AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಜರ್ಮನ್ ಸಂಬಂಧದಲ್ಲಿ ಹೊಸ ಅಧ್ಯಾಯ ಆರಂಭ; ನ್ಯೂಸ್​9 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ

ಭಾರತ ಮತ್ತು ಜರ್ಮನಿ ನಡುವಿನ ಸಂಬಂಧವು ಹಲವು ಶತಮಾನಗಳ ಹಿಂದಿನದು. ತಮಿಳು ಮತ್ತು ತೆಲುಗು ಪುಸ್ತಕಗಳನ್ನು ಮುದ್ರಿಸಿದ ಯುರೋಪಿನ ಮೊದಲ ದೇಶ ಜರ್ಮನಿ. ಇಂದು ಜರ್ಮನಿಯಲ್ಲಿ ಭಾರತದ 50 ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಜಗತ್ತಿನ ಎಲ್ಲ ದೇಶಗಳು ಭಾರತದೊಂದಿಗೆ ಪಾಲುದಾರಿಕೆ ಹೊಂದಲು ಉತ್ಸುಕವಾಗಿವೆ ಎಂದು ನ್ಯೂಸ್ 9 ಗ್ಲೋಬಲ್ ಶೃಂಗಸಭೆಯ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾರತ ಮತ್ತು ಜರ್ಮನಿ ನಡುವಿನ ಸಂಬಂಧದ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಭಾರತ-ಜರ್ಮನ್ ಸಂಬಂಧದಲ್ಲಿ ಹೊಸ ಅಧ್ಯಾಯ ಆರಂಭ; ನ್ಯೂಸ್​9 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ
ಪ್ರಧಾನಿ ಮೋದಿ
Follow us
ಸುಷ್ಮಾ ಚಕ್ರೆ
|

Updated on: Nov 22, 2024 | 10:18 PM

ನವದೆಹಲಿ: ಟಿವಿ9 ಗ್ರೂಪ್‌ನ ನ್ಯೂಸ್ 9 ಜಾಗತಿಕ ಶೃಂಗಸಭೆಯಲ್ಲಿ ವರ್ಚುವಲ್ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಇಂಡೋ-ಜರ್ಮನ್ ಪಾಲುದಾರಿಕೆಯಲ್ಲಿ ಇಂದು ಹೊಸ ಅಧ್ಯಾಯ ಆರಂಭವಾಗಿದೆ. ಜರ್ಮನಿ ಮತ್ತು ಜರ್ಮನ್ ಜನರನ್ನು ಸಂಪರ್ಕಿಸಲು ಭಾರತದ ಮಾಧ್ಯಮ ಕೆಲಸ ಮಾಡುತ್ತಿದೆ ಎಂದು ನನಗೆ ಹೆಮ್ಮೆ ಇದೆ. ಜರ್ಮನಿ ನಮ್ಮ ಪ್ರಮುಖ ಪಾಲುದಾರ ದೇಶಗಳಲ್ಲಿ ಒಂದಾಗಿದೆ. ಇಂದು ವಿಶ್ವದ ಪ್ರತಿಯೊಂದು ದೇಶವೂ ಭಾರತದೊಂದಿಗೆ ಅಭಿವೃದ್ಧಿ ಪಾಲುದಾರಿಕೆಯನ್ನು ಹೊಂದಲು ಬಯಸುತ್ತದೆ. ಭಾರತ ಮೂಲಸೌಕರ್ಯ ಮತ್ತು ಡಿಜಿಟಲ್ ಆವಿಷ್ಕಾರಗಳ ಬಗ್ಗೆ ಗಮನ ಕೇಂದ್ರೀಕರಿಸಿದೆ ಎಂದು ಹೇಳಿದ್ದಾರೆ.

ಭಾರತ ಮತ್ತು ಜರ್ಮನಿ ನಡುವಿನ ಸಂಬಂಧವು ಶತಮಾನಗಳಷ್ಟು ಹಳೆಯದು. ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಪುಸ್ತಕಗಳನ್ನು ಪ್ರಕಟಿಸಿದ ಯುರೋಪಿನ ಮೊದಲ ದೇಶ ಜರ್ಮನಿ. ಭಾರತದ 50 ಸಾವಿರ ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇಂದು ವಿಶ್ವದ ಪ್ರತಿಯೊಂದು ದೇಶವೂ ಭಾರತದೊಂದಿಗೆ ಅಭಿವೃದ್ಧಿ ಪಾಲುದಾರಿಕೆಯನ್ನು ಹೊಂದಲು ಬಯಸುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಭಾರತ-ಜರ್ಮನಿ ಸಂಬಂಧದಲ್ಲಿ ನ್ಯೂಸ್ 9 ಜಾಗತಿಕ ಶೃಂಗಸಭೆ ಐತಿಹಾಸಿಕ ಮೈಲಿಗಲ್ಲು; ಎಂಡಿ ಮತ್ತು ಸಿಇಒ ಬರುಣ್ ದಾಸ್

ಜರ್ಮನಿಯು ‘ಫೋಕಸ್ ಆನ್ ಇಂಡಿಯಾ’ ದಾಖಲೆಯನ್ನು ಬಿಡುಗಡೆ ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಇಂದು ಜರ್ಮನಿಯಲ್ಲಿ ಸುಮಾರು 3 ಲಕ್ಷ ಭಾರತೀಯರು ವಾಸಿಸುತ್ತಿದ್ದಾರೆ. ಭಾರತ-ಜರ್ಮನಿ ಸಂಬಂಧಗಳ ಮತ್ತೊಂದು ಅಂಶವು ಭಾರತದಲ್ಲಿ ಕಂಡುಬರುತ್ತದೆ. ಅಲ್ಲಿ 1800ಕ್ಕೂ ಹೆಚ್ಚು ಜರ್ಮನ್ ಕಂಪನಿಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿವೆ. ಮುಂಬರುವ ದಿನಗಳಲ್ಲಿ ಭಾರತ ಮತ್ತು ಜರ್ಮನಿ ನಡುವಿನ ವ್ಯಾಪಾರ ಇನ್ನಷ್ಟು ವೃದ್ಧಿಯಾಗಲಿದೆ ಎಂಬ ವಿಶ್ವಾಸ ನನಗಿದೆ. ಇಂದು ಭಾರತವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ. ಜರ್ಮನಿಯ ‘ಫೋಕಸ್ ಆನ್ ಇಂಡಿಯಾ’ ದಾಖಲೆಯು ಇದರ ಸಂಕೇತವಾಗಿದೆ ಎಂದು ಮೋದಿ ಹೇಳಿದ್ದಾರೆ.

ಪ್ರತಿ ಕ್ಷೇತ್ರದಲ್ಲೂ ಭಾರತ ಹೊಸ ನೀತಿಗಳನ್ನು ರೂಪಿಸಿದೆ ಎಂದು ಪ್ರಧಾನಿ ಮೋದಿ ನ್ಯೂಸ್​9 ಶೃಂಗಸಭೆಯಲ್ಲಿ ಹೇಳಿದ್ದಾರೆ. ನಮ್ಮ ವ್ಯವಹಾರಗಳು ಮುಂದುವರಿಯಲು ತೆರಿಗೆ ವ್ಯವಸ್ಥೆಯನ್ನು ಸರಿಪಡಿಸಲಾಗಿದೆ. ಜರ್ಮನಿಯ ಅಭಿವೃದ್ಧಿ ಪಯಣದಲ್ಲಿ ಉತ್ಪಾದನೆ ಮತ್ತು ಇಂಜಿನಿಯರಿಂಗ್ ದೊಡ್ಡ ಇತಿಹಾಸವನ್ನು ಹೊಂದಿದೆ. ನಾನು ಜರ್ಮನ್ ಕಂಪನಿಗಳನ್ನು ಭಾರತಕ್ಕೆ ಬರುವಂತೆ ಆಹ್ವಾನಿಸುತ್ತೇನೆ. ಭಾರತದ ಸಂಪೂರ್ಣ ಗಮನವು ಮೂಲಸೌಕರ್ಯ ಮತ್ತು ಡಿಜಿಟಲ್ ಆವಿಷ್ಕಾರಗಳ ಮೇಲೆ ಕೇಂದ್ರೀಕೃತವಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿಯಿಂದ ಸಂಬಂಧ, ಗೌರವ, ಜವಾಬ್ದಾರಿ ಬಗ್ಗೆ ಕಲಿತಿದ್ದೇನೆ; ನ್ಯೂಸ್​9 ಶೃಂಗಸಭೆಯಲ್ಲಿ ಟಿವಿ9 ನೆಟ್​ವರ್ಕ್ ಎಂಡಿ, ಸಿಇಒ ಬರುಣ್ ದಾಸ್

ಮೇಕ್ ಇನ್ ಇಂಡಿಯಾಗೆ ಸೇರುವ ತಯಾರಕರಿಗೆ ಇಂದು ಭಾರತವು ಉತ್ಪಾದನೆಯ ನೇರ ಪ್ರೋತ್ಸಾಹವನ್ನು ನೀಡುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇಂದು ಭಾರತವು ಮೊಬೈಲ್ ಮತ್ತು ಎಲೆಕ್ಟ್ರಾನಿಕ್ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ. ಇಂದು ಭಾರತವು ವಿಶ್ವದ ಅತಿ ದೊಡ್ಡ ದ್ವಿಚಕ್ರ ವಾಹನ ತಯಾರಕ ರಾಷ್ಟ್ರವಾಗಿದೆ. ಇದು ಎರಡನೇ ಅತಿ ದೊಡ್ಡ ಉಕ್ಕು ಮತ್ತು ಸಿಮೆಂಟ್ ತಯಾರಕ ದೇಶವಾಗಿದೆ ಎಂದು ಮೋದಿ ಪ್ರಸ್ತಾಪಿಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್