Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಲೈಂಗಿಕ ವೀಡಿಯೊಗಳನ್ನು ತೋರಿಸಿ ಚಿತ್ರಹಿಂಸೆ: ಪತಿಯ ವಿಕೃತಿಗೆ ಬೇಸತ್ತು ನವವಿವಾಹಿತೆ ದುರಂತ ಸಾವು

ಹೊಸದಾಗಿ ವಿವಾಹವಾದ ನವ ವಧುವಿನ ಬಾಳಲ್ಲಿ ಘೋರ ಘಟನೆಯೊಂದು ನಡೆದಿದ್ದು, ಪತಿಯ ವಿಕೃತದಿಂದ ನವವಿವಾಹಿತೆ ದುರಂತ ಸಾವು ಕಂಡಿದ್ದಾಳೆ. ಮದವೆಯಾದ ಹೊಸತನದಲ್ಲಿ ಫಸ್ಟ್​​ನೈಟ್​ ಸೇರಿ ಇತರೆ ದಿನಗಳಲ್ಲಿ ಪತ್ನಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಟಾರ್ಚರ್ ಕೊಡುತ್ತಿದ್ದ. ಇದರಿಂದ ಬೇಸತ್ತು ಹೆಂಡತಿ ಸಾವಿನ ಕದ ತಟ್ಟಿದ್ದಾಳೆ.

ತನ್ನ ಲೈಂಗಿಕ ವೀಡಿಯೊಗಳನ್ನು ತೋರಿಸಿ ಚಿತ್ರಹಿಂಸೆ: ಪತಿಯ ವಿಕೃತಿಗೆ ಬೇಸತ್ತು ನವವಿವಾಹಿತೆ ದುರಂತ ಸಾವು
Nagendra Babu
Follow us
ರಮೇಶ್ ಬಿ. ಜವಳಗೇರಾ
|

Updated on:Feb 15, 2025 | 1:12 PM

ವಿಶಾಖಪಟ್ಟಣ, (ಫೆಬ್ರವರಿ 15): ಗಂಡನ ವಿಕೃತ ಕಾಮದಿಂದ ಬೇಸತ್ತು ನವವಿವಾಹಿತೆ ಸಾವಿನ ಕದ ತಟ್ಟಿರುವ ಘಟನೆ ವಿಶಾಖಪಟ್ಟಣಂದ ಗೋಪಾಲಪಟ್ಟಣದ ನಂದಮೂರಿ ಕಾಲೋನಿಯಲ್ಲಿ ನಡೆದಿದೆ. 28 ವರ್ಷದ ವಸಂತ ಆತ್ಮಹತ್ಯೆಗೆ ಶರಣಾದ ನವವಿವಾಹಿತೆ. ಪತಿ ತನ್ನ ಲೈಂಗಿಕ ವೀಡಿಯೊಗಳನ್ನು ತೋರಿಸಿ ಚಿತ್ರಹಿಂಸೆ ನೀಡುತ್ತಿದ್ದನಂತೆ. ಈ ಚಿತ್ರಹಿಂಸೆ ಸಹಿಸಲಾಗದೆ ವಸಂತ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ. ಈ ಸಂಬಂಧ ಪೊಲೀಸರು, ಪತಿ ನಾಗೇಂದ್ರ ಬಾಬುನನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಿದ್ದಾರೆ.

ತನ್ನ ಪತಿ ನಾಗೇಂದ್ರಬಾಬು ಪ್ರತಿದಿನ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಟಾರ್ಚರ್ ಮಾಡುತ್ತಿದ್ದಾನೆ ಎಂದು ಆಕೆ ತನ್ನ ಕುಟುಂಬಸ್ಥರ ಜತೆ ಆಳಲು ತೊಡಿಕೊಂಡಿದ್ದಳು. ಈ ಕುರಿತಾಗಿ ನಾಗೇಂದ್ರಬಾಬು ಜತೆ ಮಾತನಾಡುವುದಾಗಿ ಹೇಳಿದ್ದರು. ಆದರೆ, ಇಷ್ಟರಲ್ಲೇ ವಸಂತ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. ಷನಾಗೇಂದ್ರಬಾಬುನೇ ನಮ್ಮ ಮಗಳಿಗೆ ಟಾರ್ಚರ್ ಕೊಟ್ಟು ಕೊಟ್ಟು ಕೊಲೆ ಮಾಡಿದ್ದಾನೆ ಎಂದು ಮೃತೆ ಕುಟುಂಬಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ: ಪ್ರೀತಿ ನಾಟಕವಾಡಿ ಸರಸ ಸಲ್ಲಾಪ.. 3 ಬಾರಿ ಅಬಾರ್ಷನ್‌..ಮದ್ವೆ ದಿನವೇ ಪ್ರಿಯಕರ ಪರಾರಿ!

28 ವರ್ಷದ ವಸಂತಾ ಹಲವು ಕನಸು ಇಟ್ಟುಕೊಂಡು 34 ವರ್ಷದ ನಾಗೇಂದ್ರ ಬಾಬು ಎನ್ನುವಾತನನ್ನು ಮದುವೆಯಾಗಿದ್ದಳು. ಆದ್ರೆ, ಮದುವೆಯಾದ ಹೊಸತರದಲ್ಲಿ ನಾಗೇಂದ್ರ ಬಾಬುನ ವಿಕೃತ ಮನಸ್ಥಿತಿ ಬಯಲಾಗಿದೆ. ಗಂಡ ಹೆಂಡ್ತಿ ಅಂದಮೇಲೆ ಎಲ್ಲವೂ ಇದ್ದೇ ಇರುತ್ತೆ. ಆದ್ರೆ, ನಾಗೇಂದ್ರ ಬಾಬು ಲೈಂಗಿಕ ವಿಡಿಯೋಗಳನ್ನು ತೋರಿಸಿ ವಸಂತಾಳಿಗೆ ಪ್ರತಿದಿನ ಚಿತ್ರಹಿಂಸೆ ನೀಡಿದ್ದಾನೆ.

ಗಂಡನ ವಿಕೃತ ಕಾಮಕ್ಕೆ ವಸಂತಾ ಸಹಿಸಿಕೊಂಡು ಬಂದಿದ್ದಾಳೆ. ಈ ಬಗ್ಗೆ ತನ್ನ ಪೋಷಕರಿಗೂ ತನಗಾಗುತ್ತಿರುವ ಕಿರುಕುಳದ ಬಗ್ಗೆ ತಿಳಿಸಿದ್ದಾಳೆ. ಕುಟುಂಬಸ್ಥರು ಸಹ ಈ ಬಗ್ಗೆ ಮಾತನಾಡಿ ಬಗೆಹರಿಸೋಣ ಎಂದು ಸಮಾಧಾನಪಡಿಸಿದ್ದರು.

ಆದ್ರೆ, ನಾಗೇಂದ್ರ ಬಾಬುನ ಅಟ್ಟಹಾಸ ದಿನ ಕಳೆದಂತೆ ಹೆಚ್ಚಾಗುತ್ತಲೇ ಇತ್ತು. ಇದರಿಂದ ಬೇಸತ್ತ ವಸಂತಾ ಎಲ್ಲದಕ್ಕೂ ತಾನೇ ಇರಬಾರದು ಎಂದು ಸಾವಿನ ಹಾದಿ ಹಿಡಿದಿದ್ದಾಳೆ. ಈ ಮೂಲಕ ಹಲವು ಕನಸು ಕಂಡಿದ್ದ ವಸಂತಾ ಸಾವಿನ ಮನೆ ಸೇರುವಂತಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:15 am, Sat, 15 February 25

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ