AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುತ್ತುವರೆದ ಕೋತಿಗಳು, ಭಯದಿಂದ ಹಿಂದೆ ಕಾಲಿಟ್ಟು ಆಯತಪ್ಪಿ ಬೆಟ್ಟದ ಮೇಲಿಂದ ಬಿದ್ದು ನವವಿವಾಹಿತೆ ಸಾವು

ತೂತುಕುಡಿ ಜಿಲ್ಲೆಯ ಕಜ಼ುಗುಮಲೈನಲ್ಲಿ ಶನಿವಾರ ಒಂದು ಘೋರ ದುರಂತ ಸಂಭವಿಸಿದೆ. ಕೋತಿಗಳ ಹಿಂಡು ದಿಢೀರ್ ಸುತ್ತುವರೆದಿದ್ದರಿಂದ ಗಾಬರಿಗೊಂಡ ನವವಿವಾಹಿತೆ ಅನಿತಾ, ಸಮತೋಲನ ಕಳೆದುಕೊಂಡು ಬೆಟ್ಟದಿಂದ ಕೆಳಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿದೇಶದಿಂದ ಮರಳಿದ ಪತಿಯೊಂದಿಗೆ ದೇವಸ್ಥಾನಕ್ಕೆ ಬಂದಾಗ ಈ ಘಟನೆ ನಡೆದಿದ್ದು, ಕಂದಕಕ್ಕೆ ಬಿದ್ದ ಅನಿತಾ ರಕ್ತಸ್ರಾವದಿಂದ ಕೊನೆಯುಸಿರೆಳೆದರು. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸುತ್ತುವರೆದ ಕೋತಿಗಳು, ಭಯದಿಂದ ಹಿಂದೆ ಕಾಲಿಟ್ಟು ಆಯತಪ್ಪಿ ಬೆಟ್ಟದ ಮೇಲಿಂದ ಬಿದ್ದು ನವವಿವಾಹಿತೆ ಸಾವು
ಮಹಿಳೆ
ನಯನಾ ರಾಜೀವ್
|

Updated on: Jun 27, 2026 | 10:06 AM

Share

ತೂತುಕುಡಿ, ಜೂನ್ 27: ತಮಿಳುನಾಡಿನ ತೂತುಕುಡಿ ಜಿಲ್ಲೆಯ ಕಜುಗುಮಲೈನಲ್ಲಿ ಶನಿವಾರ ಒಂದು ಘೋರ ದುರಂತ ಸಂಭವಿಸಿದೆ. ಕೋತಿ(Monkey)ಗಳ ಹಿಂಡು ದಿಢೀರ್ ಸುತ್ತುವರೆದಿದ್ದರಿಂದ ಗಾಬರಿಗೊಂಡು ಸಮತೋಲನ ಕಳೆದುಕೊಂಡ ನವವಿವಾಹಿತೆ ಬೆಟ್ಟದ ತುದಿಯಿಂದ ಕೆಳಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ದುರ್ದೈವಿಯನ್ನು ದಕ್ಷಿಣ ತಿಟ್ಟಂಕುಳಂ ನಿವಾಸಿ ಅನಿತಾ ಎಂದು ಗುರುತಿಸಲಾಗಿದೆ. ಇವರಿಗೆ ಕಳೆದ ತಿಂಗಳಷ್ಟೇ ವಿದೇಶದಲ್ಲಿ ಕೆಲಸ ಮಾಡುವ ಸುರೇಶ್ (29) ಅವರೊಂದಿಗೆ ವಿವಾಹವಾಗಿತ್ತು. ಸುರೇಶ್ ಇತ್ತೀಚೆಗಷ್ಟೇ ಊರಿಗೆ ಮರಳಿದ್ದರು. ದಂಪತಿ ವಿಶೇಷ ಪ್ರಾರ್ಥನೆ ಸಲ್ಲಿಸಲು ಕಜುಗುಮಲೈನ ಪ್ರಸಿದ್ಧ ಕಲುಗಸಲಮೂರ್ತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ಮುಖ್ಯ ದೇವಸ್ಥಾನದಲ್ಲಿ ಪೂಜೆ ಮುಗಿಸಿದ ಬಳಿಕ, ಇಬ್ಬರೂ ಬೆಟ್ಟದ ಮೇಲಿರುವ ಉಚಿಪಿಳ್ಳಯಾರ್ ದೇವಸ್ಥಾನಕ್ಕೆ ಹತ್ತಿದ್ದರು. ಈ ವೇಳೆ ಅಲ್ಲಿ ನವದಂಪತಿ ಕೋತಿಗಳಿಗೆ ಹಣ್ಣುಗಳನ್ನು ತಿನ್ನಿಸಲು ಮುಂದಾಗಿದ್ದಾರೆ. ಆದರೆ, ಹಣ್ಣುಗಳನ್ನು ನೋಡಿ ಕದನಕ್ಕಿಳಿದ ಹತ್ತಾರು ಕೋತಿಗಳು ಇದ್ದಕ್ಕಿದ್ದಂತೆ ಅನಿತಾ ಅವರನ್ನು ಅತ್ಯಂತ ಹತ್ತಿರದಿಂದ ಸುತ್ತುವರೆದಿವೆ. ಇದರಿಂದ ತೀವ್ರ ಭಯಭೀತರಾದ ಅನಿತಾ, ಕೋತಿಗಳಿಂದ ತಪ್ಪಿಸಿಕೊಳ್ಳಲು ಹಿಂದೆ ಸರಿಯುವಾಗ ಕಾಲು ಜಾರಿ ಕಂದಕಕ್ಕೆ ಬಿದ್ದಿದ್ದಾರೆ.

ಮತ್ತಷ್ಟು ಓದಿ: ನಾಯಿ ಮರಿಯನ್ನು ಎತ್ತಿಕೊಂಡು ಮರದ ಮೇಲೆ ಹೋಗಿ ಕುಳಿತ ಕೋತಿ

ಬೆಟ್ಟದಿಂದ ಬಿದ್ದ ಅನಿತಾ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಣ್ಣೆದುರೇ ಪತ್ನಿ ಸಾವನ್ನಪ್ಪಿದ್ದನ್ನು ಕಂಡು ಪತಿ ಸುರೇಶ್ ಸಂಪೂರ್ಣ ಧೃತಿಗೆಟ್ಟಿದ್ದು, ಮೃತದೇಹದ ಪಕ್ಕದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಧಾವಿಸಿದ ಕಜುಗುಮಲೈ ಅಗ್ನಿಶಾಮಕ ದಳ ಮತ್ತು ಪೊಲೀಸರು ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಈ ರಾಶಿಯವರಿಗೆ ಇಂದು ಅದೃಷ್ಟ ಕೂಡಿ ಬರಲಿದೆ
ಈ ರಾಶಿಯವರಿಗೆ ಇಂದು ಅದೃಷ್ಟ ಕೂಡಿ ಬರಲಿದೆ
ಚಿಕ್ಕಬಳ್ಳಾಪುರ: ಅನ್ನಭಾಗ್ಯ ಯೋಜನೆಯ ಗೋಧಿ ಅಕ್ರಮ ಸಾಗಾಟ, 14 ಟನ್ ವಶಕ್ಕೆ
ಚಿಕ್ಕಬಳ್ಳಾಪುರ: ಅನ್ನಭಾಗ್ಯ ಯೋಜನೆಯ ಗೋಧಿ ಅಕ್ರಮ ಸಾಗಾಟ, 14 ಟನ್ ವಶಕ್ಕೆ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ