AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ದೇವಸ್ಥಾನದಲ್ಲಿ ಮುತ್ತು ಕೊಟ್ಟು ಫೋಟೋಶೂಟ್; ವಿವಾದಕ್ಕೆ ಕ್ಷಮೆ ಕೇಳಿದ ನವ ದಂಪತಿ

ತಿರುಮಲ ತಿರುಪತಿ ದೇವಸ್ಥಾನದ ಬಳಿಯ ನಿರ್ಬಂಧಿತ ಪ್ರದೇಶಗಳಲ್ಲಿ ಫೋಟೋಶೂಟ್ ಮಾಡಿದ ಕಾರಣಕ್ಕೆ ನವವಿವಾಹಿತ ದಂಪತಿ ವಿವಾದಕ್ಕೆ ಕಾರಣರಾಗಿದ್ದಾರೆ. ಹೊಸದಾಗಿ ಮದುವೆಯಾದ ದಂಪತಿ ಮುತ್ತು ಕೊಟ್ಟು ಫೋಟೋಗೆ ಪೋಸ್ ನೀಡಿದ್ದರು. ಇದೇನೂ ವಿಶೇಷವಲ್ಲ. ಆದರೆ, ಈ ಫೋಟೋ ತೆಗೆಸಿಕೊಂಡಿದ್ದು ತಿರುಪತಿ ದೇವಸ್ಥಾನದ ಒಳಗೆ ಎಂಬುದು ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಘಟನೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಆ ನವವಿವಾಹಿತ ದಂಪತಿ ಕ್ಷಮೆ ಯಾಚಿಸಿದ್ದಾರೆ.

ತಿರುಪತಿ ದೇವಸ್ಥಾನದಲ್ಲಿ ಮುತ್ತು ಕೊಟ್ಟು ಫೋಟೋಶೂಟ್; ವಿವಾದಕ್ಕೆ ಕ್ಷಮೆ ಕೇಳಿದ ನವ ದಂಪತಿ
Tirupati Photoshoot
ಸುಷ್ಮಾ ಚಕ್ರೆ
|

Updated on: Jan 30, 2026 | 3:06 PM

Share

ತಿರುಮಲ, ಜನವರಿ 30: ತಮಿಳುನಾಡಿನ ತಿರುವಣ್ಣಾಮಲೈನ ನವವಿವಾಹಿತ ದಂಪತಿ ತಿರುಮಲ ತಿರುಪತಿ ದೇವಸ್ಥಾನದ (TTD) ಆವರಣದಲ್ಲಿ ಫೋಟೋಶೂಟ್ ನಡೆಸಿದ್ದರು. ಆಗಷ್ಟೇ ವಿವಾಹವಾಗಿದ್ದ ದಂಪತಿ ಈ ವಿವಾದಕ್ಕೆ ಕ್ಷಮೆ ಯಾಚಿಸಿದ್ದಾರೆ. ತಿರುಮಲ ಮತ್ತು ಗಾಯತ್ರಿ ಎಂಬ ದಂಪತಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿರುವ ತಿರುಮಲದ ಕಲ್ಯಾಣ ವೇದಿಕೆಯಲ್ಲಿ ವಿವಾಹವಾಗಿದ್ದರು. ಇದಾದ ನಂತರ, ಆ ದಂಪತಿ ನಿಯಮಗಳನ್ನು ಉಲ್ಲಂಘಿಸಿ ಗೊಲ್ಲಮಂಟಪದಲ್ಲಿ ಫೋಟೋಗಳಿಗೆ ಪೋಸ್ ನೀಡಿದರು.

ತಿರುಮಲ ಶ್ರೀ ವೆಂಕಟೇಶ್ವರ ದೇವಸ್ಥಾನದ ಬಳಿ ನವವಿವಾಹಿತ ದಂಪತಿಗಳನ್ನು ಒಳಗೊಂಡ ಫೋಟೋಶೂಟ್ ಯಾತ್ರಿಕರು ಮತ್ತು ಭಕ್ತರಲ್ಲಿ ವ್ಯಾಪಕ ಆಕ್ರೋಶವನ್ನು ಹುಟ್ಟುಹಾಕಿತ್ತು. ಈ ಘಟನೆಯು ಮತ್ತೊಮ್ಮೆ ದೇವಾಲಯದ ನಿಯಮಗಳ ಉಲ್ಲಂಘನೆ ಮತ್ತು ಪವಿತ್ರ ಪಟ್ಟಣವಾದ ತಿರುಮಲದಲ್ಲಿ ಭದ್ರತಾ ಲೋಪಗಳ ಬಗ್ಗೆ ಗಮನ ಸೆಳೆದಿದೆ.

ಇದನ್ನೂ ಓದಿ: ತಿರುಪತಿ ತಿಮ್ಮಪ್ಪನ ದರ್ಶನದ ಬುಕಿಂಗ್​ನಲ್ಲಿ ನಾಳೆಯಿಂದಲೇ ಹೊಸ ಬದಲಾವಣೆ

ದೇವಾಲಯದ ಒಳಗೆ ಫೋಟೋಶೂಟ್ ನಿಷೇಧದ ಬಗ್ಗೆ ತಿಳಿಯದೆ ಫೋಟೋ ತೆಗೆಸಿಕೊಂಡಿದ್ದಕ್ಕೆ ಅವರು ಕ್ಷಮೆ ಯಾಚಿಸಿದ್ದಾರೆ. ನಿಯಮಗಳನ್ನು ತಿಳಿಸಿದ ನಂತರ ಫೋಟೋಗಳನ್ನು ಡಿಲೀಟ್ ಕೂಡ ಮಾಡಿದ್ದಾರೆ. ತಮ್ಮ ತಪ್ಪಿಗೆ ಪ್ರಾಯಶ್ಚಿತ್ತವಾಗಿ, ದಂಪತಿಗಳು ಶ್ರೀ ವಾರಿ ಸೇವೆ (ವೆಂಕಟೇಶ್ವರನಿಗೆ ಸೇವೆ) ಮೂಲಕ ಸೇವೆ ಸಲ್ಲಿಸಲು ಇಚ್ಛೆ ವ್ಯಕ್ತಪಡಿಸಿದ್ದಾರೆ. ಭಕ್ತಿ ಸೇವೆಯ ಮೂಲಕ ತಮ್ಮ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳುವ ಬಯಕೆಯನ್ನು ಅವರು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Tirupati Security Breach: ತಿರುಪತಿ ದೇಗುಲದಲ್ಲಿ ಭಾರಿ ಭದ್ರತಾ ಲೋಪ, ಗೋಪುರ ಏರಿ ಕುಡುಕನಿಂದ ಅವಾಂತರ

ಗೊಲ್ಲ ಮಂಟಪದಿಂದ ಅಖಿಲಾಂಡಂ ವಲಯದವರೆಗಿನ ಸೂಕ್ಷ್ಮ ಪ್ರದೇಶಗಳಲ್ಲಿ ದಂಪತಿ ಫೋಟೋಗೆ ಪೋಸ್ ನೀಡಿದರು. ಈ ಸ್ಥಳಗಳು ವೃತ್ತಿಪರ ಫೋಟೋಶೂಟ್, ವೀಡಿಯೊಗ್ರಫಿ ಮತ್ತು ಸಾಮಾಜಿಕ ಮಾಧ್ಯಮ ರೀಲ್ ರೆಕಾರ್ಡ್ ಮಾಡುವುದನ್ನು ಸ್ಪಷ್ಟವಾಗಿ ನಿಷೇಧಿಸುವ ಕಟ್ಟುನಿಟ್ಟಿನ ನಿಯಮಗಳ ಅಡಿಯಲ್ಲಿ ಬರುತ್ತವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?