AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಕೇಶ್ ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಕೇಸ್: ಪೊಲೀಸ್ ಅಧಿಕಾರಿಯನ್ನೇ ಅರೆಸ್ಟ್ ಮಾಡಿದ ಎನ್‌ಐಎ

ಉದ್ಯಮಿ ಮುಕೇಶ್ ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಕೇಸ್​ಗೆ ಸಂಬಂಧಿಸಿ ಈ ಹಿಂದೆ ಈ ಘಟನೆಯ ತನಿಖೆಯ ಹೊಣೆ ಹೊತ್ತಿದ್ದ ಪೊಲೀಸ್ ಅಧಿಕಾರಿಯನ್ನೇ ರಾಷ್ಟ್ರೀಯ ತನಿಖಾ ದಳ ಅರೆಸ್ಟ್ ಮಾಡಿದೆ. ಸ್ಫೋಟಕ ಇಟ್ಟಿದ್ದ ತಂಡದಲ್ಲಿ ಸಚಿನ್ ವಜೆ ಕೂಡ ಭಾಗಿಯಾಗಿದ್ದು ಈ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ.

ಮುಕೇಶ್ ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಕೇಸ್: ಪೊಲೀಸ್ ಅಧಿಕಾರಿಯನ್ನೇ ಅರೆಸ್ಟ್ ಮಾಡಿದ ಎನ್‌ಐಎ
ಸಚಿನ್ ವಾಜೆ
ಆಯೇಷಾ ಬಾನು
|

Updated on:Mar 14, 2021 | 10:27 AM

Share

ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಕೇಸ್​ಗೆ ಸಂಬಂಧಿಸಿ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಜೆಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆಯ ಬಳಿಕ ತಡರಾತ್ರಿ ಎನ್‌ಐಎನಿಂದ ಅರೆಸ್ಟ್ ಮಾಡಲಾಗಿದೆ. ಈ ಹಿಂದೆ ಈ ಘಟನೆಯ ತನಿಖೆಯ ಹೊಣೆ ಹೊತ್ತಿದ್ದ ಪೊಲೀಸ್ ಅಧಿಕಾರಿಯನ್ನೇ ರಾಷ್ಟ್ರೀಯ ತನಿಖಾ ದಳ ಅರೆಸ್ಟ್ ಮಾಡಿದೆ. ಸ್ಫೋಟಕ ಇಟ್ಟಿದ್ದ ತಂಡದಲ್ಲಿ ಸಚಿನ್ ವಜೆ ಕೂಡ ಭಾಗಿಯಾಗಿದ್ದು ಈ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ.

ಎನ್​ಕೌಂಟರ್ ಸ್ಪೆಷಲಿಸ್ಟ್ ಆಗಿದ್ದ ಸಚಿನ್ ವಜೆ, ಅಂಬಾನಿ ಮನೆ ಬಳಿ ಪತ್ತೆಯಾದ ವಾಹನದಲ್ಲಿ ಸ್ಫೋಟಕ ಇರಿಸುವಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಫೆಬ್ರವರಿ 25ರಂದು ದಕ್ಷಿಣ ಮುಂಬೈನ ಕಾರ್ಮಿಚೇಲ್ ರಸ್ತೆಯಲ್ಲಿರುವ ಅಂಬಾನಿ ಮನೆ ಬಳಿ ಸ್ಫೋಟಕ ತುಂಬಿರುವ ಕಾರೊಂದು ಪತ್ತೆಯಾಗಿತ್ತು. ಈ ಕಾರಿನೊಳಗೆ ಜಿಲೆಟಿನ್ ಕಡ್ಡಿಗಳನ್ನು ತುಂಬಿಸಿಡಲಾಗಿತ್ತು. ಅದೃಷ್ಟವಶಾತ್ ಜಿಲೆಟಿನ್ ಸ್ಫೋಟಗೊಳ್ಳದ ಕಾರಣ ಭಾರಿ ಅನಾವುತ ತಪ್ಪಿದೆ.

ಮುಕೇಶ್ ಅಂಬಾನಿ ಅವರ ನಿವಾಸದ ಬಳಿ ಜಿಲೆಟಿನ್ ಕಡ್ಡಿಗಳನ್ನು ಇರಿಸಿದ ಮಹೇಂದ್ರಾ ಸ್ಕಾರ್ಪಿಯೋ ಕಾರನ್ನು ನಿರ್ವಹಿಸುತ್ತಿದ್ದ ಮನ್​ಸುಖ್ ಹಿರೇನ್ ಅವರ ಮೃತದೇಹ ಪತ್ತೆಯಾಗಿತ್ತು. ಈ ಘಟನೆ ಹಿಂದೆ ಸಚಿನ್ ವಜೆ ಅವರ ಕೈವಾಡ ಇದೆ ಎಂದು ಮನ್​ಸುಖ್ ಪತ್ನಿ ಆರೋಪಿಸಿದ್ದರು. ಈ ಆರೋಪ ಕೇಳಿ ಬಂದ ಮೇಲೆ ಘಟನೆಯ ತನಿಖೆಯ ಹೊಣೆ ಹೊತ್ತಿದ್ದ ವಜೆ ಅವರನ್ನು ತನಿಖಾ ತಂಡದಿಂದ ಕೈಬಿಡಲಾಗಿತ್ತು. ಶನಿವಾರ ವಜೆ ಅವರನ್ನು ಎನ್​ಐಎ ಸತತ 12 ಗಂಟೆಗಳ ಕಾಲ ವಿಚಾರಣೆ ನಡೆಸಿ ರಾತ್ರಿ 11.50ಕ್ಕೆ ಅರೆಸ್ಟ ಮಾಡಿದೆ. ಭಾನುವಾರ ಅವರನ್ನು ಕೋರ್ಟ್​ಗೆ ಹಾಜರು ಪಡಿಸಲಾಗುವುದು ಎಂದು ಎನ್​ಐಎ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಅಂಬಾನಿ ಮನೆ ಮುಂದೆ ಕಾರಿನಲ್ಲಿ ಜಿಲೆಟಿನ್ ಪತ್ತೆ ಪ್ರಕರಣ: ಉದ್ಯಮಿ ಮನ್​ಸುಖ್ ಹಿರೇನ್ ಸಾವಿಗೆ ಪೊಲೀಸ್ ಅಧಿಕಾರಿ ಸಚಿನ್ ವಾಜ್ ನಂಟು?

Published On - 9:24 am, Sun, 14 March 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!