Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ಸಂಸತ್ ಕಟ್ಟಡದಲ್ಲಿ ವಿಶೇಷ ಅಧಿವೇಶನ, ಸಿಬ್ಬಂದಿ ಸಮವಸ್ತ್ರದಲ್ಲಿ ಕೂಡ ಬದಲಾವಣೆ

ನೂತನ ಸಂಸತ್ ಭವನದಲ್ಲಿ ಸೆಪ್ಟೆಂಬರ್ 18ರಿಂದ ವಿಶೇಷ ಅಧಿವೇಶನ ಆರಂಭವಾಗಲಿದ್ದು ಸಿಬ್ಬಂದಿಯ ಸಮವಸ್ತ್ರದಲ್ಲಿ ಬದಲಾವಣೆ ಮಾಡಲಾಗಿದೆ. ಮಾರ್ಷಲ್​ಗಳಿಗೆ ಕುರ್ತಾ, ಭದ್ರತಾ ಅಧಿಕಾರಿಗಳಿಗೆ ಹೊಸ ಸಮವಸ್ತ್ರ, ಮಹಿಳಾ ಉದ್ಯೋಗಿಗಳಿಗೆ ಹೊಸ ವಿನ್ಯಾಸದ ಸೀರೆಯನ್ನು ಸಮವಸ್ತ್ರವಾಗಿಸಲಾಗುತ್ತಿದೆ. ಮೂಲಗಳ ಪ್ರಕಾರ, ಸೆಪ್ಟೆಂಬರ್ 19 ರಂದು ಗಣೇಶ ಚತುರ್ಥಿಯ ದಿನದಂದು ಪೂಜೆ ಮಾಡಿ ಹಳೆಯ ಸಂಸತ್ ಭವನದಿಂದ ಹೊಸ ಸಂಸತ್ ಭವನಕ್ಕೆ ಪ್ರವೇಶ ಮಾಡಲಾಗುತ್ತದೆ.

ನೂತನ ಸಂಸತ್ ಕಟ್ಟಡದಲ್ಲಿ ವಿಶೇಷ ಅಧಿವೇಶನ, ಸಿಬ್ಬಂದಿ ಸಮವಸ್ತ್ರದಲ್ಲಿ ಕೂಡ ಬದಲಾವಣೆ
ಸಂಸತ್
Follow us
ನಯನಾ ರಾಜೀವ್
|

Updated on: Sep 12, 2023 | 12:31 PM

ನೂತನ ಸಂಸತ್ ಭವನದಲ್ಲಿ ಸೆಪ್ಟೆಂಬರ್ 18ರಿಂದ ವಿಶೇಷ ಅಧಿವೇಶನ ಆರಂಭವಾಗಲಿದ್ದು ಸಿಬ್ಬಂದಿಯ ಸಮವಸ್ತ್ರದಲ್ಲಿ ಬದಲಾವಣೆ ಮಾಡಲಾಗಿದೆ. ಮಾರ್ಷಲ್​ಗಳಿಗೆ ಕುರ್ತಾ, ಭದ್ರತಾ ಅಧಿಕಾರಿಗಳಿಗೆ ಹೊಸ ಸಮವಸ್ತ್ರ, ಮಹಿಳಾ ಉದ್ಯೋಗಿಗಳಿಗೆ ಹೊಸ ವಿನ್ಯಾಸದ ಸೀರೆಯನ್ನು ಸಮವಸ್ತ್ರವಾಗಿಸಲಾಗುತ್ತಿದೆ. ಮೂಲಗಳ ಪ್ರಕಾರ, ಸೆಪ್ಟೆಂಬರ್ 19 ರಂದು ಗಣೇಶ ಚತುರ್ಥಿಯ ದಿನದಂದು ಪೂಜೆ ಮಾಡಿ ಹಳೆಯ ಸಂಸತ್ ಭವನದಿಂದ ಹೊಸ ಸಂಸತ್ ಭವನಕ್ಕೆ ಪ್ರವೇಶ ಮಾಡಲಾಗುತ್ತದೆ.

ಸೆಪ್ಟೆಂಬರ್ 18ರಂದು ಮೊದಲ ದಿನ ಹಳೆ ಸಂಸತ್ ಭವನದಲ್ಲಿಯೇ ಸಭೆ ನಡೆಯಲಿದೆ. ಈ ದಿನ, ಹಳೆಯ ಸಂಸತ್ ಭವನ ನಿರ್ಮಾಣದಿಂದ ಇಲ್ಲಿಯವರೆಗಿನ ನೆನಪುಗಳನ್ನು ಚರ್ಚಿಸಲಾಗುವುದು.

ಪೂಜೆಯ ನಂತರ, ಹೊಸ ಸಂಸತ್ತಿನ ಕಟ್ಟಡಕ್ಕೆ ಪ್ರವೇಶ ಮಾಡಲಾಗುವುದು ಮತ್ತು ಉಭಯ ಸದನಗಳ ಜಂಟಿ ಸಭೆಯನ್ನು ಸಹ ನಡೆಸಬಹುದು. ಮೂಲಗಳ ಪ್ರಕಾರ, ಸಂಸತ್ ಭವನದ ನೌಕರರಿಗೆ ಹೊಸ ಸಮವಸ್ತ್ರವನ್ನು ವಿನ್ಯಾಸಗೊಳಿಸಲಾಗಿದೆ. ಇದನ್ನು NIFT ವಿನ್ಯಾಸಗೊಳಿಸಿದೆ. ಸಂಸತ್ತಿನ ಈ ಅಧಿವೇಶನದಲ್ಲಿ ಸರ್ಕಾರ ಒಂದು ರಾಷ್ಟ್ರ, ಒಂದು ಚುನಾವಣೆ ಎಂಬ ಮಸೂದೆಯನ್ನು ತರಬಹುದು.

ಸಂಸತ್ತಿನ ವಿಶೇಷ ಅಧಿವೇಶನ ಕರೆದಿದ್ದಕ್ಕಾಗಿ ಪ್ರತಿಪಕ್ಷಗಳು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದವು. ಈ ಕುರಿತು ಸೋನಿಯಾ ಗಾಂಧಿ ಪತ್ರ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಸಾಮಾನ್ಯ ವಿಧಾನದಂತೆ ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿದೆ ಎಂದು ಹೇಳಿದ್ದರು.

ಮತ್ತಷ್ಟು ಓದಿ: Parliament Special Session: ಸೆಪ್ಟೆಂಬರ್​ 18 ರಿಂದ 22ರವರೆಗೆ ಸಂಸತ್ ವಿಶೇಷ ಅಧಿವೇಶನ

ಮಾರ್ಷಲ್​ಗಳು ಸಾಭಾಧ್ಯಕ್ಷರ ಆಸನದ ಬಳಿ ನಿಂತು ದೈನಂದಿನ ಕೆಲಸದಲ್ಲಿ ಅವರಿಗೆ ಸಹಾಯ ಮಾಡುತ್ತಾರೆ. ಮಾರ್ಷಲ್​ಗಳು ಸಫಾರಿ ಸೂಟ್​ನ ಬದಲಿಗೆ ಕೆನೆ ಬಣ್ಣದ ಕುರ್ತಾ ಪೈಜಾಮವನ್ನು ಧರಿಸುತ್ತಾರೆ. ಅವರ ತಲೆಯ ಮೇಲೆ ಟರ್ಬನ್ ಬದಲಿಗೆ ಮಣಿಪುರಿ ಟೋಪಿ ಇರಲಿದೆ.

ಐದು ಇಲಾಖೆಗಳ ಅಧಿಕಾರಿಗಳು ತಿಳಿ ನೀಲಿ ಬಣ್ಣದ ಸೂಟ್ ಬದಲಿಗೆ ಕಮಲದ ಚಿತ್ರವಿರುವ ಬಟ್ಟೆ ಧರಿಸಲಿದ್ದಾರೆ. ಕೆನೆ ಬಣ್ಣದ ಜಾಕೆಟ್ ತಿಳಿ ಬಿಳಿ ಬಣ್ಣದ ಪ್ಯಾಂಟ್ ಧರಿಸಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ