AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NewsClick ಪ್ರಕರಣ: ಸರ್ಕಾರಿ ಸಾಕ್ಷಿಯಾಗಲು ಅನುಮತಿ ಕೋರಿ ನ್ಯಾಯಾಲಯದ ಮೊರೆ ಹೋದ ಅಮಿತ್ ಚಕ್ರವರ್ತಿ

ನ್ಯೂಸ್ ಕ್ಲಿಕ್ ಪ್ರಕರಣದಲ್ಲಿ ಅಮಿತ್ ಚಕ್ರವರ್ತಿ ಮತ್ತು ನ್ಯೂಸ್ ಪೋರ್ಟಲ್‌ನ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ವಿರುದ್ಧದ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಲು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ದೆಹಲಿ ಪೊಲೀಸರಿಗೆ 60 ದಿನಗಳ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.

NewsClick ಪ್ರಕರಣ: ಸರ್ಕಾರಿ ಸಾಕ್ಷಿಯಾಗಲು ಅನುಮತಿ ಕೋರಿ ನ್ಯಾಯಾಲಯದ ಮೊರೆ ಹೋದ ಅಮಿತ್ ಚಕ್ರವರ್ತಿ
ಅಮಿತ್ ಚಕ್ರವರ್ತಿ
Follow us
ರಶ್ಮಿ ಕಲ್ಲಕಟ್ಟ
|

Updated on: Dec 25, 2023 | 3:17 PM

ದೆಹಲಿ ಡಿಸೆಂಬರ್ 25: ಚೀನಾ ಪರ ಪ್ರಚಾರ ಮಾಡಲು ಹಣ ಪಡೆಯಲಾಗಿದೆ ಎಂದು ಆರೋಪಿಸಿ ನ್ಯೂಸ್ ಕ್ಲಿಕ್ ಪೋರ್ಟಲ್ (NewsClick case) ವಿರುದ್ಧ ಯುಎಪಿಎ (UAPA)ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ನ್ಯೂಸ್‌ಕ್ಲಿಕ್‌ನ ಮಾನವ ಸಂಪನ್ಮೂಲ ಮುಖ್ಯಸ್ಥ ಅಮಿತ್ ಚಕ್ರವರ್ತಿ (Amit Chakravarty) ಅವರು ಸರ್ಕಾರಿ ಸಾಕ್ಷಿಯಾಗಲು ಅನುಮತಿ ಕೋರಿ ದೆಹಲಿ ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ. ವಿಶೇಷ ನ್ಯಾಯಾಧೀಶ ಹರ್ದೀಪ್ ಕೌರ್ ಮುಂದೆ ಅಮಿತ್ ಚಕ್ರವರ್ತಿ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಕ್ಷಮೆಯಾಚಿಸಿದ ಅವರು, ತಮ್ಮಲ್ಲಿರುವ ಮಾಹಿತಿಯನ್ನು ಬಹಿರಂಗಪಡಿಸಲು ಸಿದ್ಧ ಎಂದು ದೆಹಲಿ ಪೊಲೀಸರಿಗೆ ತಿಳಿಸಿದ್ದಾರೆ. ಚಕ್ರವರ್ತಿ ಅವರ ಹೇಳಿಕೆಯನ್ನು ದಾಖಲಿಸಲು ನ್ಯಾಯಾಧೀಶರು ಮ್ಯಾಜಿಸ್ಟ್ರಿಯಲ್ ನ್ಯಾಯಾಲಯಕ್ಕೆ ಕಳುಹಿಸಿದ್ದಾರೆ.

ಚಕ್ರವರ್ತಿ ಮತ್ತು ನ್ಯೂಸ್ ಪೋರ್ಟಲ್‌ನ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ವಿರುದ್ಧದ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಲು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ದೆಹಲಿ ಪೊಲೀಸರಿಗೆ 60 ದಿನಗಳ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.

ನ್ಯೂಸ್ ಪೋರ್ಟಲ್‌ಗೆ ಸಂಬಂಧಿಸಿದ ಪತ್ರಕರ್ತರ ನಿವಾಸಗಳು ಸೇರಿದಂತೆ ಹಲವು ಸ್ಥಳಗಳಲ್ಲಿ ಪೊಲೀಸರು ದಾಳಿಗಳನ್ನು ಮುಕ್ತಾಯಗೊಳಿಸಿದ ನಂತರ ಸಂಸ್ಥಾಪಕ ಮತ್ತು ಮಾನವ ಸಂಪನ್ಮೂಲ ಮುಖ್ಯಸ್ಥ ಇಬ್ಬರನ್ನೂ ಅಕ್ಟೋಬರ್‌ನಲ್ಲಿ ಬಂಧಿಸಲಾಯಿತು. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಅವರ ಮೇಲೆ ಭಯೋತ್ಪಾದನೆ ಆರೋಪ ಹೊರಿಸಲಾಯಿತು. ಏತನ್ಮಧ್ಯೆ, ಜಾರಿ ನಿರ್ದೇಶನಾಲಯ (ಇಡಿ) ಸಹ ಸಂಸ್ಥೆಯ ಆವರಣದಲ್ಲಿ ತನ್ನ ಶೋಧವನ್ನು ನಡೆಸಿತು. ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಅಡಿಯಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಕೂಡ ಪ್ರಕರಣ ದಾಖಲಿಸಿದೆ.

ಇದನ್ನೂ ಓದಿ: ಯುಎಪಿಎ ಪ್ರಕರಣ: ಬಂಧನದ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋದ ನ್ಯೂಸ್‌ಕ್ಲಿಕ್ ಸಂಸ್ಥಾಪಕ

ಕಮ್ಯುನಿಸ್ಟ್ ಪಾರ್ಟಿ ಆಫ್ ಚೈನಾ (CPC) ಯ ಪ್ರಚಾರ ಅಂಗದೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದಾರೆಂದು ಆರೋಪಿಸಲಾದ ಯುಎಸ್ ಮೂಲದ ಮಿಲಿಯನೇರ್ ನೆವಿಲ್ಲೆ ರಾಯ್ ಸಿಂಘಮ್‌ನಿಂದ ನ್ಯೂಸ್‌ಕ್ಲಿಕ್ ₹38 ಕೋಟಿ ಪಡೆದಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿಯ ನಂತರ ತನಿಖೆ ಪ್ರಾರಂಭವಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ