AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖೆಜುರಿ ಬಾಂಬ್​ ಸ್ಫೋಟ ಪ್ರಕರಣ; ಪಶ್ಚಿಮ ಬಂಗಾಳದ ಐದು ಪ್ರದೇಶಗಳಲ್ಲಿ ಎನ್​ಐಎ ರೇಡ್​​ !

ಖೆಜುರಿ ಬಾಂಬ್​ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ನಾವು ನಡೆಸಲಿದ್ದೇವೆ. ರಾಜ್ಯ ಪೊಲೀಸರು ಈ ಕೇಸ್​​ನ್ನು ನಮಗೆ ಹಸ್ತಾಂತರ ಮಾಡಿದ್ದಾರೆ ಎಂದು ಎನ್​ಐಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಖೆಜುರಿ ಬಾಂಬ್​ ಸ್ಫೋಟ ಪ್ರಕರಣ; ಪಶ್ಚಿಮ ಬಂಗಾಳದ ಐದು ಪ್ರದೇಶಗಳಲ್ಲಿ ಎನ್​ಐಎ ರೇಡ್​​ !
ಎನ್​ಐಎ
TV9 Web
| Edited By: |

Updated on:Feb 26, 2022 | 9:52 AM

Share

ಖೆಜುರಿ ಬಾಂಬ್​ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ದಳ (NIA) ಪಶ್ಚಿಮ ಬಂಗಾಳದ (West Bengal) ವಿವಿಧೆಡೆ ರೇಡ್​​ ಮಾಡಿದೆ.  ಪೂರ್ವ ಮೇದಿನಿಪುರ ಜಿಲ್ಲೆಯ ಒಟ್ಟು ಐದು ಪ್ರದೇಶಗಳಲ್ಲಿ ಎನ್​ಐಎ ಹುಡುಕಾಟ ನಡೆಸಿದೆ. ಈ ವೇಳೆ ಹಲವು ದೋಷಯುಕ್ತ ದಾಖಲೆಗಳು, ಡಿಜಿಟಲ್​ ಉಪಕರಣಗಳನ್ನು ವಶಪಡಿಸಿಕೊಂಡಿದೆ. 

2022 ಜನವರಿ 3ರಂದು ಖೆಜುರಿ ಪೊಲೀಸ್​ ಠಾಣೆ ವ್ಯಾಪ್ತಿಯ ಪಶ್ಚಿಮ ಭಂಗನಮರಿ ಗ್ರಾಮದ ಕಂಕಣ್​ ಕರಣ್​ ಎಂಬಾತನ ಮನೆಯಲ್ಲಿ ಬಾಂಬ್​ ಸ್ಫೋಟವಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರು ಹಾಗೂ ಮೂವರಿಗೆ ಗಾಯವಾಗಿತ್ತು. ಅಂದರೆ ಇವರೆಲ್ಲ ಮನೆಯಲ್ಲೇ ಬಾಂಬ್​ ತಯಾರು ಮಾಡುತ್ತಿದ್ದರು ಎಂದು ಹೇಳಲಾಗಿದೆ.  ಪ್ರಕರಣಕ್ಕೆ ಸಂಬಂಧಪಟ್ಟಂತೆ ಖೆಜುರಿ ಠಾಣೆಯಲ್ಲಿ ಜನವರಿ 4ರಂದು ಕೇಸ್​ ದಾಖಲಾಗಿ, ಜನವರಿ 25ರಂದು ಎನ್​ಐಎ ತನಿಖೆ ಕೈಗೆತ್ತಿಕೊಂಡಿತ್ತು.

ಅಂದಹಾಗೇ ಬಾಂಬ್​ ಬ್ಲಾಸ್ಟ್​​ನಲ್ಲಿ ಮೃತಪಟ್ಟವರಲ್ಲಿ ಒಬ್ಬಾತ ತೃಣಮೂಲ ಕಾಂಗ್ರೆಸ್​ ಕಾರ್ಯಕರ್ತನೂ ಸೇರಿದ್ದಾಗಿ ವರದಿಯಾಗಿದೆ. ತನಿಖೆಯನ್ನು ತಾವು ಕೈಗೆತ್ತಿಕೊಂಡಿದ್ದನ್ನು ಸ್ಪಷ್ಟಪಡಿಸಿದ್ದ ಎನ್​ಐಎ ಅಧಿಕಾರಿಯೊಬ್ಬರು, ಖೆಜುರಿ ಬಾಂಬ್​ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ನಾವು ನಡೆಸಲಿದ್ದೇವೆ. ರಾಜ್ಯ ಪೊಲೀಸರು ಈ ಕೇಸ್​​ನ್ನು ನಮಗೆ ಹಸ್ತಾಂತರ ಮಾಡಿದ್ದಾರೆ ಎಂದು ತಿಳಿಸಿದ್ದರು. ಇನ್ನು ಘಟನೆ ನಡೆದ ಬೆನ್ನಲ್ಲೇ ಟಿಎಂಸಿ ಇದನ್ನು ಬಿಜೆಪಿ ತಲೆಗೆ ಕಟ್ಟಿದೆ. ಬಾಂಬ್​ ಬ್ಲಾಸ್​ ಹಿಂದೆ ಬಿಜೆಪಿ ಗೂಂಡಾಗಳು ಇದ್ದಾರೆ ಎಂದು ಆರೋಪ ಮಾಡಿದೆ. ಅಷ್ಟೇ ಅಲ್ಲ, ಘಟನೆ ಬೆನ್ನಲ್ಲೇ ಖೆಜುರಿಯಲ್ಲಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ  ಗಲಾಟೆಯೂ ನಡೆದಿದೆ ಎಂದು ವರದಿಯಾಗಿತ್ತು.

ಇದನ್ನೂ ಓದಿ: ಉಕ್ರೇನ್​ ಸೇನೆ ಸೇರಲು ಸರತಿ ಸಾಲಿನಲ್ಲಿ ನಿಂತ 80 ವರ್ಷದ ವೃದ್ಧ: ಫೋಟೋ ವೈರಲ್​

Published On - 9:51 am, Sat, 26 February 22

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ