AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಚಿನ್ನ ಕಳ್ಳಸಾಗಾಣಿಕೆ ಪ್ರಕರಣ: ಸ್ವಪ್ನಾ ಸುರೇಶ್ ಜಾಮೀನು ತಿರಸ್ಕರಿಸಿದ ಎನ್​ಐಎ ನ್ಯಾಯಾಲಯ

Kerala Gold Smuggling Case: ಈ ಹಿಂದೆ ಪ್ರಕರಣದ ಕೆಲವು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಜಾಮೀನು ನೀಡಿರುವುದನ್ನು ಪ್ರಶ್ನಿಸಿ ರಾಷ್ಟ್ರೀಯ ತನಿಖಾ ದಳ ಹೈಕೋರ್ಟ್​ಗೆ ಮನವಿ ಸಲ್ಲಿಸಿತ್ತು. ಆ ಮನವಿಯನ್ನೂ ಹೈಕೋರ್ಟ್ ತಿರಸ್ಕರಿಸಿತ್ತು.

ಕೇರಳ ಚಿನ್ನ ಕಳ್ಳಸಾಗಾಣಿಕೆ ಪ್ರಕರಣ: ಸ್ವಪ್ನಾ ಸುರೇಶ್ ಜಾಮೀನು ತಿರಸ್ಕರಿಸಿದ ಎನ್​ಐಎ ನ್ಯಾಯಾಲಯ
ಸ್ವಪ್ನಾ ಸುರೇಶ್
TV9 Web
| Edited By: |

Updated on:Apr 06, 2022 | 6:53 PM

Share

ಕೊಚ್ಚಿ: ಚಿನ್ನ ಕಳ್ಳಸಾಗಾಣಿಕೆ ಆರೋಪದಲ್ಲಿ ಸಿಲುಕಿರುವ ಸ್ವಪ್ನಾ ಸುರೇಶ್ ಹಾಗೂ ಇತರ ಆರು ಆರೋಪಿಗಳ ಜಾಮೀನು ಅರ್ಜಿಯನ್ನು ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯ ಇಂದು (ಮಾರ್ಚ್ 22) ತಿರಸ್ಕರಿಸಿದೆ. ಪ್ರಕರಣದ ಕುರಿತಾದ ತನಿಖೆ ಕೊನೆಯಾಗಿದೆ ಹಾಗೂ ಆರೋಪಿಗಳು ದೀರ್ಘಕಾಲದಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂಬ ಕಾರಣಕ್ಕೆ ಜಾಮೀನು ಕೋರಿ ಆರೋಪಿಗಳು ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು. ಜೊತೆಗೆ, ಆರೋಪಿಗಳ ವಿರುದ್ಧದ ಇರುವ ಆಪಾದನೆಗಳು ಕಾನೂನಿನ ಎದುರು ಸ್ಥಿರವಾಗಿಲ್ಲ ಎಂದೂ ಅವರು ಹೇಳಿದ್ದರು.

ಈ ಹಿಂದೆ ಪ್ರಕರಣದ ಕೆಲವು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಜಾಮೀನು ನೀಡಿರುವುದನ್ನು ಪ್ರಶ್ನಿಸಿ ರಾಷ್ಟ್ರೀಯ ತನಿಖಾ ದಳ (National Investigation Agency – NIA) ಹೈಕೋರ್ಟ್​ಗೆ ಮನವಿ ಸಲ್ಲಿಸಿತ್ತು. ಆ ಮನವಿಯನ್ನೂ ಹೈಕೋರ್ಟ್ ತಿರಸ್ಕರಿಸಿತ್ತು. ಈ ವಿವರಗಳನ್ನು ಸ್ವಪ್ನಾ ಸುರೇಶ್ ಹಾಗೂ ಇತರ ಆರು ಆರೋಪಿಗಳು ತಮ್ಮ ಜಾಮೀನು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ಉಳಿದ ಕೆಲ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್, ಚಿನ್ನ ಕಳ್ಳಸಾಗಾಣಿಕೆಯು ಕಾನೂನು ಬಾಹಿರ ಚಟುವಟಿಕೆ (ತಡೆ) ಕಾಯ್ದೆ (UAPA)ಯ ಅಡಿಯಲ್ಲಿ ಬರುವುದಿಲ್ಲ. ಬದಲಾಗಿ ದೇಶದ ಆರ್ಥಿಕ ಅಥವಾ ಹಣಕಾಸು ಸ್ಥಿರತೆಗೆ ಸಮಸ್ಯೆ ಉಂಟಾದ ಬಗ್ಗೆ ಸಾಕ್ಷಿ ಬೇಕು ಎಂದು ತಿಳಿಸಿತ್ತು. ಹೈಕೋರ್ಟ್​ನ ಈ ತೀರ್ಪು ಉಲ್ಲೇಖಿಸಿದ್ದ ಆರೋಪಿಗಳು ತಮ್ಮ ವಿರುದ್ಧದ ಆಪಾದನೆಗಳು ಸ್ಥಿರವಾಗಿಲ್ಲ ಎಂದು ಹೇಳಿದ್ದರು.

ಸದ್ಯ, ₹ 14.82 ಕೋಟಿ ಬೆಲೆಬಾಳುವ 30 ಕೆಜಿ ಚಿನ್ನ ಕಳ್ಳ ಸಾಗಾಣಿಕೆ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಸ್ವಪ್ನಾ ಸುರೇಶ್ ಕೇರಳದಲ್ಲಿನ ಯುಎಇ ರಾಯಭಾರ ಕಚೇರಿಯ ಮಾಜಿ ಉದ್ಯೋಗಿಯಾಗಿದ್ದರು. ಕಳೆದ ಕೆಲವು ತಿಂಗಳ ಹಿಂದೆ ಹಂಚಿಕೆಯಾಗಿದ್ದ ಸ್ವಪ್ನಾ ಸುರೇಶ್​ಗೆ ಸಂಬಂಧಿಸಿದ್ದು ಎನ್ನಲಾಗಿರುವ ಧ್ವನಿ ತುಣುಕಿನಲ್ಲಿ, ಇಡಿ ಅಧಿಕಾರಿಗಳು ಮುಖ್ಯಮಂತ್ರಿ ಹಾಗೂ ಇತರ ಕೆಲವು ಸಚಿವರ ವಿರುದ್ಧ ಹೇಳಿಕೆ ನೀಡುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪ ಕೇಳಿಬಂದಿತ್ತು.

ಅಷ್ಟೇ ಅಲ್ಲದೆ, ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದ ವೇಳೆ ಸ್ವಪ್ನಾ ಸುರೇಶ್ ಜೊತೆಗಿದ್ದ ಇಬ್ಬರು ಮಹಿಳಾ ಪೊಲೀಸರು ಕೂಡ, ವಿಜಯನ್ ಹೆಸರು ಹೇಳುವಂತೆ ಸ್ವಪ್ನಾರನ್ನು ಒತ್ತಾಯಿಸಿದ್ದನ್ನು ಕೇಳಿದ್ದೇವೆ ಎಂದು ಹೇಳಿಕೆ ನೀಡಿದ್ದರು. ಜಾರಿ ನಿರ್ದೇಶನಾಲಯ ಜೊತೆಗೆ ರಾಷ್ಟ್ರೀಯ ತನಿಖಾ ದಳ (NIA) ಹಾಗೂ ಕಸ್ಟಮ್ಸ್ ಅಧಿಕಾರಿಗಳು ಕೂಡ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದ ವಿರುದ್ಧ ತನಿಖೆ ನಡೆಸುತ್ತಿದ್ದಾರೆ. ಕೇಂದ್ರದ ಏಜೆನ್ಸಿಗಳು ತಮ್ಮ ರಾಜ್ಯ ಸರ್ಕಾರವನ್ನು ಗುರಿಯಾಗಿಸಿ ಹೀಗೆ ಮಾಡುತ್ತಿದೆ ಎಂದು ಪಿಣರಾಯಿ ವಿಜಯನ್ ಆರೋಪಿಸಿದ್ದರು.

ಇದನ್ನೂ ಓದಿ: ಪಿಣರಾಯಿ ವಿಜಯನ್ ಹೆಸರು ಹೇಳಲು ಸ್ವಪ್ನಾ ಸುರೇಶ್​ರನ್ನು ಒತ್ತಾಯಿಸಲಾಗಿದೆ: ED ವಿರುದ್ಧ ಪ್ರಕರಣ ದಾಖಲಿಸಿದ ಕೇರಳ ಪೊಲೀಸ್

ಇದನ್ನೂ ಓದಿ:  ಕೇರಳ Gold Smuggling: ನೇರವಾಗಿ ಫೀಲ್ಡ್ ಗೆ ಇಳಿದ NIA

Published On - 3:23 pm, Mon, 22 March 21

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್