AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕರನ್ನು ಐಸಿಸ್ ಉಗ್ರಗಾಮಿ ಸಂಘಟನೆಗೆ ಸೆಳೆಯಲು ಸಂಚು: ಸೂತ್ರಧಾರನನ್ನು ಬಂಧಿಸಿದ ಎನ್​ಐಎ

ಐಸಿಸ್ ಪರವಾಗಿ ಭಾರತೀಯ ಯುವಕರನ್ನು ಇಸ್ಲಾಂ ಮೂಲಭೂತವಾದಕ್ಕೆ ಆಕರ್ಷಿಸುವ ಹಾಗೂ ಉಗ್ರಗಾಮಿ ಸಂಘಟನೆಗೆ ಭರ್ತಿ ಮಾಡಿಕೊಳ್ಳುವ ಕೆಲಸ ಮಾಡುತ್ತಿದ್ದ ಎಂಬ ಅಂಶವು NIA ತನಿಖೆಯ ವೇಳೆ ಬೆಳಕಿಗೆ ಬಂದಿದೆ.

ಯುವಕರನ್ನು ಐಸಿಸ್ ಉಗ್ರಗಾಮಿ ಸಂಘಟನೆಗೆ ಸೆಳೆಯಲು ಸಂಚು: ಸೂತ್ರಧಾರನನ್ನು ಬಂಧಿಸಿದ ಎನ್​ಐಎ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 20, 2022 | 12:43 PM

Share

ದೆಹಲಿ: ರಾಷ್ಟ್ರೀಯ ತನಿಖಾ ದಳದ (National Investigation Agency – NIA) ಅಧಿಕಾರಿಗಳು ವಾರಣಾಸಿ, ಉತ್ತರ ಪ್ರದೇಶ ಮತ್ತು ದೆಹಲಿಯ ವಿವಿಧೆಡೆ ದಾಳಿ ನಡೆಸಿ ಐಸಿಸ್ (ISIS) ಸಂಘಟನೆಯೊಂದಿಗೆ ನಂಟು ಹೊಂದಿದ್ದ ತೀವ್ರವಾದಿಯನ್ನು ಬಂಧಿಸಲಾಗಿದೆ. ‘ವಾಯ್ಸ್​ ಆಫ್ ಹಿಂದ್’ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರತಾ ಏಜೆನ್ಸಿಗಳು ತನಿಖೆ ಚುರುಕುಗೊಳಿಸಿದ್ದು ಅದರ ಭಾಗವಾಗಿಯೇ ಈ ಬಂಧನ ನಡೆದಿದೆ ಎಂದು ತಿಳಿದುಬಂದಿದೆ.

ಈ ಸಂಬಂಧ ಎನ್​ಐಎ ಅಧಿಕಾರಿಗಳು ಬಾಸಿತ್ ಕಲಾಂ ಸಿದ್ದಕಿ (Kalam Siddiqui) ಎಂಬಾತನನ್ನು ಐಸಿಸ್ ಜೊತೆಗೂಡಿ ಸಂಚು ನಡೆಸಿದ ಆರೋಪದ ಮೇಲೆ ಬಂಧಿಸಿದ್ದಾರೆ. ವಾರಣಾಸಿ ಮೂಲದ ಸಿದ್ದಕಿ, ಐಸಿಸ್ ಪರವಾಗಿ ಭಾರತೀಯ ಯುವಕರನ್ನು ಇಸ್ಲಾಂ ಮೂಲಭೂತವಾದಕ್ಕೆ ಆಕರ್ಷಿಸುವ ಹಾಗೂ ಉಗ್ರಗಾಮಿ ಸಂಘಟನೆಗೆ ಭರ್ತಿ ಮಾಡಿಕೊಳ್ಳುವ ಕೆಲಸ ಮಾಡುತ್ತಿದ್ದ ಎಂಬ ಅಂಶವು ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಹೀಗೆ ಉಗ್ರಗಾಮಿ ಸಂಘಟನೆಗಳಿಗೆ ಸೇರಿಕೊಂಡ ಯುವಕರು ಹಿಂಸಾಕೃತ್ಯಗಳನ್ನು ನಡೆಸುವ ಮೂಲಕ ಭಾರತದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಸಂಘರ್ಷಕ್ಕೆ ಇಳಿಯುತ್ತಿದ್ದರು. ಸಮಾಜದಲ್ಲಿ ಭಯೋತ್ಪಾದನೆ ಚಟುವಟಿಕೆ ಹೆಚ್ಚಿಸಲು ಪ್ರಯತ್ನಿಸುತ್ತಿದ್ದರು ಎಂಬ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಭಾರತದ ವಿರುದ್ಧ ಉಗ್ರಗಾಮಿ ಚಟುವಟಿಕೆ ನಡೆಸಲು ಆನ್​ಲೈನ್​ ಮಾಧ್ಯಮಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಬಗ್ಗೆಯೂ ಹೊಸ ಕಾರ್ಯತಂತ್ರವನ್ನು ಉಗ್ರರು ರೂಪಿಸಿದ್ದರು. ಇದಕ್ಕಾಗಿ ‘ವಾಯ್ಸ್​ ಆಫ್ ಖೊರಾಸನ್’ ಆನ್​ಲೈನ್ ಪತ್ರಿಕೆಯನ್ನು ಬಳಸಿಕೊಳ್ಳಲಾಗುತ್ತಿತ್ತು. ಎನ್​ಐಎ ಈ ಸಂಬಂಧ ‘ವಾಯ್ಸ್​ ಆಫ್ ಹಿಂದ್’ ಸಂಚು ಭೇದಿಸಿದ ನಂತರ 6 ಮಂದಿಯನ್ನು ಬಂಧಿಸಲಾಯಿತು.

ಶೋಧ ಕಾರ್ಯಾಚರಣೆ ವೇಳೆ ಎನ್​ಐಎ ಅಧಿಕಾರಿಗಳು ಉಗ್ರಗಾಮಿ ಕೃತ್ಯಕ್ಕೆ ಬಳಸುತ್ತಿದ್ದ ಹಲವು ವಸ್ತುಗಳು, ಹಸ್ತಪ್ರತಿಗಳು, ಸುಧಾರಿತ ಸ್ಫೋಟಕಗಳು, ಮೊಬೈಲ್ ಫೋನ್​ಗಳು, ಲ್ಯಾಪ್​ಟಾಪ್​ಗಳು, ಪೆನ್​ಡ್ರೈವ್​ಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಜೂನ್ ತಿಂಗಳಲ್ಲಿ ಎನ್​ಐಎ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿತ್ತು.

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ