AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖೆಜುರಿ ಬಾಂಬ್​ ಸ್ಫೋಟ ಪ್ರಕರಣ; ಪಶ್ಚಿಮ ಬಂಗಾಳದ ಐದು ಪ್ರದೇಶಗಳಲ್ಲಿ ಎನ್​ಐಎ ರೇಡ್​​ !

ಖೆಜುರಿ ಬಾಂಬ್​ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ನಾವು ನಡೆಸಲಿದ್ದೇವೆ. ರಾಜ್ಯ ಪೊಲೀಸರು ಈ ಕೇಸ್​​ನ್ನು ನಮಗೆ ಹಸ್ತಾಂತರ ಮಾಡಿದ್ದಾರೆ ಎಂದು ಎನ್​ಐಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಖೆಜುರಿ ಬಾಂಬ್​ ಸ್ಫೋಟ ಪ್ರಕರಣ; ಪಶ್ಚಿಮ ಬಂಗಾಳದ ಐದು ಪ್ರದೇಶಗಳಲ್ಲಿ ಎನ್​ಐಎ ರೇಡ್​​ !
ಎನ್​ಐಎ
TV9 Web
| Edited By: |

Updated on:Feb 26, 2022 | 9:52 AM

Share

ಖೆಜುರಿ ಬಾಂಬ್​ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ದಳ (NIA) ಪಶ್ಚಿಮ ಬಂಗಾಳದ (West Bengal) ವಿವಿಧೆಡೆ ರೇಡ್​​ ಮಾಡಿದೆ.  ಪೂರ್ವ ಮೇದಿನಿಪುರ ಜಿಲ್ಲೆಯ ಒಟ್ಟು ಐದು ಪ್ರದೇಶಗಳಲ್ಲಿ ಎನ್​ಐಎ ಹುಡುಕಾಟ ನಡೆಸಿದೆ. ಈ ವೇಳೆ ಹಲವು ದೋಷಯುಕ್ತ ದಾಖಲೆಗಳು, ಡಿಜಿಟಲ್​ ಉಪಕರಣಗಳನ್ನು ವಶಪಡಿಸಿಕೊಂಡಿದೆ. 

2022 ಜನವರಿ 3ರಂದು ಖೆಜುರಿ ಪೊಲೀಸ್​ ಠಾಣೆ ವ್ಯಾಪ್ತಿಯ ಪಶ್ಚಿಮ ಭಂಗನಮರಿ ಗ್ರಾಮದ ಕಂಕಣ್​ ಕರಣ್​ ಎಂಬಾತನ ಮನೆಯಲ್ಲಿ ಬಾಂಬ್​ ಸ್ಫೋಟವಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರು ಹಾಗೂ ಮೂವರಿಗೆ ಗಾಯವಾಗಿತ್ತು. ಅಂದರೆ ಇವರೆಲ್ಲ ಮನೆಯಲ್ಲೇ ಬಾಂಬ್​ ತಯಾರು ಮಾಡುತ್ತಿದ್ದರು ಎಂದು ಹೇಳಲಾಗಿದೆ.  ಪ್ರಕರಣಕ್ಕೆ ಸಂಬಂಧಪಟ್ಟಂತೆ ಖೆಜುರಿ ಠಾಣೆಯಲ್ಲಿ ಜನವರಿ 4ರಂದು ಕೇಸ್​ ದಾಖಲಾಗಿ, ಜನವರಿ 25ರಂದು ಎನ್​ಐಎ ತನಿಖೆ ಕೈಗೆತ್ತಿಕೊಂಡಿತ್ತು.

ಅಂದಹಾಗೇ ಬಾಂಬ್​ ಬ್ಲಾಸ್ಟ್​​ನಲ್ಲಿ ಮೃತಪಟ್ಟವರಲ್ಲಿ ಒಬ್ಬಾತ ತೃಣಮೂಲ ಕಾಂಗ್ರೆಸ್​ ಕಾರ್ಯಕರ್ತನೂ ಸೇರಿದ್ದಾಗಿ ವರದಿಯಾಗಿದೆ. ತನಿಖೆಯನ್ನು ತಾವು ಕೈಗೆತ್ತಿಕೊಂಡಿದ್ದನ್ನು ಸ್ಪಷ್ಟಪಡಿಸಿದ್ದ ಎನ್​ಐಎ ಅಧಿಕಾರಿಯೊಬ್ಬರು, ಖೆಜುರಿ ಬಾಂಬ್​ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ನಾವು ನಡೆಸಲಿದ್ದೇವೆ. ರಾಜ್ಯ ಪೊಲೀಸರು ಈ ಕೇಸ್​​ನ್ನು ನಮಗೆ ಹಸ್ತಾಂತರ ಮಾಡಿದ್ದಾರೆ ಎಂದು ತಿಳಿಸಿದ್ದರು. ಇನ್ನು ಘಟನೆ ನಡೆದ ಬೆನ್ನಲ್ಲೇ ಟಿಎಂಸಿ ಇದನ್ನು ಬಿಜೆಪಿ ತಲೆಗೆ ಕಟ್ಟಿದೆ. ಬಾಂಬ್​ ಬ್ಲಾಸ್​ ಹಿಂದೆ ಬಿಜೆಪಿ ಗೂಂಡಾಗಳು ಇದ್ದಾರೆ ಎಂದು ಆರೋಪ ಮಾಡಿದೆ. ಅಷ್ಟೇ ಅಲ್ಲ, ಘಟನೆ ಬೆನ್ನಲ್ಲೇ ಖೆಜುರಿಯಲ್ಲಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ  ಗಲಾಟೆಯೂ ನಡೆದಿದೆ ಎಂದು ವರದಿಯಾಗಿತ್ತು.

ಇದನ್ನೂ ಓದಿ: ಉಕ್ರೇನ್​ ಸೇನೆ ಸೇರಲು ಸರತಿ ಸಾಲಿನಲ್ಲಿ ನಿಂತ 80 ವರ್ಷದ ವೃದ್ಧ: ಫೋಟೋ ವೈರಲ್​

Published On - 9:51 am, Sat, 26 February 22

Follow Us
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್