AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುತ್ತುವರೆದ ಕೋತಿಗಳು, ಭಯದಿಂದ ಹಿಂದೆ ಕಾಲಿಟ್ಟು ಆಯತಪ್ಪಿ ಬೆಟ್ಟದ ಮೇಲಿಂದ ಬಿದ್ದು ನವವಿವಾಹಿತೆ ಸಾವು

ತೂತುಕುಡಿ ಜಿಲ್ಲೆಯ ಕಜ಼ುಗುಮಲೈನಲ್ಲಿ ಶನಿವಾರ ಒಂದು ಘೋರ ದುರಂತ ಸಂಭವಿಸಿದೆ. ಕೋತಿಗಳ ಹಿಂಡು ದಿಢೀರ್ ಸುತ್ತುವರೆದಿದ್ದರಿಂದ ಗಾಬರಿಗೊಂಡ ನವವಿವಾಹಿತೆ ಅನಿತಾ, ಸಮತೋಲನ ಕಳೆದುಕೊಂಡು ಬೆಟ್ಟದಿಂದ ಕೆಳಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿದೇಶದಿಂದ ಮರಳಿದ ಪತಿಯೊಂದಿಗೆ ದೇವಸ್ಥಾನಕ್ಕೆ ಬಂದಾಗ ಈ ಘಟನೆ ನಡೆದಿದ್ದು, ಕಂದಕಕ್ಕೆ ಬಿದ್ದ ಅನಿತಾ ರಕ್ತಸ್ರಾವದಿಂದ ಕೊನೆಯುಸಿರೆಳೆದರು. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸುತ್ತುವರೆದ ಕೋತಿಗಳು, ಭಯದಿಂದ ಹಿಂದೆ ಕಾಲಿಟ್ಟು ಆಯತಪ್ಪಿ ಬೆಟ್ಟದ ಮೇಲಿಂದ ಬಿದ್ದು ನವವಿವಾಹಿತೆ ಸಾವು
ಮಹಿಳೆ
ನಯನಾ ರಾಜೀವ್
|

Updated on: Jun 27, 2026 | 10:06 AM

Share

ತೂತುಕುಡಿ, ಜೂನ್ 27: ತಮಿಳುನಾಡಿನ ತೂತುಕುಡಿ ಜಿಲ್ಲೆಯ ಕಜುಗುಮಲೈನಲ್ಲಿ ಶನಿವಾರ ಒಂದು ಘೋರ ದುರಂತ ಸಂಭವಿಸಿದೆ. ಕೋತಿ(Monkey)ಗಳ ಹಿಂಡು ದಿಢೀರ್ ಸುತ್ತುವರೆದಿದ್ದರಿಂದ ಗಾಬರಿಗೊಂಡು ಸಮತೋಲನ ಕಳೆದುಕೊಂಡ ನವವಿವಾಹಿತೆ ಬೆಟ್ಟದ ತುದಿಯಿಂದ ಕೆಳಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ದುರ್ದೈವಿಯನ್ನು ದಕ್ಷಿಣ ತಿಟ್ಟಂಕುಳಂ ನಿವಾಸಿ ಅನಿತಾ ಎಂದು ಗುರುತಿಸಲಾಗಿದೆ. ಇವರಿಗೆ ಕಳೆದ ತಿಂಗಳಷ್ಟೇ ವಿದೇಶದಲ್ಲಿ ಕೆಲಸ ಮಾಡುವ ಸುರೇಶ್ (29) ಅವರೊಂದಿಗೆ ವಿವಾಹವಾಗಿತ್ತು. ಸುರೇಶ್ ಇತ್ತೀಚೆಗಷ್ಟೇ ಊರಿಗೆ ಮರಳಿದ್ದರು. ದಂಪತಿ ವಿಶೇಷ ಪ್ರಾರ್ಥನೆ ಸಲ್ಲಿಸಲು ಕಜುಗುಮಲೈನ ಪ್ರಸಿದ್ಧ ಕಲುಗಸಲಮೂರ್ತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ಮುಖ್ಯ ದೇವಸ್ಥಾನದಲ್ಲಿ ಪೂಜೆ ಮುಗಿಸಿದ ಬಳಿಕ, ಇಬ್ಬರೂ ಬೆಟ್ಟದ ಮೇಲಿರುವ ಉಚಿಪಿಳ್ಳಯಾರ್ ದೇವಸ್ಥಾನಕ್ಕೆ ಹತ್ತಿದ್ದರು. ಈ ವೇಳೆ ಅಲ್ಲಿ ನವದಂಪತಿ ಕೋತಿಗಳಿಗೆ ಹಣ್ಣುಗಳನ್ನು ತಿನ್ನಿಸಲು ಮುಂದಾಗಿದ್ದಾರೆ. ಆದರೆ, ಹಣ್ಣುಗಳನ್ನು ನೋಡಿ ಕದನಕ್ಕಿಳಿದ ಹತ್ತಾರು ಕೋತಿಗಳು ಇದ್ದಕ್ಕಿದ್ದಂತೆ ಅನಿತಾ ಅವರನ್ನು ಅತ್ಯಂತ ಹತ್ತಿರದಿಂದ ಸುತ್ತುವರೆದಿವೆ. ಇದರಿಂದ ತೀವ್ರ ಭಯಭೀತರಾದ ಅನಿತಾ, ಕೋತಿಗಳಿಂದ ತಪ್ಪಿಸಿಕೊಳ್ಳಲು ಹಿಂದೆ ಸರಿಯುವಾಗ ಕಾಲು ಜಾರಿ ಕಂದಕಕ್ಕೆ ಬಿದ್ದಿದ್ದಾರೆ.

ಮತ್ತಷ್ಟು ಓದಿ: ನಾಯಿ ಮರಿಯನ್ನು ಎತ್ತಿಕೊಂಡು ಮರದ ಮೇಲೆ ಹೋಗಿ ಕುಳಿತ ಕೋತಿ

ಬೆಟ್ಟದಿಂದ ಬಿದ್ದ ಅನಿತಾ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಣ್ಣೆದುರೇ ಪತ್ನಿ ಸಾವನ್ನಪ್ಪಿದ್ದನ್ನು ಕಂಡು ಪತಿ ಸುರೇಶ್ ಸಂಪೂರ್ಣ ಧೃತಿಗೆಟ್ಟಿದ್ದು, ಮೃತದೇಹದ ಪಕ್ಕದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಧಾವಿಸಿದ ಕಜುಗುಮಲೈ ಅಗ್ನಿಶಾಮಕ ದಳ ಮತ್ತು ಪೊಲೀಸರು ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ಕಂದಮ್ಮ’ ಹಾಡಿನ ವಿಚಾರದಲ್ಲಿ ಮಗಳ ಜತೆ ದುನಿಯಾ ವಿಜಯ್ ಪ್ರೀತಿಯ ಗಲಾಟೆ
‘ಕಂದಮ್ಮ’ ಹಾಡಿನ ವಿಚಾರದಲ್ಲಿ ಮಗಳ ಜತೆ ದುನಿಯಾ ವಿಜಯ್ ಪ್ರೀತಿಯ ಗಲಾಟೆ
ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು
ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು
ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕುಮಾರಸ್ವಾಮಿ ಭಾವುಕ ಮಾತು
ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕುಮಾರಸ್ವಾಮಿ ಭಾವುಕ ಮಾತು
ಮಣ್ಣಲ್ಲಿ ಮಣ್ಣಾದ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ‘ಚೆನ್ನಮ್ಮ‘
ಮಣ್ಣಲ್ಲಿ ಮಣ್ಣಾದ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ‘ಚೆನ್ನಮ್ಮ‘
ಅಂತ್ಯಕ್ರಿಯೆಗೂ ಮುನ್ನ ಚೆನ್ನಮ್ಮನ ಬಗ್ಗೆ ಹೆಚ್​​​​ಡಿಡಿ ಭಾವುಕ ಮಾತು
ಅಂತ್ಯಕ್ರಿಯೆಗೂ ಮುನ್ನ ಚೆನ್ನಮ್ಮನ ಬಗ್ಗೆ ಹೆಚ್​​​​ಡಿಡಿ ಭಾವುಕ ಮಾತು
ಪ್ರೀತಿಯ ಚುಂಬನ: ಪುತ್ರ ರೇವಣ್ಣರಿಂದ ತಾಯಿಗೆ ಅಂತಿನ ನಮನ
ಪ್ರೀತಿಯ ಚುಂಬನ: ಪುತ್ರ ರೇವಣ್ಣರಿಂದ ತಾಯಿಗೆ ಅಂತಿನ ನಮನ
ತಾಯಿ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕಿದ ಹೆಚ್​​​​.ಡಿ ಕುಮಾರಸ್ವಾಮಿ
ತಾಯಿ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕಿದ ಹೆಚ್​​​​.ಡಿ ಕುಮಾರಸ್ವಾಮಿ
ಚೆನ್ನಮ್ಮರ ಅಂತಿಮ ವಿಧಿವಿಧಾನ ಕಾರ್ಯ ನೆರವೇರಿಸುವವರು ಇವರೇ
ಚೆನ್ನಮ್ಮರ ಅಂತಿಮ ವಿಧಿವಿಧಾನ ಕಾರ್ಯ ನೆರವೇರಿಸುವವರು ಇವರೇ
ಚನ್ನಮ್ಮ ಪಾರ್ಥಿವ ಶರೀರ ಹೊತ್ತು ತರಲು ಹೂವಿನ ಪಲ್ಲಕಿ ಹೇಗಿದೆ ನೋಡಿ
ಚನ್ನಮ್ಮ ಪಾರ್ಥಿವ ಶರೀರ ಹೊತ್ತು ತರಲು ಹೂವಿನ ಪಲ್ಲಕಿ ಹೇಗಿದೆ ನೋಡಿ
ಸೇತುವೆ ಸರಳು ಕಟ್: ರಾಯಚೂರು-ಮಂತ್ರಾಲಯ ಮಾರ್ಗದಲ್ಲಿ ಟ್ರಾಫಿಕ್‌ ಜಾಮ್‌
ಸೇತುವೆ ಸರಳು ಕಟ್: ರಾಯಚೂರು-ಮಂತ್ರಾಲಯ ಮಾರ್ಗದಲ್ಲಿ ಟ್ರಾಫಿಕ್‌ ಜಾಮ್‌