AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರದ ಹಲವು ಪ್ರದೇಶಗಳಲ್ಲಿ ರಾಷ್ಟ್ರೀಯ ತನಿಖಾದಳದಿಂದ ರೇಡ್​: ಪೊಲೀಸರಿಂದ ಮೂವರು ಉಗ್ರರ ಹತ್ಯೆ

ರೇಡ್​ ವೇಳೆ ಐಸಿಸ್​ ಉಗ್ರಸಂಘಟನೆಯೊಂದಿಗೆ ಸಂಪರ್ಕ ಹೊಂದಿದ ಐವರನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಅವರಲ್ಲಿ ಕೆಲವರನ್ನು ತಮ್ಮ ವಶಕ್ಕೆ ತೆಗೆದುಕೊಂಡು ವಿಚಾರಣೆ ಪ್ರಾರಂಭಿಸಿದ್ದಾರೆ.

ಜಮ್ಮು-ಕಾಶ್ಮೀರದ ಹಲವು ಪ್ರದೇಶಗಳಲ್ಲಿ ರಾಷ್ಟ್ರೀಯ ತನಿಖಾದಳದಿಂದ ರೇಡ್​: ಪೊಲೀಸರಿಂದ ಮೂವರು ಉಗ್ರರ ಹತ್ಯೆ
ರೇಡ್​ ನಡೆಸುತ್ತಿರುವ ಎನ್​ಐಎ ಅಧಿಕಾರಿಗಳು
TV9 Web
| Edited By: |

Updated on: Jul 11, 2021 | 2:46 PM

Share

ಶ್ರೀನಗರ: ಉಗ್ರ ಸಂಘಟನೆಗಳಿಗೆ ಹಣಕಾಸಿನ ನೆರವು ನೀಡುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ದಳ (NIA) ಜಮ್ಮು-ಕಾಶ್ಮೀರದ ಹಲವು ಕಡೆಗಳಲ್ಲಿ ದಾಳಿ ನಡೆಸಿದೆ. ಶ್ರೀನಗರ, ಅನಂತ್​ನಾಗ್, ಬಾರಾಮುಲ್ಲಾ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ತನಿಖಾ ಸಂಸ್ಥೆ ರೇಡ್ ಮಾಡಿದ್ದಾಗಿ ವರದಿಯಾಗಿದೆ.

ಈ ರೇಡ್​ ವೇಳೆ ಐಸಿಸ್​ ಉಗ್ರಸಂಘಟನೆಯೊಂದಿಗೆ ಸಂಪರ್ಕ ಹೊಂದಿದ ಐವರನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಅವರಲ್ಲಿ ಕೆಲವರನ್ನು ತಮ್ಮ ವಶಕ್ಕೆ ತೆಗೆದುಕೊಂಡು ವಿಚಾರಣೆ ಪ್ರಾರಂಭಿಸಿದ್ದಾರೆ. ಇಂದು ಜಮ್ಮು-ಕಾಶ್ಮೀರ ಆಡಳಿತ ಒಟ್ಟು 11 ಮಂದಿ ತನ್ನ ಉದ್ಯೋಗಿಗಳನ್ನು ವಜಾಗೊಳಿಸಿದ್ದು, ಅದರಲ್ಲಿ ಹಿಜ್ಬುಲ್​ ಮುಜಾಹಿದ್ದೀನ್​​ ಮುಖ್ಯಸ್ಥ ಮತ್ತು ಮೋಸ್ಟ್​ ವಾಂಟೆಡ್​ ಉಗ್ರ ಸೈಯದ್​ ಸಲಾಹುದ್ದೀನ್​ರ ಪುತ್ರನೂ ಸೇರಿದ್ದಾನೆ ಎನ್ನಲಾಗಿದೆ. ಈತ ಉಗ್ರಸಂಘಟನೆಗಳಿಗಾಗಿ ಕೆಲಸ ಮಾಡಿದ್ದಾನೆಂದು ಆರೋಪಿಸಲಾಗಿದೆ.

ಮೂವರು ಉಗ್ರರ ಹತ್ಯೆ ಇಂದು ಲಷ್ಕರ್​ ಇ ತೊಯ್ಬಾ(LeT) ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಜಮ್ಮು-ಕಾಶ್ಮೀರ ಪೊಲೀಸರು ಅನಂತ್​ನಾಗ್​​ನಲ್ಲಿ ಹತ್ಯೆ ಮಾಡಿದ್ದಾರೆ. ಅನಂತ್​ನಾಗ್​ನ ಕವಾರಿಗಾಮ್​ ರಾಣಿಪೋರಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಹತ್ಯೆಯಾದ ಉಗ್ರರನ್ನು ಆರಿಫ್​ ಹಜಾಮ್​, ಬಸಿತ್​ ರಶೀದ್​ ಗನೈ ಮತ್ತು ಔಡ್ಸೂ ತೆಲ್ವಾನಿ ಅಕ್ಬಲ್ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಲಷ್ಕರ್​ ಇ ತೊಯ್ಬಾಕ್ಕೆ ಸೇರಿದವರೇ ಆಗಿದ್ದರು ಎಂದು ಪೊಲೀಸರು ಖಚಿತ ಪಡಿಸಿದ್ದಾರೆ. ಜಮ್ಮು-ಕಾಶ್ಮೀರ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ನಡೆದ ಹಲವು ದಾಳಿಗಳಲ್ಲಿ ಇವರು ಪಾಲ್ಗೊಂಡಿದ್ದರು. ರಕ್ಷಣಾ ಅಧಿಕಾರಿಗಳು, ನಾಗರಿಕರನ್ನು ಹತ್ಯೆ ಮಾಡಿದವರಾಗಿದ್ದಾರೆ ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ನೆಟ್ವರ್ಕ್ ಸಿಗದೇ ವಿದ್ಯಾರ್ಥಿಗಳ ಪರದಾಟ; ಸರ್ಕಾರದ ವಿರುದ್ಧ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಆಕ್ರೋಶ

Art With Heart : ಆನ್​ಲೈನ್​ ತರಗತಿಗಳಿಗೆಂದೇ ವೈಜ್ಞಾನಿಕ ರಂಗಪಠ್ಯ ರೂಪಿಸಿದ ‘ರಂಗರಥ‘

NIA conducts raids at multiple locations in Jammu And Kashmir

Follow Us
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
ನಾಗೇಂದ್ರ ಆಯ್ತು, ಇನ್ನೊಂದು ವಿಕೆಟ್ ಪತನವಾಗುತ್ತೆ: ಆರ್ ಅಶೋಕ್
ನಾಗೇಂದ್ರ ಆಯ್ತು, ಇನ್ನೊಂದು ವಿಕೆಟ್ ಪತನವಾಗುತ್ತೆ: ಆರ್ ಅಶೋಕ್