AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರದಲ್ಲಿ ಓರ್ವ ಶಂಕಿತ ಉಗ್ರನ ಬಂಧನ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟದ ಬಗ್ಗೆಯೂ ವಿಚಾರಣೆ

ಬೆಂಗಳೂರು ನಗರದ ಹೆಚ್​ಎಎಲ್​ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಬಳಿಕ ಎನ್​ಐಎ (NIA) ಅಲರ್ಟ್ ಆಗಿದ್ದು, ಆಂಧ್ರ ಪ್ರದೇಶದಲ್ಲಿ ಒಬ್ಬ ಶಂಕಿತ ಉಗ್ರನನ್ನು ಬಂಧಿಸಿದೆ. ಬೆಂಗಳೂರು ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಈತನಿಗೆ ನಂಟು ಇದೆಯಾ ಎಂಬಿತ್ಯಾದಿ ಆಹಾಮಗಳಲ್ಲಿ ತನಿಖೆಯಾಗುವ ಸಾಧ್ಯತೆ ಇದೆ.

ಆಂಧ್ರದಲ್ಲಿ ಓರ್ವ ಶಂಕಿತ ಉಗ್ರನ ಬಂಧನ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟದ ಬಗ್ಗೆಯೂ ವಿಚಾರಣೆ
ಆಂಧ್ರದಲ್ಲಿ ಓರ್ವ ಶಂಕಿತ ಉಗ್ರನ ಬಂಧನ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟದ ಬಗ್ಗೆಯೂ ವಿಚಾರಣೆ (ಸಾಂದರ್ಭಿಕ ಚಿತ್ರ)
TV9 Web
| Edited By: Rakesh Nayak Manchi|

Updated on:Mar 04, 2024 | 9:46 PM

Share

ಹೈದರಾಬಾದ್, ಮಾ.4: ಬೆಂಗಳೂರು ನಗರದ ಹೆಚ್​ಎಎಲ್​ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಬಳಿಕ ಎನ್​ಐಎ (NIA) ಅಲರ್ಟ್ ಆಗಿದ್ದು, ಆಂಧ್ರ ಪ್ರದೇಶದಲ್ಲಿ ಒಬ್ಬ ಶಂಕಿತ ಉಗ್ರನನ್ನು (Suspect Terrorist) ಬಂಧಿಸಿದೆ. ತೆಲಂಗಾಣದ ಕಡಪ ಜಿಲ್ಲೆಯ ಮೈದುಕೂರು ಮಂಡಲಂ ಚೆರ್ಲೋಪಲ್ಲಿಯಲ್ಲಿ ನಿಷೇಧಿತ ಪಿಎಫ್‌ಐ ಏಜೆಂಟ್‌ ಅಬ್ದುಲ್‌ ಸಲೀಂ ಬಂಧತ ಶಂಕಿತ ಉಗ್ರನಾಗಿದ್ದಾನೆ.

ನಿಷೇಧಿತ ಪಿಎಫ್‌ಐ ಸಂಘಟನೆಯ ಉತ್ತರ ತೆಲಂಗಾಣದ ಕಾರ್ಯದರ್ಶಿಯಾಗಿದ್ದ ಅಬ್ದುಲ್‌ ಸಲೀಂ, ಕಳೆದ 25 ದಿನಗಳ ಹಿಂದೆ ಮೈದುಕೂರಿಗೆ ಬಂದು ಮಸೀದಿಯಲ್ಲಿ ತಲೆಮರೆಸಿಕೊಂಡಿದ್ದ ಎಂದು ತಿಳಿದುಬಂದಿದೆ. ಅಲ್ಲದೆ, ಆನ್‌ಲೈನ್‌ ಮೂಲಕ ಫೋನ್‌ನಲ್ಲಿ ಮಾತನಾಡುತ್ತಿದ್ದ ಎನ್ನಲಾಗುತ್ತಿದೆ. ಹೆಚ್ಚಿನ ವಿಚಾರಣೆಗಾಗಿ ಅಬ್ದುಲ್‌ ಸಲೀಂನನ್ನು ಹೈದರಾಬಾದ್‌ಗೆ ಕರೆದೊಯ್ಯಲಾಗಿದೆ. ಬೇರೊಂದು ಪ್ರಕರಣ ಸಂಬಂಧ ಬಂಧಿಸಲಾಗಿದ್ದು, ಬೆಂಗಳೂರು ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಈತನಿಗೆ ನಂಟು ಇದೆಯಾ ಎಂಬಿತ್ಯಾದಿ ಆಹಾಮಗಳಲ್ಲಿ ತನಿಖೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ತನಿಖೆ ಅಖಾಡಕ್ಕೆ ಎನ್​ಐಎ: ಕಾರ್ಯಾಚರಣೆ ಹೇಗಿರಲಿದೆ ಗೊತ್ತೇ?

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1 ರಂದು ಮಧ್ಯಾಹ್ನದ ವೇಳೆ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಎನ್​ಐಎ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಗಂಭೀರತೆ ಅರಿತು ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಇದರ ಬೆನ್ನಲ್ಲೇ ಆಂಧ್ರದಲ್ಲಿ ಒಬ್ಬ ಶಂಕಿತ ಉಗ್ರನನ್ನು ಬಂಧಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:39 pm, Mon, 4 March 24

Follow Us
TV9 Web
TV9 Web

TV9 Kannada

Read More
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ