AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯೋತ್ಪಾದಕ ಸಂಘಟನೆಗೆ ರಹಸ್ಯ ಮಾಹಿತಿ ಸೋರಿಕೆ; ಐಪಿಎಸ್​ ಅಧಿಕಾರಿಯನ್ನು ಬಂಧಿಸಿದ ರಾಷ್ಟ್ರೀಯ ತನಿಖಾ ದಳ

ಭಯೋತ್ಪಾದಕ ಸಂಘಟನೆ ಎಲ್​ಇಟಿಗೆ ಸೇರಲು ಯುವಕರನ್ನು ಪ್ರೇರೇಪಿಸುವ ಮತ್ತು ಅವರನ್ನ ನೇಮಕ ಮಾಡಿಕೊಳ್ಳುತ್ತಿರುವ ಕೇಸ್​ಗೆ ಸಂಬಂಧಪಟ್ಟಂತೆ ಬುಧವಾರ ಎನ್​ಐಎ ಜಮ್ಮು-ಕಾಶ್ಮೀರದ ಮೂರು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದೆ.

ಭಯೋತ್ಪಾದಕ ಸಂಘಟನೆಗೆ ರಹಸ್ಯ ಮಾಹಿತಿ ಸೋರಿಕೆ; ಐಪಿಎಸ್​ ಅಧಿಕಾರಿಯನ್ನು ಬಂಧಿಸಿದ ರಾಷ್ಟ್ರೀಯ ತನಿಖಾ ದಳ
ಎನ್​ಐಎ
TV9 Web
| Edited By: |

Updated on:Feb 19, 2022 | 10:21 AM

Share

ನಿಷೇಧಿತ ಲಷ್ಕರ್​ ಇ ತೊಯ್ಬಾ ಉಗ್ರ ಸಂಘಟನೆಯ ತಳಮಟ್ಟದ ಕೆಲಸಗಾರರಿಗೆ ಸಹಾಯ ಮಾಡಿ, ರಹಸ್ಯ ದಾಖಲೆಗಳು, ಮಾಹಿತಿಗಳನ್ನು ಸೋರಿಕೆ ಮಾಡಿದ ಆರೋಪದಡಿ ರಾಷ್ಟ್ರೀಯ ತನಿಖಾ ದಳ (National Investigation Agency) ತನ್ನ ಮಾಜಿ ಎಸ್​ಪಿ, ಐಪಿಎಸ್​ ಅಧಿಕಾರಿ ಅರವಿಂದ್ ದಿಗ್ವಿಜಯ್​ ನೇಗಿ ಎಂಬುವರನ್ನು ಬಂಧಿಸಿದೆ. ಐಪಿಎಸ್​ ಅಧಿಕಾರಿಯನ್ನು (IPS officer) ಬಂಧಿಸಿರುವ ಬಗ್ಗೆ ಎನ್​ಐಎ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇದೇ ಪ್ರಕರಣದಲ್ಲಿ ಈ ಮೊದಲು ಎನ್​ಐಎ ಆರು ಮಂದಿಯನ್ನು ಬಂಧಿಸಿತ್ತು. ಇದೀಗೆ ಅರೆಸ್ಟ್ ಆಗಿರುವ ನೇಗಿ 2011ನೇ ಬ್ಯಾಚ್​​ನ ಐಪಿಎಸ್​ ಅಧಿಕಾರಿಯಾಗಿದ್ದು, ಕಳೆದ ವರ್ಷ ನವೆಂಬರ್​ 6ರಂದು ಎನ್​ಐಎ ಕೇಸ್​ ದಾಖಲಿಸಿಕೊಂಡಿತ್ತು. ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಹೆಚ್ಚೆಚ್ಚು ಹರಡಲು ಮತ್ತು ಯೋಜನೆಗಳನ್ನು ರೂಪಿಸಲು ಎಲ್​ಇಟಿಯ ತಳಮಟ್ಟದ ಕೆಲಸಗಾರರಿಗೆ ಸಹಾಯ ಮಾಡಿದ ಆರೋಪ ಬಂದ ಹಿನ್ನೆಲೆಯಲ್ಲಿ  ಎನ್​ಐಎ ತನಿಖೆ ಶುರು ಮಾಡಿತ್ತು.

ಎನ್​ಐಎನ್​​ಲ್ಲಿದ್ದ ಐಪಿಎಸ್​​ ಅಧಿಕಾರಿ ಎ.ಡಿ.ನೇಗಿಯವರನ್ನು ಶಿಮ್ಲಾದಲ್ಲಿ ಪೋಸ್ಟಿಂಗ್​ ಮಾಡಲಾಗಿತ್ತು. ಕಳೆದ ವರ್ಷ ನವೆಂಬರ್​​ನಲ್ಲಿ ಕೇಸ್​ ದಾಖಲಿಸಿ ಅವರ ಮನೆಯನ್ನು ಸರ್ಚ್​ ಮಾಡಲಾಗಿದೆ. ಈ ವೇಳೆ ಎನ್​ಐಎಗೆ ಸಂಬಂಧಪಟ್ಟ ರಹಸ್ಯ ದಾಖಲೆಗಳನ್ನು ಸೋರಿಕೆ ಮಾಡಿದ್ದಕ್ಕೆ ಪುರಾವೆ ಸಿಕ್ಕಿದೆ. ಈ ಮಾಹಿತಿಗಳನ್ನು ಎ.ಡಿ.ನೇಗಿ ಯಾರಿಗೆ ಕೊಟ್ಟಿದ್ದಾರೋ, ಆತ ಎಲ್​ಇಟಿಯ ತಳಮಟ್ಟದ ಕೆಲಸಗಾರನಾಗಿದ್ದಾನೆ ಎಂದೂ ರಾಷ್ಟ್ರೀಯ ತನಿಖಾ ದಳದ ವಕ್ತಾರ ತಿಳಿಸಿದ್ದಾರೆ.

ಭಯೋತ್ಪಾದಕ ಸಂಘಟನೆ ಎಲ್​ಇಟಿಗೆ ಸೇರಲು ಯುವಕರನ್ನು ಪ್ರೇರೇಪಿಸುವ ಮತ್ತು ಅವರನ್ನ ನೇಮಕ ಮಾಡಿಕೊಳ್ಳುತ್ತಿರುವ ಕೇಸ್​ಗೆ ಸಂಬಂಧಪಟ್ಟಂತೆ ಬುಧವಾರ ಎನ್​ಐಎ ಜಮ್ಮು-ಕಾಶ್ಮೀರದ ಮೂರು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದೆ. ಇದಕ್ಕೆ ಕೇಂದ್ರ ಮೀಸಲು ಪಡೆ ಮತ್ತು ಜಮ್ಮು ಕಾಶ್ಮೀರ ಪೊಲೀಸರ ಸಹಾಯವನ್ನೂ ತೆಗೆದುಕೊಂಡಿದೆ. ಲಷ್ಕರ್​ ಇ ತೊಯ್ಬಾದ ಅಂಗ ಸಂಸ್ಥೆ ದಿ ರೆಸಿಸ್ಟನ್ಸ್​ ಫ್ರಂಟ್​​ನ ಕಮಾಂಡರ್​ಗಳಾದ ಸಜ್ಜದ್​ ಗುಲ್​, ಸಲೀಂ ರೆಹಮಾನಿ ಅಲಿಯಾಸ್ ಅಬು ಸಾದ್​ ಮತ್ತು ಸೈಫುಲ್ಲಾ ಸಜೀದ್​ ಜಟ್​ ಸೇರಿ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಯುವಕರನ್ನು ಸೆಳೆಯುವ ಕಾರ್ಯ ಮಾಡುತ್ತಿದ್ದಾರೆ. ಅವರನ್ನು ಉಗ್ರ ಸಂಘಟನೆಗೆ ಸೇರಿಸಲು ಪ್ರಚೋದಿಸುತ್ತಿದ್ದಾರೆ ಎಂದೂ ಎನ್​ಐಎ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಶೋಧ ಕಾರ್ಯ ನಡೆಸಿದ ಎನ್​ಐಎ ಅಧಿಕಾರಿಗಳು ಹಲವು ಡಿಜಿಟಲ್​ ಡಿವೈಸ್​​ಗಳನ್ನು, ವಸ್ತುಗಳನ್ನೂ ಜಪ್ತಿ ಮಾಡಿದ್ದಾರೆ.

Published On - 8:34 am, Sat, 19 February 22

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ