AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಿ 5 ತಿಂಗಳ ಹಿಂದೆ ಮದುವೆಯಾಗಿದ್ದರು, ಬೇಡವೆಂದರೂ ಹೊರಗೆ ಹೋದ ಗಂಡನ ಬಗ್ಗೆ ಕೋಪಗೊಂಡ ಪತ್ನಿ ಏನು ಮಾಡಿದಳು ನೋಡಿ

ಮೊನ್ನೆ ಬುಧವಾರ ಮನೆಯಿಂದ ಹೊರಗೆ ಹೋಗುವುದಾಗಿ ಭಾಷಾ, ತನ್ನ ಪತ್ನಿ ಜೋತ್ನ್ಸಾಗೆ ಹೇಳಿ ಹೋಗಿದ್ದರು. ಆದರೆ ಅದಕ್ಕೆ ಚಕಾರವೆತ್ತಿದ ಪತ್ನಿ ಜೋತ್ನ್ಸಾ, ಮನೆಯಿಂದ ಹೊರಗೆ ಹೋಗಬೇಡಿ ಎಂದು ಹೇಳಿದ್ದಾರೆ. ಆದಾಗ್ಯೂ ಭಾಷಾ ತನಗೆ ಕೆಲಸವಿರುವುದರಿಂದ ಹೊರಗೆ ಹೋಗುವುದಾಗಿ ಹಠ ಹಿಡಿದಿದ್ದಾನೆ. ಹೆಂಡತಿಯ ಮನವಿಯನ್ನು ಕೇಳದೆ ಹೊರಗೆ ಹೋಗಿದ್ದಾರೆ. ಇದರಿಂದ ಜೋತ್ನ್ಸಾ ತೀವ್ರ ಮನನೊಂದಿದ್ದಾರೆ.

ಪ್ರೀತಿಸಿ 5 ತಿಂಗಳ ಹಿಂದೆ ಮದುವೆಯಾಗಿದ್ದರು, ಬೇಡವೆಂದರೂ ಹೊರಗೆ ಹೋದ ಗಂಡನ ಬಗ್ಗೆ ಕೋಪಗೊಂಡ ಪತ್ನಿ ಏನು ಮಾಡಿದಳು ನೋಡಿ
ಬೇಡವೆಂದರೂ ಹೊರಗೆ ಹೋದ ಗಂಡನ ಬಗ್ಗೆ ಕೋಪಗೊಂಡ ಪತ್ನಿ ಏನು ಮಾಡಿದಳು ನೋಡಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 17, 2023 | 1:50 PM

Share

Guntur (AP): ಪತಿ-ಪತ್ನಿಯರ ನಡುವೆ ಸಣ್ಣ ಪುಟ್ಟ ಜಗಳ ಸಹಜ.. ಆದರೆ ಈಗಿನ ಕಾಲದಲ್ಲಿ ಸಣ್ಣಪುಟ್ಟ ಜಗಳವೇ ಗಂಡ-ಹೆಂಡತಿ ಬೇರೆಯಾಗುವುದಕ್ಕೆ ಕಾರಣವಾಗುತ್ತಿದೆ. ಇನ್ನು ಕೆಲವರು ಆತ್ಮಹತ್ಯೆಗೂ ಸಿದ್ಧವಾಗಿಬಿಡುತ್ತಿದ್ದಾರೆ. ಇಂತಹದೊಂದು ಘಟನೆ ಗುಂಟೂರು ನಗರದಲ್ಲಿ ನಡೆದಿದೆ. ಅವರು ಪ್ರೀತಿಸಿ ಮದುವೆಯಾದವರು. ಇರುವಷ್ಟು ಕಾಲ ಶಾಶ್ವತವಾಗಿ ಒಟ್ಟಿಗೆ ಇರಲು ಪ್ರತಿಜ್ಞೆ ಮಾಡಿದ್ದರು. ಆದರೆ ಮದುವೆ ಆದ ಹೊಸತು, ಮನೆಯಿಂದ ಹೊರಗೆ ಹೋಗಬೇಡಿ ಎಂದು ತನ್ನ ಗಂಡನಿಗೆ ಹೆಂಡತಿ ಹೇಳಿದ್ದಾರೆ. ಆದರೆ ಆತ ಅದೇನು ಅರ್ಜೆಂಟಿತ್ತೂ ಹೊರಗೆ ಹೋದಾಗ, ಇತ್ತ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತನ ಹೆಸರು ನಾಗೂರ್ ಭಾಷಾ.. ಆಕೆಯ ಹೆಸರು ಜೋತ್ನ್ಸಾ.. ಇಬ್ಬರೂ ಕಲ್ಯಾಣಿ ನಗರದಲ್ಲಿ ವಾಸಿಸುತ್ತಿದ್ದರು. ಇಬ್ಬರೂ ಇವೆಂಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮಗಳನ್ನು ಆಯೋಜಿಸುವ ಕೆಲಸ ಮಾಡುತ್ತಿದ್ದರು. ವೃತ್ತಿಯ ಭಾಗವಾಗಿ ಏರ್ಪಟ್ಟ ಪರಿಚಯ ಇಬ್ಬರ ನಡುವೆ ಪ್ರೀತಿಗೆ ತಿರುಗಿತ್ತು. ಎರಡೂ ಮನೆಯವರು ಒಪ್ಪಿ ಐದು ತಿಂಗಳ ಹಿಂದೆ ವಿವಾಹವಾಗಿದ್ದರು. ಇಬ್ಬರೂ ಪರಸ್ಪರ ಪ್ರೀತಿ ವೀಶ್ವಾಸದಿಂದ ಬದುಕುತ್ತಿದ್ದರು. ಆದರೆ, ಒಂದು ಸಣ್ಣ ಘಟನೆ ಅವರಿಬ್ಬರ ಜೀವನದಲ್ಲಿ ತೀರದ ದುಃಖವನ್ನುಂಟು ಮಾಡಿದೆ.

ಮೊನ್ನೆ ಬುಧವಾರ ಮನೆಯಿಂದ ಹೊರಗೆ ಹೋಗುವುದಾಗಿ ಭಾಷಾ, ತನ್ನ ಪತ್ನಿ ಜೋತ್ನ್ಸಾಗೆ ಹೇಳಿ ಹೋಗಿದ್ದರು. ಆದರೆ ಅದಕ್ಕೆ ಚಕಾರವೆತ್ತಿದ ಪತ್ನಿ ಜೋತ್ನ್ಸಾ, ಮನೆಯಿಂದ ಹೊರಗೆ ಹೋಗಬೇಡಿ ಎಂದು ಹೇಳಿದ್ದಾರೆ. ಆದಾಗ್ಯೂ ಭಾಷಾ ತನಗೆ ಕೆಲಸವಿರುವುದರಿಂದ ಹೊರಗೆ ಹೋಗುವುದಾಗಿ ಹಠ ಹಿಡಿದಿದ್ದಾನೆ. ಹೆಂಡತಿಯ ಮನವಿಯನ್ನು ಕೇಳದೆ ಹೊರಗೆ ಹೋಗಿದ್ದಾರೆ. ಇದರಿಂದ ಜೋತ್ನ್ಸಾ ತೀವ್ರ ಮನನೊಂದಿದ್ದಾರೆ.

Also read: ದುರಾಸೆಯ ಫಲ – ಇತ್ತೀಚೆಗೆ ಮದುವೆಯಾಗಿದ್ದ ಟೆಕ್ಕಿ ಪ್ರಾಣ ಕಳೆದುಕೊಂಡ- ಎಲ್ಲಿ, ಏನಾಗಿತ್ತು?

ಹೊರಗೆ ಹೋದ ನಾಗೂರ್ ಭಾಷಾ ಸಂಜೆಯವರೆಗೂ ಮನೆಗೆ ಬಂದಿರಲಿಲ್ಲ. ಇತ್ತ, ಮುದ್ದಿನ ಮಡದಿ ಜೋತ್ಸ್ನಾಗೆ ಅವರ ತಾಯಿ ಕರೆ ಮಾಡಿದ್ದಾರೆ. ಆದರೆ ಜೋತ್ಸ್ನಾ ಫೋನ್ ಎತ್ತಲಿಲ್ಲ. ಅನುಮಾನ ಬಂದು ಜೋತ್ಸ್ನಾ ತಾಯಿ ತಕ್ಷಣ ಅಳಿಯನಿಗೆ ಕರೆ ಮಾಡಿ ಕೇಳಿದ್ದಾರೆ. ಇದರಿಂದ ಗಾಬರಿಗೆ ಬಿದ್ದ ನಾಗೂರ್ ಭಾಷಾ ಮನೆಗೆ ಓಡೋಡಿ ಬಂದಿದ್ದಾರೆ. ಆದರೆ ಹೆಂಡತಿಯಾದವಳು ಬಾಗಿಲು ತಟ್ಟಿದರೂ ತೆರೆಯಲಿಲ್ಲ. ಅನುಮಾನಗೊಂಡ ನಾಗೂರ್, ಅಕ್ಕಪಕ್ಕದವರ ನೆರವಿನೊಂದಿಗೆ ಬಾಗಿಲು ಒಡೆದು ಒಳ ಹೋಗಿ ನೊಡಿದ್ದಾರೆ.

ಅದಾಗಲೇ ಜೋತ್ಸ್ನಾ ನೇಣು ಬಿಗಿದುಕೊಂಡಿರುವ ಭೀಕರ ದೃಸ್ಯ ಅಲ್ಲಿ ಕಾಣಿಸಿದೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಕೆ ಅದಾಗಲೇ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಅಷ್ಟೊಂದು ಸಣ್ಣ ವಿಚಾರಕ್ಕೆ ಜೋತ್ಸ್ನಾ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಆಕೆಯ ಪತಿ ನಾಗೂರ್ ಭಾಷಾ ಮತ್ತು ಜೋತ್ನಾಳ ಪೋಷಕರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?