AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಎಪಿಎ ಪ್ರಕರಣ: ಬಂಧನದ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋದ ನ್ಯೂಸ್‌ಕ್ಲಿಕ್ ಸಂಸ್ಥಾಪಕ

NewsClick founder Prabir Purkayastha: ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ಪೀಠ ಪುರಕಾಯಸ್ಥ ಅವರ ವಕೀಲ ಕಪಿಲ್ ಸಿಬಲ್ ಅವರಲ್ಲಿ ಈ ಬಗ್ಗೆ ಕೋರ್ಟ್ ಗೆ ಸಲ್ಲಿಕೆ ಮಾಡಲು ಹೇಳಿದ್ದು ತುರ್ತು ವಿಚಾರಣೆಯನ್ನು ನಿರ್ಧರಿಸುವುದಾಗಿ ಹೇಳಿದೆ.

ಯುಎಪಿಎ ಪ್ರಕರಣ: ಬಂಧನದ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋದ ನ್ಯೂಸ್‌ಕ್ಲಿಕ್ ಸಂಸ್ಥಾಪಕ
ಪ್ರಬೀರ್ ಪುರಕಾಯಸ್ಥ
ರಶ್ಮಿ ಕಲ್ಲಕಟ್ಟ
|

Updated on: Oct 16, 2023 | 12:44 PM

Share

ದೆಹಲಿ ಅಕ್ಟೋಬರ್ 16: ಯುಎಪಿಎ ಪ್ರಕರಣಕ್ಕೆ(UAPA case) ಸಂಬಂಧಿಸಿ ತಮ್ಮ ಬಂಧನವನ್ನು ಹಿಂಪಡೆಯಲು ಮತ್ತು ರಿಮಾಂಡ್‌ಗೆ ನಿರಾಕರಿಸಿರುವ ದೆಹಲಿ ಹೈಕೋರ್ಟ್ (Delhi High Court) ಆದೇಶವನ್ನು ಪ್ರಶ್ನಿಸಿ ನ್ಯೂಸ್‌ಕ್ಲಿಕ್ (NewsClick)ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ (Prabir Purkayastha) ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ಪೀಠ ಪುರಕಾಯಸ್ಥ ಅವರ ವಕೀಲ ಕಪಿಲ್ ಸಿಬಲ್ ಅವರಲ್ಲಿ ಈ ಬಗ್ಗೆ ಕೋರ್ಟ್ ಗೆ ಸಲ್ಲಿಕೆ ಮಾಡಲು ಹೇಳಿದ್ದು ತುರ್ತು ವಿಚಾರಣೆಯನ್ನು ನಿರ್ಧರಿಸುವುದಾಗಿ ಹೇಳಿದೆ.

ಇದು ನ್ಯೂಸ್‌ಕ್ಲಿಕ್ ವಿಷಯವಾಗಿದೆ. ಪತ್ರಕರ್ತರು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇಲ್ಲಿ ಆರೋಪಿಗಳಲ್ಲಿ ಒಬ್ಬರು 75 ವರ್ಷದ ವ್ಯಕ್ತಿ” ಎಂದು ಸಿಬಲ್ ಹೇಳಿದ್ದಾರೆ.

ಕಟ್ಟುನಿಟ್ಟಾದ ಭಯೋತ್ಪಾದನಾ-ವಿರೋಧಿ ಕಾನೂನು ಯುಎಪಿಎಗೆ ಬಂಧನದ ಸಮಯದಲ್ಲಿ ಬಂಧನದ ಲಿಖಿತ ಆಧಾರಗಳನ್ನು ಒದಗಿಸುವ ಅಗತ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದ್ದು,, ಪುರಕಾಯಸ್ಥ ಮತ್ತು ಚಕ್ರವರ್ತಿ ಅವರ ಅರ್ಜಿ ತಿರಸ್ಕರಿಸಿತ್ತು. ಯಾವುದೇ ಗೌಪ್ಯ ಮಾಹಿತಿಯನ್ನು ತೆಗೆದುಹಾಕಿದ ನಂತರ ಆರೋಪಿಗಳಿಗೆ ಬಂಧನದ ಲಿಖಿತ ಆಧಾರವನ್ನು ಒದಗಿಸಲು ಪ್ರಾರಂಭಿಸುವಂತೆ ನ್ಯಾಯಾಲಯವು ಪೊಲೀಸರನ್ನು ಒತ್ತಾಯಿಸಿತು.

ಬಾಕಿ ಉಳಿದಿರುವ ಅರ್ಜಿಗಳ ಜೊತೆಗೆ ಯಾವುದೇ ಅರ್ಹತೆಯಿಲ್ಲದ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ದೆಹಲಿ ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ. “ಇಡೀ ಸಮಸ್ಯೆಯನ್ನು ಸರಿಯಾದ ದೃಷ್ಟಿಕೋನದಿಂದ ಪರಿಶೀಲಿಸಿದ ನಂತರ, ಬಂಧನದ ಆಧಾರವು ನಿಜವಾಗಿ ಕಂಡುಬಂದಿದೆ. ಬಂಧನದ ನಂತರ ಸಾಧ್ಯವಾದಷ್ಟು ಬೇಗ ಅರ್ಜಿದಾರರಿಗೆ ತಿಳಿಸಲಾಗಿದೆ ಅದರಂತೆ, ಯಾವುದೇ ಕಾರ್ಯವಿಧಾನದ ದೌರ್ಬಲ್ಯ ಅಥವಾ UAPA ಯ ಸೆಕ್ಷನ್ 43B ಅಥವಾ ಸಂವಿಧಾನದ 22(1) ವಿಧಿಗಳ ಉಲ್ಲಂಘನೆಯಾಗಿ ಕಂಡುಬರುವುದಿಲ್ಲ. ಹಾಗಾಗಿ ಈ ಬಂಧನವು ಕಾನೂನಿನ ಅನುಸಾರ ನಡೆದಿದ್ದು ಎಂದು ನ್ಯಾಯಾಲಯ ಹೇಳಿತ್ತು.

ಅಕ್ಟೋಬರ್ 3 ರಂದು, ದೆಹಲಿ ಪೋಲೀಸ್ ವಿಶೇಷ ಘಟಕ ಭಾರತದಲ್ಲಿ ಚೀನಾ ಪರ ಪ್ರಚಾರವನ್ನು ಹರಡಲು ಹಣವನ್ನು ಪಡೆದ ಆರೋಪದಡಿಯಲ್ಲಿ ಪುರಕಾಯಸ್ಥ ಮತ್ತು ಚಕ್ರವರ್ತಿಯನ್ನು ಯುಎಪಿಎ ಆರೋಪದ ಅಡಿಯಲ್ಲಿ ಬಂಧಿಸಿತು.

ಇದನ್ನೂ ಓದಿ: ಎಫ್‌ಸಿಆರ್‌ಎ ಉಲ್ಲಂಘನೆ ಆರೋಪ: ನ್ಯೂಸ್‌ಕ್ಲಿಕ್ ವಿರುದ್ಧ ಸಿಬಿಐ ಹೊಸ ಎಫ್‌ಐಆರ್

ನ್ಯೂಸ್‌ಕ್ಲಿಕ್ ಚೀನಾದಿಂದ ದೊಡ್ಡ ಮೊತ್ತದ ಹಣವನ್ನು ಸ್ವೀಕರಿಸಿದೆ ಎಂದು ಎಫ್‌ಐಆರ್ ಆರೋಪಿಸಿದೆ. ಇದು ಭಾರತದ ಸಾರ್ವಭೌಮತೆಗೆ ಧಕ್ಕೆ ತರಲು ಮತ್ತು ಅದರ ನಾಗರಿಕರ ನಡುವೆ ವೈಷಮ್ಯವನ್ನು ಬಿತ್ತಲು ಉದ್ದೇಶಿಸಿದೆ. 2019 ರ ಲೋಕಸಭಾ ಚುನಾವಣೆಯನ್ನು ಹಾಳು ಮಾಡಲು ಪುರಕಾಯಸ್ಥ ಅವರು ಪೀಪಲ್ಸ್ ಅಲೈಯನ್ಸ್ ಫಾರ್ ಡೆಮಾಕ್ರಸಿ ಅಂಡ್ ಸೆಕ್ಯುಲರಿಸಂ (PADS) ಎಂಬ ಗುಂಪಿನೊಂದಿಗೆ ಕೆಲಸ ಮಾಡಿದ್ದಾರೆ ಎಂದು ಎಫ್‌ಐಆರ್ ಆರೋಪಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?