AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿನ್ ವಾಜೆ ಪ್ರಕರಣ: ಪ್ರತಿ ತಿಂಗಳು ಲಂಚ ಸ್ವೀಕರಿಸುತ್ತಿದ್ದ ಬಗ್ಗೆ ಎನ್​ಐಎಗೆ ಸಿಕ್ತು ಮಹತ್ವದ ದಾಖಲೆಗಳು

ಅಗತ್ಯವಿದ್ದರೆ, ಉನ್ನತ ತನಿಖೆಗಾಗಿ ದಾಖಲೆಗಳನ್ನು ಆದಾಯ ತೆರಿಗೆ ಅಥವಾ ಸಿಬಿಐ ಅಧಿಕಾರಿಗಳ ಬಳಿಯೂ ಹಂಚಿಕೊಳ್ಳಲಾಗುವುದು ಎಂದು ರಾಷ್ಟ್ರೀಯ ತನಿಖಾ ದಳ ತಿಳಿಸಿದೆ.

ಸಚಿನ್ ವಾಜೆ ಪ್ರಕರಣ: ಪ್ರತಿ ತಿಂಗಳು ಲಂಚ ಸ್ವೀಕರಿಸುತ್ತಿದ್ದ ಬಗ್ಗೆ ಎನ್​ಐಎಗೆ ಸಿಕ್ತು ಮಹತ್ವದ ದಾಖಲೆಗಳು
ಸಚಿನ್ ವಾಜೆ
TV9 Web
| Edited By: |

Updated on:Apr 05, 2022 | 12:49 PM

Share

ದೆಹಲಿ: ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಹಾಗೂ ಉದ್ಯಮಿ ಮನ್​ಸುಖ್ ಹಿರೇನ್ ಪ್ರಕರಣಕ್ಕೆ ಸಂಬಂಧಿಸಿ ಅಚ್ಚರಿಯ ಬೆಳವಣಿಗೆಗಳು ಘಟಿಸಿದ್ದವು. ಶಿವಸೇನೆ-ಎನ್​ಸಿಪಿ-ಬಿಜೆಪಿ, ಪೊಲೀಸ್ ಅಧಿಕಾರಿಗಳಾದ ಸಚಿನ್ ವಾಜೆ, ಪರಮ್​ವೀರ್ ಸಿಂಗ್ ಮುಂತಾದವರ ಹಿಂದಿನ ಘಟನೆಗಳು ಈ ಪ್ರಕರಣದ ಬೆನ್ನಲ್ಲಿ ಹಂತಹಂತವಾಗಿ ಪದರ ಕಳಚಿಕೊಳ್ಳುವಂತಾಗಿತ್ತು. ಈ ಕೇಸ್​ಗೆ ಸಂಬಂಧಿಸಿ ಹೊಸ ತನಿಖಾ ಮಾಹಿತಿಯೊಂದು ಇದೀಗ ಬಹಿರಂಗವಾಗಿದೆ.

ಸದ್ಯ ಗೃಹ ರಕ್ಷಕ ದಳದ ಪೊಲೀಸ್ ಅಧಿಕಾರಿ ಆಗಿರುವ ಹಾಗೂ ಈ ಹಿಂದೆ ಮುಂಬೈ ಪೊಲೀಸ್ ಅಧಿಕಾರಿಯಾಗಿದ್ದ ಪರಮ್​ವೀರ್ ಸಿಂಗ್, ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ತಿಂಗಳಿಗೆ ಮುಂಬೈ ನಗರದ ಬಾರ್, ಪಬ್​ಗಳಿಂದ 100 ಕೋಟಿ ಲಂಚ ಸಂಗ್ರಹಿಸುವಂತೆ ಈಗ ಅಮಾನತು ಆಗಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆಗೆ ಗುರಿ ನೀಡಿದ್ದರು ಎಂದು ಆರೋಪಿಸಿದ್ದರು.

ರಾಷ್ಟ್ರೀಯ ತನಿಖಾ ದಳ (ಎನ್​ಐಎ) ಅಧಿಕಾರಿಗಳು ಹೇಳುವಂತೆ, ಹಣ ಪಾವತಿಯ ದಾಖಲೆಗಳು ಲಂಚದ ಹಣ ಆಗಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಗುರುವಾರ ದಕ್ಷಿಣ ಮುಂಬೈನ ಗಿರ್​ಗಾಂವ್​ನ ಕ್ಲಬ್ ಒಂದಕ್ಕೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದ ಎನ್​ಐಎ ಈ ಮಾಹಿತಿ ಬಹಿರಂಗಪಡಿಸಿದೆ.

ಕ್ಲಬ್​ನಿಂದ ಎನ್​ಐಎ ವಶಪಡಿಸಿಕೊಂಡಿರುವ ದಾಖಲೆಯು, ಕಚೇರಿಯ ಹೆಸರು ಹಾಗೂ ಸಿಬ್ಬಂದಿಯ ಹೆಸರು ಮತ್ತು ಸ್ಥಾನವನ್ನು ಹಾಗೂ ಅವರ ಹೆಸರಿನ ಬಳಿ ಪಡೆದ ಹಣದ ವಿವರಗಳನ್ನು ತೋರಿಸುತ್ತದೆ ಎಂದು ತಿಳಿದುಬಂದಿದೆ. ಇದೇ ದಾಖಲೆಯು ಪ್ರತಿ ತಿಂಗಳುಗಳಲ್ಲಿ ಕಂಡುಬಂದಿರುವುದರಿಂದ ಅದು ಲಂಚದ ಮೊತ್ತವಾಗಿರಬಹುದು ಎಂದು ತನಿಖಾ ತಂಡ ಅಂದಾಜಿಸಿದೆ.

ಅಗತ್ಯವಿದ್ದರೆ, ಉನ್ನತ ತನಿಖೆಗಾಗಿ ದಾಖಲೆಗಳನ್ನು ಆದಾಯ ತೆರಿಗೆ ಅಥವಾ ಸಿಬಿಐ ಅಧಿಕಾರಿಗಳ ಬಳಿಯೂ ಹಂಚಿಕೊಳ್ಳಲಾಗುವುದು ಎಂದು ರಾಷ್ಟ್ರೀಯ ತನಿಖಾ ದಳ ತಿಳಿಸಿದೆ. ಸದ್ಯ ಸಚಿನ್ ವಾಜೆ ಅಮಾನತು ಆಗಿದ್ದು, ತನಿಖೆ ಎದುರಿಸುತ್ತಿದ್ದಾರೆ. ಜತೆಗೆ ನರೇಶ್ ಗೋರ್ ಹಾಗೂ ವಿನಾಯಕ್ ಶಿಂಧೆ ಕೂಡ ಎನ್​ಐಎ ತನಿಖೆ ಎದುರಿಸುತ್ತಿದ್ದಾರೆ.

ಇದನ್ನೂ ಓದಿ: ಸಸ್ಪೆಂಡ್ ಆಗಿರುವ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಬಳಸಿದ 8 ದುಬಾರಿ, ಐಷಾರಾಮಿ ಕಾರುಗಳು ಯಾವುವು?

ಇದನ್ನೂ ಓದಿ: ಮೀಠೀ ನದಿಗೆ ಸಚಿನ್ ವಾಜೆಯನ್ನು ಕರೆದೊಯ್ದ ಎನ್​ಐಎ: ಹಾರ್ಡ್​ಡಿಸ್ಕ್, ವಾಹನದ ನಂಬರ್​ ಪ್ಲೇಟ್ ಪತ್ತೆ

Published On - 11:23 pm, Sun, 4 April 21

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್