ಜೋತ್ಸ್ನಾ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಆಕೆಯ ಪತಿ ನಾಗೂರ್ ಭಾಷಾ ಮತ್ತು ಜೋತ್ನಾಳ ಪೋಷಕರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ