AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮೇತರರ ಮೇಲೆ ಸೇಡು ತೀರಿಸಲು ಭಾರತದಾದ್ಯಂತ ದಾಳಿಗೆ ಶಂಕಿತ ಐಸಿಸ್ ಉಗ್ರರ ಯೋಜನೆ

ತನಿಖಾ ಸಂಸ್ಥೆಯು "ಕಾಫಿರ್‌ಗಳ ಮೇಲಿನ ಪ್ರತೀಕಾರ" ಎಂಬ ಶೀರ್ಷಿಕೆಯ ದಾಖಲೆಗಳ ಸೆಟ್ ಅನ್ನು ವಶಪಡಿಸಿಕೊಂಡಿದೆ, ಅದು ಭಾರತದಲ್ಲಿ ಐಸಿಸ್ ಚಟುವಟಿಕೆಗಳನ್ನು ಮುಂದುವರಿಸಲು ಅವರ ಕಾರ್ಯತಂತ್ರವನ್ನು ವಿವರಿಸುತ್ತದೆ. "ಅವರು ಕಾಫಿರರು (ಮುಸ್ಲಿಮೇತರರು) ಮುಸ್ಲಿಮರ ಮೇಲೆ ನಡೆಸಿದ ದೌರ್ಜನ್ಯಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಬಯಸಿದ್ದರು" ಎಂದು ಅಧಿಕಾರಿಗಳು ಹೇಳಿದ್ದಾರೆ.

ಮುಸ್ಲಿಮೇತರರ ಮೇಲೆ ಸೇಡು ತೀರಿಸಲು ಭಾರತದಾದ್ಯಂತ ದಾಳಿಗೆ ಶಂಕಿತ ಐಸಿಸ್ ಉಗ್ರರ ಯೋಜನೆ
ಎನ್ಐಎ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Nov 11, 2023 | 6:57 PM

Share

ದೆಹಲಿ ನವೆಂಬರ್ 11: ದೇಶಾದ್ಯಂತ ದಾಳಿಗೆ ಯೋಜನೆ ರೂಪಿಸಿದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಏಳು ಶಂಕಿತ ಐಸಿಸ್ ಭಯೋತ್ಪಾದಕರ (suspected ISIS terrorists) ವಿರುದ್ಧ ಚಾರ್ಜ್ ಶೀಟ್ (chargesheet) ಸಲ್ಲಿಸಿದೆ.ಆರೋಪಿಗಳು ತಮ್ಮ ಹ್ಯಾಂಡ್ಲರ್‌ಗಳ ನಿರ್ದೇಶನದ ಮೇರೆಗೆ ಐಸಿಸ್ ಚಟುವಟಿಕೆಗಳನ್ನು ಉತ್ತೇಜಿಸಲು ಹಣವನ್ನು ಸಂಗ್ರಹಿಸಿದ್ದಾರೆ ಎಂದು ತನಿಖೆಗಳು ಬಹಿರಂಗಪಡಿಸಿವೆ ಎಂದು ಆರೋಪಪಟ್ಟಿ ಹೇಳಿದೆ. ದೇಶದಲ್ಲಿ ಹಿಂಸಾಚಾರ ಮತ್ತು ಭಯೋತ್ಪಾದನೆ ಮಾಡಲು ಬಯಸಿದ್ದರು ಎಂದು ಎನ್ಐಎ ಮೂಲಗಳು ತಿಳಿಸಿವೆ.

ಎಲ್ಲಾ ಆರೋಪಿಗಳು ವಿದ್ಯಾವಂತರು ಮತ್ತು ತಂತ್ರಜ್ಞಾನ ಬಲ್ಲವರು. ಅವರು ಮಹಾರಾಷ್ಟ್ರದ ಪುಣೆಯಲ್ಲಿ ಹಲವಾರು ಸಭೆಗಳನ್ನು ನಡೆಸಿದ್ದು, ವಾಟ್ಸಾಪ್ ಗುಂಪುಗಳ ಮೂಲಕ ಹೆಚ್ಚಿನ ಸದಸ್ಯರನ್ನು ನೇಮಿಸಿಕೊಳ್ಳಲು ಯೋಜಿಸಿದ್ದಾರೆ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ. ಈ ಉಗ್ರರು ಐಇಡಿಗಳಿಗೆ ರಾಸಾಯನಿಕಗಳನ್ನು ಖರೀದಿಸಲು ಸಲ್ಫ್ಯೂರಿಕ್ ಆಸಿಡ್‌ಗೆ ವಿನೆಗರ್ ಅಥವಾ ಸಿರ್ಕಾ, ಅಸಿಟೋನ್‌ಗಾಗಿ ರೋಸ್‌ವಾಟರ್ ಮತ್ತು ಹೈಡ್ರೋಜನ್ ಪೆರಾಕ್ಸೈಡ್‌ಗಾಗಿ ಶೆರ್ಬತ್‌ನಂತಹ ಕೋಡ್ ಪದಗಳನ್ನು ಬಳಸಿದ್ದಾರೆ

“ಭಾರತದೊಳಗೆ ಐಸಿಸ್ ಉಗ್ರಗಾಮಿ ಸಿದ್ಧಾಂತವನ್ನು ಪ್ರಚಾರ ಮಾಡಲು ಬದ್ಧವಾಗಿರುವ ವ್ಯಕ್ತಿಗಳ ಸಂಕೀರ್ಣ ಜಾಲವನ್ನು ತನಿಖೆಯು ಬಹಿರಂಗಪಡಿಸಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತನಿಖಾ ಸಂಸ್ಥೆಯು “ಕಾಫಿರ್‌ಗಳ ಮೇಲಿನ ಪ್ರತೀಕಾರ” ಎಂಬ ಶೀರ್ಷಿಕೆಯ ದಾಖಲೆಗಳ ಸೆಟ್ ಅನ್ನು ವಶಪಡಿಸಿಕೊಂಡಿದೆ, ಅದು ಭಾರತದಲ್ಲಿ ಐಸಿಸ್ ಚಟುವಟಿಕೆಗಳನ್ನು ಮುಂದುವರಿಸಲು ಅವರ ಕಾರ್ಯತಂತ್ರವನ್ನು ವಿವರಿಸುತ್ತದೆ. “ಅವರು ಕಾಫಿರರು (ಮುಸ್ಲಿಮೇತರರು) ಮುಸ್ಲಿಮರ ಮೇಲೆ ನಡೆಸಿದ ದೌರ್ಜನ್ಯಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಬಯಸಿದ್ದರು” ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ಮದ್ಯ ನೀತಿ ಪ್ರಕರಣದಲ್ಲಿ ಎಎಪಿಯನ್ನು ಆರೋಪಿ ಮಾಡಬೇಕೇ? ಕಾನೂನು ಸಲಹೆ ಪಡೆಯಲಿದೆ ತನಿಖಾ ಸಂಸ್ಥೆ

ಆರೋಪಿಗಳು ಸ್ಫೋಟಗಳನ್ನು ನಡೆಸಲು ಸಂಭಾವ್ಯ ಗುರಿಗಳನ್ನು ಗುರುತಿಸಲು ಮಹಾರಾಷ್ಟ್ರ, ಕರ್ನಾಟಕ, ಗೋವಾ, ತೆಲಂಗಾಣ ಮತ್ತು ಕೇರಳ ಸೇರಿದಂತೆ ವಿವಿಧ ರಾಜ್ಯಗಳಿಗೆ ಪ್ರಯಾಣಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳು ವಿದೇಶಿ ಹ್ಯಾಂಡ್ಲರ್‌ಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಎನ್‌ಐಎ ಆರೋಪಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ