AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಗುಂಡಿಗಳ ಪತ್ತೆಗೆ ಎಐ ಮೊರೆಹೋದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ರಸ್ತೆ ಗುಂಡಿ ಹಾಗೂ ದೋಷಗಳನ್ನು ಮುಂಚಿತವಾಗಿಯೇ ಪತ್ತೆಹಚ್ಚಿ ದುರಸ್ತಿಗೊಳಿಸಲು ಕೃತಕ ಬುದ್ಧಿಮತ್ತೆ (AI), ಡ್ರೋನ್ ಮತ್ತು ಸುಧಾರಿತ ಡೇಟಾ ವಿಶ್ಲೇಷಣಾ ತಂತ್ರಜ್ಞಾನ ಆಧಾರಿತ ಹೊಸ ವ್ಯವಸ್ಥೆಗೆ ಮೊರೆಹೋಗಿದೆ. ಈ ಹೊಸ ವ್ಯವಸ್ಥೆಯಿಂದ ಹೆದ್ದಾರಿಗಳ ಆಯುಷ್ಯ ಹೆಚ್ಚಲಿರುವುದರ ಜೊತೆಗೆ ನಿರ್ವಹಣಾ ವೆಚ್ಚ ಕಡಿಮೆಯಾಗಲಿದೆ ಎಂದು ಪ್ರಾಧಿಕಾರ ಹೇಳಿಕೊಂಡಿದೆ.

ರಸ್ತೆ ಗುಂಡಿಗಳ ಪತ್ತೆಗೆ ಎಐ ಮೊರೆಹೋದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ
ಸಾಂದರ್ಭಿಕ ಚಿತ್ರImage Credit source: PTI
ಪ್ರಸನ್ನ ಹೆಗಡೆ
|

Updated on: Jun 17, 2026 | 6:45 AM

Share

ಬೆಂಗಳೂರು, ಜೂನ್​​ 17: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ದೇಶದ ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆಯಲ್ಲಿ ಮಹತ್ವದ ಬದಲಾವಣೆ ತರಲು ಮುಂದಾಗಿದ್ದು, ಕೃತಕ ಬುದ್ಧಿಮತ್ತೆ (AI), ಡ್ರೋನ್‌ಗಳು ಹಾಗೂ ಸುಧಾರಿತ ಡೇಟಾ ವಿಶ್ಲೇಷಣಾ ತಂತ್ರಜ್ಞಾನಗಳನ್ನು ಬಳಸುವ ಪೂರ್ವಾನುಮಾನ ಆಧಾರಿತ ಆಸ್ತಿ ನಿರ್ವಹಣಾ ವ್ಯವಸ್ಥೆ (Predictive Asset Management Framework) ಅಳವಡಿಸಿಕೊಳ್ಳುತ್ತಿದೆ. ಗುಂಡಿಗಳು ಮತ್ತು ಇತರ ರಸ್ತೆ ದೋಷಗಳು ಗಂಭೀರ ಸಮಸ್ಯೆಗಳಾಗುವ ಮುನ್ನವೇ ಅವುಗಳನ್ನು ಪತ್ತೆಹಚ್ಚಿ ದುರಸ್ತಿಗೊಳಿಸುವುದು ಈ ಹೊಸ ವ್ಯವಸ್ಥೆಯ ಮುಖ್ಯ ಉದ್ದೇಶವಾಗಿದೆ.

ರಾಷ್ಟ್ರೀಯ ಹೆದ್ದಾರಿಗಳ ಸ್ಥಿತಿಯನ್ನು ಪರಿಶೀಲಿಸಲು ನೆಟ್‌ವರ್ಕ್ ಸರ್ವೇ ವೆಹಿಕಲ್ಸ್ (NSVs) ಅನ್ನು ಬಳಸಲಾಗುತ್ತಿದೆ. ಇವು ರಸ್ತೆಯ ಮೇಲ್ಮೈಯ ಅಸಮತೋಲನ, ಬಿರುಕುಗಳು, ಗುಂಡಿಗಳು ಹಾಗೂ ರಚನಾತ್ಮಕ ಹಾನಿಯನ್ನು ಮೌಲ್ಯಮಾಪನ ಮಾಡಲಿವೆ. ಇದರ ಜೊತೆಗೆ ಡ್ರೋನ್ ಅನಾಲಿಟಿಕ್ಸ್ ಮಾನಿಟರಿಂಗ್ ಸಿಸ್ಟಮ್ (DAMS) ಮೂಲಕ ಹೆದ್ದಾರಿ ಆಸ್ತಿಗಳ ಡಿಜಿಟಲ್ ದಾಖಲೆ ಸಿದ್ಧಪಡಿಸುವುದು, ಸೇತುವೆಗಳು ಹಾಗೂ ಇತರ ರಚನೆಗಳ ಮೇಲ್ವಿಚಾರಣೆ ಮತ್ತು ಅತಿಕ್ರಮಣ ಪತ್ತೆಹಚ್ಚುವ ಕಾರ್ಯ ನಡೆಯಲಿದೆ. ಫಾಲಿಂಗ್ ವೇಟ್ ಡಿಫ್ಲೆಕ್ಟೋಮೀಟರ್ (FWD) ಪರೀಕ್ಷೆಗಳ ಮೂಲಕ ರಸ್ತೆಯ ಸಾಮರ್ಥ್ಯ ಅಳೆಯಲಾಗುತ್ತಿದ್ದು, ದುರ್ಬಲಗೊಳ್ಳುತ್ತಿರುವ ರಸ್ತೆ ಭಾಗಗಳನ್ನು ಗುರುತಿಸಲಾಗುತ್ತದೆ.

ಇದನ್ನೂ ಓದಿ: ಭವಾನಿಪುರದ ಸೋಲು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಮಾಜಿ ಸಿಎಂ ಮಮತಾ ಬ್ಯಾನರ್ಜಿ

AI ಮೂಲಕ ರಸ್ತೆ ಗುಂಡಿಗಳ ಪತ್ತೆ

ಹೆದ್ದಾರಿಗಳಲ್ಲಿ AI ಆಧಾರಿತ ಡ್ಯಾಶ್‌ಕ್ಯಾಮ್ ಅನಾಲಿಟಿಕ್ಸ್ ಸರ್ವೀಸ್ (DAS) ಅನ್ನು ಕೂಡ ಜಾರಿಗೊಳಿಸಲಾಗುತ್ತಿದೆ. ಈ ವ್ಯವಸ್ಥೆ ಸ್ವಯಂಚಾಲಿತವಾಗಿ, ರಸ್ತೆ ಗುಂಡಿಗಳು, ಹಾನಿಗೊಳಗಾದ ಕ್ರ್ಯಾಶ್ ಬ್ಯಾರಿಯರ್‌ಗಳು, ದೋಷಪೂರಿತ ಬೀದಿ ದೀಪಗಳು ಸೇರಿ ಮುಂತಾದ ಸಮಸ್ಯೆಗಳನ್ನು ಪತ್ತೆಹಚ್ಚಲಿದೆ. ಈ ಹೊಸ ವ್ಯವಸ್ಥೆಯಿಂದ ಹೆದ್ದಾರಿಗಳ ಆಯುಷ್ಯ ಹೆಚ್ಚಲಿರುವುದರ ಜೊತೆಗೆ ನಿರ್ವಹಣಾ ವೆಚ್ಚ ಕಡಿಮೆಯಾಗಲಿದೆ. ಪ್ರಯಾಣಿಕರಿಗೆ ಉತ್ತಮ ಸಂಚಾರ ಅನುಭವ ಕೂಡ ದೊರಕಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿರೋದಾಗಿ ಡೆಕ್ಕನ್​​ ಹೆರಾಲ್ಡ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ: ಕುಸಿದು ಬೀಳುತ್ತಿರುವ ಬಂಡೆಗಲ್ಲುಗಳು
ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ: ಕುಸಿದು ಬೀಳುತ್ತಿರುವ ಬಂಡೆಗಲ್ಲುಗಳು
ಇಂಡೋನೇಷ್ಯಾದ ಭವ್ಯ 'ಪ್ರಂಬಾನನ್' ಶಿವ ದೇವಾಲಯಕ್ಕೆ ಪಿಎಂ ಮೋದಿ ಭೇಟಿ
ಇಂಡೋನೇಷ್ಯಾದ ಭವ್ಯ 'ಪ್ರಂಬಾನನ್' ಶಿವ ದೇವಾಲಯಕ್ಕೆ ಪಿಎಂ ಮೋದಿ ಭೇಟಿ
ಭಾರತ-ಇಂಡೋನೇಷ್ಯಾ ಸ್ನೇಹ ಅತ್ಯಂತ ಗಟ್ಟಿ ಮತ್ತು ರೋಮಾಂಚಕ: ಮೋದಿ
ಭಾರತ-ಇಂಡೋನೇಷ್ಯಾ ಸ್ನೇಹ ಅತ್ಯಂತ ಗಟ್ಟಿ ಮತ್ತು ರೋಮಾಂಚಕ: ಮೋದಿ