AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿರ್ಭೂಮ್​ ಹಿಂಸಾಚಾರ; ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಜೋಡಿ ಸಜೀವ ದಹನ, ಪಾರಾಗುವ ಪ್ರಯತ್ನ ಫಲಿಸಲಿಲ್ಲ

ಮಧ್ಯರಾತ್ರಿ ಹೊತ್ತಿಗೆ ಗಲಾಟೆ ಶುರುವಾಗಿ ಇವರಿದ್ದ ಮನೆಯನ್ನೂ ಯಾರೋ ಲಾಕ್​ ಮಾಡಿದರು. ಕೂಡಲೇ ಸಜಿದುರ್ ತನ್ನ ಸ್ನೇಹಿತ ಮಜಿಮ್​ ಎಂಬುವನಿಗೆ ಕರೆ ಮಾಡಿ, ಯಾರೋ ನಮ್ಮ ಮನೆಯನ್ನು ಲಾಕ್​ ಮಾಡಿದ್ದಾರೆ. ಈಗಾಗಲೇ ಬೆಂಕಿಯನ್ನೂ ಹಚ್ಚಿದ್ದಾರೆ ಎಂದೂ ಹೇಳಿದ್ದರು.

ಬಿರ್ಭೂಮ್​ ಹಿಂಸಾಚಾರ; ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಜೋಡಿ ಸಜೀವ ದಹನ, ಪಾರಾಗುವ ಪ್ರಯತ್ನ ಫಲಿಸಲಿಲ್ಲ
ಬಿರ್ಭೂಮ್​ ಹಿಂಸಾಚಾರದಲ್ಲಿ ಮೃತಪಟ್ಟ ಜೋಡಿ (ಫೋಟೋ ಕೃಪೆ: ಇಂಡಿಯಾ ಟುಡೆ)
TV9 Web
| Updated By: Lakshmi Hegde|

Updated on:Mar 24, 2022 | 8:33 AM

Share

ಬಿರ್ಭೂಮ್​ ಹಿಂಸಾಚಾರ ದೇಶವನ್ನೇ ನಲುಗಿಸಿದೆ. ಬರೋಸಾಲ್​ ಗ್ರಾಮ ಪಂಚಾಯಿತಿ ಉಪಾಧ್ಯಕ್ಷನ ಹತ್ಯೆಯಿಂದ ರೊಚ್ಚಿಗೆದ್ದ ಅವರ ಬೆಂಬಲಿಗರು ರಾಂಪುರಹತ್​​ನಲ್ಲಿ ಹಿಂಸಾಚಾರ ಸೃಷ್ಟಿಸಿದ್ದಷ್ಟೇ ಅಲ್ಲದೆ, ಭಗ್ಟುಯಿ ಮತ್ತು ನನೂರ್​​ ಗ್ರಾಮಗಳಲ್ಲಿ ಹಲವು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಇದರಲ್ಲಿ ಇಬ್ಬರು ಮಕ್ಕಳೂ ಸೇರಿ 8 ಮಂದಿ ಸಜೀವದಹನಗೊಂಡಿದ್ದಾರೆ. ಹೊಸದಾಗಿ ಮದುವೆಯಾದ ಜೋಡಿಯೊಂದು ಈ ದುರಂತಕ್ಕೆ ಬಲಿಯಾಗಿದ್ದು ಅವರ ಕುಟುಂಬದವರು, ಸಂಬಂಧಿಕರ ಶೋಕವೀಗ ಮುಗಿಲುಮುಟ್ಟಿದೆ. ಲಿಲಿ ಖಾಟೂನ್​ ಮತ್ತು ಖಾಜಿ ಸಜಿದೂರ್​​ ಮೃತರಾಗಿದ್ದು, ಇವರು ಜನವರಲ್ಲಿ ವಿವಾಹವಾಗಿದ್ದರು. ಭಗ್ಟುಯಿ ಗ್ರಾಮದಲ್ಲಿರುವ ಲಿಲಿ ಖಾಟೂನ್​​ರ ತಾಯಿಯ ಮನೆಗೆ ಭೇಟಿ ಕೊಟ್ಟಿದ್ದರು.

ಆದರೆ ಮಧ್ಯರಾತ್ರಿ ಹೊತ್ತಿಗೆ ಗಲಾಟೆ ಶುರುವಾಗಿ ಇವರಿದ್ದ ಮನೆಯನ್ನೂ ಯಾರೋ ಲಾಕ್​ ಮಾಡಿದರು. ಕೂಡಲೇ ಸಜಿದುರ್ ತನ್ನ ಸ್ನೇಹಿತ ಮಜಿಮ್​ ಎಂಬುವನಿಗೆ ಕರೆ ಮಾಡಿ, ಯಾರೋ ನಮ್ಮ ಮನೆಯನ್ನು ಲಾಕ್​ ಮಾಡಿದ್ದಾರೆ. ಈಗಾಗಲೇ ಬೆಂಕಿಯನ್ನೂ ಹಚ್ಚಿದ್ದಾರೆ. ಕೂಡಲೇ ಪೊಲೀಸರಿಗೆ ಕರೆ ಮಾಡು ಎಂದು ಹೇಳಿದ್ದಾರೆ. ಮಜೀಮ್​ ಕೂಡಲೇ ಸಜಿದುರ್​ ತಂದೆಗೆ ಕರೆಮಾಡಿ ವಿಷಯ ತಿಳಿಸಿದ್ದಾನೆ. ಅವರು ಮತ್ತೆ ವಾಪಸ್​ ಸಜಿದುರ್​ಗೆ ಫೋನ್​ ಮಾಡಿದರೆ ಕನೆಕ್ಟ್ ಆಗಲಿಲ್ಲ. ಆದರೆ ಬಳಿಕ ಮುಂಜಾನೆಯೇ ಆ ಸ್ಥಳಕ್ಕೆ ಬಂದರೆ ಸಜಿದುರ್​ ಮತ್ತು ಅವರ ಪತ್ನಿಯ ದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ರಾಷ್ಟ್ರೀಯ ಹೆದ್ದಾರಿಯ ಅಂಗಡಿಯೊಂದರಲ್ಲಿ ನಿಂತಿದ್ದ ಉಪಾಧ್ಯಕ್ಷ ಭಡು ಶೇಖ್​ ಅವರನ್ನು, ಬೈಕ್​ನಲ್ಲಿ ಬಂದ ನಾಲ್ವರು ಮುಸುಕುಧಾರಿಗಳು ಕಚ್ಚಾ  ಬಾಂಬ್​ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಆದರೆ ಭಡು ಶೇಖ್​ ಬೆಂಬಲಿಗರು ಮಾತ್ರ ತಾಳ್ಮೆ ಕಳೆದುಕೊಂಡು 12 ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಇಟ್ಟಿದ್ದಾರೆ.  ಇಲ್ಲಿಯವರೆಗೆ ಘಟನೆಗೆ ಸಂಬಂಧಪಟ್ಟಂತೆ ಸುಮಾರು 20 ಜನರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಈ ಪ್ರಕರಣವನ್ನು ಕೋಲ್ಕತ್ತ ಹೈಕೋರ್ಟ್ ಸುಮೊಟೊ (ಸ್ವಯಂಪ್ರೇರಿತ) ವಿಚಾರಣೆ ನಡೆಸಿತು. ಸೂಕ್ತ ವಿಚಾರಣೆ ನಡೆದು, ತೀರ್ಪು ಹೊರಬರಬೇಕು ಎಂದರೆ ಸಾಕ್ಷಿಗಳನ್ನು ಸಂರಕ್ಷಿಸಬೇಕು. ಹೀಗಾಗಿ ಕ್ರೈಂ-ಹಿಂಸಾಚಾರ ನಡೆದ ಸ್ಥಳಗಳನ್ನು ಎಲ್ಲ ಆಯಾಮಗಳಿಂದಲೂ ತೋರಿಸುವ ರೀತಿಯಲ್ಲಿ ಆ ಜಾಗದಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಬೇಕು. ಸಾಕ್ಷಿ ನಾಶಕ್ಕೆ ಅವಕಾಶ ಕೊಡಬಾರದು ಮತ್ತು ಈ ಕೆಲಸವನ್ನು ಜಿಲ್ಲಾ ನ್ಯಾಯಾಧೀಶರಾದ ಪುರ್ಬಾ ಭುರ್ದಾವನ್ ಸಮ್ಮುಖದಲ್ಲಿಯೇ ನಡೆಸಬೇಕು ಎಂದು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಇದನ್ನೂ ಓದಿ: ‘ಜೇಮ್ಸ್​​’ ಚಿತ್ರ ತೆಗೆಯದಂತೆ ಫಿಲ್ಮ್ ಚೇಂಬರ್​ಗೆ ಸಿಎಂ ಕಚೇರಿಯಿಂದ ಫೋನ್​​ ಕರೆ; ಮಹತ್ವದ ಸಭೆಗೆ ಸಿದ್ಧತೆ

Published On - 8:22 am, Thu, 24 March 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?