ಪತಿಯ ಹಣೆಗೆ ಬಂದೂಕಿಟ್ಟು, ನವವಿವಾಹಿತೆಯನ್ನು ಅಪಹರಿಸಿದ ದುಷ್ಕರ್ಮಿಗಳು

ನವವಿವಾಹಿತೆಯನ್ನು ದುಷ್ಕರ್ಮಿಗಳು ಅಪಹರಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.ದುಷ್ಕರ್ಮಿಗಳು ಮೂರು ದ್ವಿಚಕ್ರವಾಹನಗಳಲ್ಲಿ ಗ್ರಾಮಕ್ಕೆ ಬಂದಿದ್ದಾರೆ. ಈ ವೇಳೆ ಜಿತೇಂದ್ರ ಸಿಸೋಡಿಯಾ ಹಾಗೂ ಅವರ ಪತ್ನಿ ಅನಿತಾ ಮನೆಯಲ್ಲಿ ಇದ್ದರು.ಮನೆಗೆ ನುಗ್ಗಿದ ದುಷ್ಕರ್ಮಿಗಳು ಅನಿತಾ ಅವರನ್ನು ಬಲವಂತವಾಗಿ ಅಪಹರಿಸಿ ಕರೆದೊಯ್ದಿದ್ದಾರೆ.

ಪತಿಯ ಹಣೆಗೆ ಬಂದೂಕಿಟ್ಟು, ನವವಿವಾಹಿತೆಯನ್ನು ಅಪಹರಿಸಿದ ದುಷ್ಕರ್ಮಿಗಳು
Follow us
|

Updated on: Jun 14, 2024 | 9:39 AM

ಪತಿ ಹಣೆಗೆ ಬಂದೂಕಿಟ್ಟು ನವವಿವಾಹಿತೆಯನ್ನು ದುಷ್ಕರ್ಮಿಗಳು ಅಪಹರಿಸಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್​ನಲ್ಲಿ ನಡೆದಿದೆ. ಮಹಿಳೆಯನ್ನು 6 ಮಂದಿ ಸೇರಿ ಅಪಹರಿಸಿದ್ದಾರೆ. ದುಷ್ಕರ್ಮಿಗಳು ಮೂರು ದ್ವಿಚಕ್ರವಾಹನಗಳಲ್ಲಿ ಗ್ರಾಮಕ್ಕೆ ಬಂದಿದ್ದಾರೆ. ಈ ವೇಳೆ ಜಿತೇಂದ್ರ ಸಿಸೋಡಿಯಾ ಹಾಗೂ ಅವರ ಪತ್ನಿ ಅನಿತಾ ಮನೆಯಲ್ಲಿ ಇದ್ದರು.ಮನೆಗೆ ನುಗ್ಗಿದ ದುಷ್ಕರ್ಮಿಗಳು ಅನಿತಾ ಅವರನ್ನು ಬಲವಂತವಾಗಿ ಅಪಹರಿಸಿ ಕರೆದೊಯ್ದಿದ್ದಾರೆ. ಈ ಬಗ್ಗೆ ನವವಿವಾಹಿತೆ ಪತಿ ಜಿತೇಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ತನ್ನ ಪತ್ನಿಯನ್ನು ಅಪಹರಿಸಿದ ಒಬ್ಬ ಕ್ರಿಮಿನಲ್ ತನಗೆ ಗೊತ್ತು ಎಂದು ಜಿತೇಂದ್ರ ಹೇಳಿದ್ದಾನೆ. ದುಷ್ಕರ್ಮಿ ತನ್ನ ಐವರು ಸಹಚರರೊಂದಿಗೆ ಗುರುವಾರ ಮಧ್ಯಾಹ್ನ 3 ಗಂಟೆಗೆ ತನ್ನ ಮನೆಗೆ ಬಂದಿದ್ದಾನೆ ಎಂದು ಹೇಳಿದರು. ಆಗ ಆಕಾಶ್ ಜಿತೇಂದ್ರನ ಹಣೆಗೆ ಗನ್ ತೋರಿಸಿ ಕೊಲೆ ಬೆದರಿಕೆ ಹಾಕಿದ್ದಾನೆ. ಇದಾದ ಬಳಿಕ ಅವರ ಪತ್ನಿ ಅನಿತಾ ಅವರನ್ನು ಅಪಹರಿಸಿದ್ದಾರೆ.

ಗಲಾಟೆಯಾದಾಗ ಅಕ್ಕಪಕ್ಕದವರೂ ಅಲ್ಲಿಗೆ ಬಂದರು. ಅವರು ದುಷ್ಕರ್ಮಿಗಳನ್ನು ಬೆನ್ನಟ್ಟಿದರು. ಬಳಿಕ ಇಬ್ಬರು ಆರೋಪಿಗಳು ಸಿಕ್ಕಿಬಿದ್ದರು.

ಎರಡು ತಿಂಗಳ ಹಿಂದೆ ಮದುವೆ ನಡೆದಿತ್ತು ನಂತರ ಇಬ್ಬರೂ ದುಷ್ಕರ್ಮಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಎರಡು ತಿಂಗಳ ಹಿಂದೆಯಷ್ಟೇ ಅನಿತಾ ಅವರನ್ನು ಮದುವೆಯಾಗಿರುವುದಾಗಿ ಜಿತೇಂದ್ರ ತಿಳಿಸಿದ್ದಾರೆ. ದುಷ್ಕರ್ಮಿಗಳು ಎಲ್ಲಿಗೆ ಕರೆದೊಯ್ದಿದ್ದಾರೆ ಎಂಬುದು ತಿಳಿದಿಲ್ಲ. ಪತ್ನಿಯನ್ನು ಹುಡುಕಿಕೊಡುವಂತೆ ಜಿತೇಂದ್ರ ಪೊಲೀಸರಿಗೆ ಮನವಿ ಮಾಡಿದರು. ಪೊಲೀಸರು ದುಷ್ಕರ್ಮಿಗಳಿಗಾಗಿ ಹುಡುಕಾಟ ಮುಂದುವರೆಸಿದ್ದಾರೆ. ಶೀಘ್ರದಲ್ಲೇ ಇನ್ನೂ ಮೂವರು ದುಷ್ಕರ್ಮಿಗಳನ್ನು ಬಂಧಿಸಲಾಯಿತು. ಈಗ ಆಕಾಶ್​ಗಾಗಿ ಹುಡುಕಾಟ ಮುಂದುವರೆದಿದೆ.

ಮತ್ತಷ್ಟು ಓದಿ: ಮನೆ ಮುಂದೆ ಆಟವಾಡ್ತಿದ್ದ ಮಗು ಅಪಹರಣ; ಮೂರೇ ದಿನದಲ್ಲಿ ಪತ್ತೆ ಹಚ್ಚಿದ ಬೀದರ್​ ಪೊಲೀಸ್

ಇಬ್ಬರದ್ದೂ ಪ್ರೇಮ ವಿವಾಹವಾಗಿತ್ತು ಅನಿತಾ ಮತ್ತು ತಾನು ಪರಸ್ಪರ ಪ್ರೀತಿಸುತ್ತಿದ್ದರು ಎಂದು ಜಿತೇಂದ್ರ ಪೊಲೀಸರಿಗೆ ತಿಳಿಸಿದ್ದಾನೆ. ಇಬ್ಬರೂ ಮದುವೆಯಾಗಲು ಬಯಸಿದ್ದರು. ಆದರೆ ಈ ಮದುವೆಗೆ ಅನಿತಾ ಮನೆಯವರು ಸಿದ್ಧರಿರಲಿಲ್ಲ. ಆದ್ದರಿಂದ ಇಬ್ಬರೂ ಪಂಚರ ಸಮ್ಮುಖದಲ್ಲಿ ವಿವಾಹವಾದರು. ಈ ವಿಷಯ ತಿಳಿದ ಅನಿತಾ ಮನೆಯವರು ತೀವ್ರ ಕೋಪಗೊಂಡರು. ಈಗ ಎರಡು ತಿಂಗಳ ನಂತರ ಅನಿತಾ ಕಿಡ್ನಾಪ್ ಆಗಿದ್ದಳು.

ಪ್ರಕರಣದಲ್ಲಿ ತನಿಖೆ ಮುಂದುವರೆದಿದೆ ಆರೋಪಿಗಳಾದ ಆಕಾಶ್ ಮತ್ತು ಅನಿತಾಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಖಾರ್ಗೋನ್ ಎಎಸ್ಪಿ ತರುಣೇಂದ್ರ ಸಿಂಗ್ ಬಾಘೇಲ್ ತಿಳಿಸಿದ್ದಾರೆ. ಅನಿತಾ ಶೀಘ್ರದಲ್ಲೇ ಪತ್ತೆಯಾಗಲಿದ್ದಾರೆ. ಆದರೆ ಅಪಹರಣದ ಹಿಂದಿನ ಅಸಲಿ ಕಥೆ ಬಯಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ