AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಹಲ್ಗಾಮ್ ಭಯೋತ್ಪಾದನಾ ದಾಳಿಯಲ್ಲಿ ಪಾಕಿಸ್ತಾನದ ಜೊತೆ ಕೈ ಜೋಡಿಸಿತಾ ಚೀನಾ?

ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳಿಗೆ ನೆರೆಯ ದೇಶದವರಾಗಿ ಸಂಯಮವನ್ನು ತೋರಿಸಬೇಕು ಎಂದು ಚೀನಾ ಮನವಿ ಮಾಡಿದೆ. ಭಾರತದ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ 26 ಜನರನ್ನು ಬಲಿ ತೆಗೆದುಕೊಂಡ ಭಯೋತ್ಪಾದಕ ದಾಳಿಯ ಕುರಿತಾದ ಪ್ರಶ್ನೆಗೆ ಚೀನಾ ಈ ಪ್ರತಿಕ್ರಿಯೆ ನೀಡಿದೆ. ಪಹಲ್ಗಾಮ್ ದಾಳಿಯ ಬಗ್ಗೆ ಪಾಕಿಸ್ತಾನದ ನಿಲುವನ್ನು ಚೀನಾ ಅನುಮೋದಿಸಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರ ಹೇಳಿಕೆಯ ನಂತರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ತಟಸ್ಥ, ಪಾರದರ್ಶಕ ತನಿಖೆ ನಡೆಸುವ ಪಾಕಿಸ್ತಾನದ ಹೇಳಿಕೆಯನ್ನು ಚೀನಾ ಬೆಂಬಲಿಸಿದೆ.

ಪಹಲ್ಗಾಮ್ ಭಯೋತ್ಪಾದನಾ ದಾಳಿಯಲ್ಲಿ ಪಾಕಿಸ್ತಾನದ ಜೊತೆ ಕೈ ಜೋಡಿಸಿತಾ ಚೀನಾ?
Nia
ಹರೀಶ್ ಜಿ.ಆರ್​. ನವದೆಹಲಿ
| Updated By: ಸುಷ್ಮಾ ಚಕ್ರೆ|

Updated on:Apr 28, 2025 | 3:39 PM

Share

ನವದೆಹಲಿ, ಏಪ್ರಿಲ್ 28: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ (Pahalgam Terror Attack) ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ತಂಡ ತನಿಖೆ ನಡೆಸುತ್ತಿದೆ. ಈ ತನಿಖೆಯಿಂದ ಪಾಕ್​ ಉಗ್ರರ ಕುರಿತಾದ 4 ಪ್ರಮುಖ ಅಂಶಗಳು ಪತ್ತೆಯಾಗಿವೆ. ಭಯೋತ್ಪಾದನಾ ದಾಳಿಗೂ 5 ದಿನಗಳ ಮೊದಲು ಚೀನಾದ ಡ್ರೋನ್​ಗಳ ಬಳಕೆಯಾಗಿತ್ತು ಎಂಬ ವಿಷಯ ಬೆಳಕಿಗೆ ಬಂದಿದೆ. ಬೈಸರನ್ ಕಣಿವೆಯಲ್ಲಿ ಚೀನಾ ನಿರ್ಮಿತ DJI ಡ್ರೋನ್‌ ಹಾರಾಟ ನಡೆಸಿತ್ತು. ಡ್ರೋನ್​ ಮೂಲಕ ಜನಸಂದಣಿಯ ಮಾಹಿತಿ ಸಂಗ್ರಹಿಸಿರುವ ಶಂಕೆ ವ್ಯಕ್ತವಾಗಿದೆ. ಡ್ರೋನ್​​ ಮೂಲಕ ಶಸ್ತ್ರಾಸ್ತ್ರ, ಸರಕುಗಳನ್ನು ಕಾಶ್ಮೀರ ಕಣಿವೆಗೆ ರವಾನೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಡ್ರೋನ್ ಬಳಸಿರುವ ಕುರಿತು ರೆಡಿಯೋ ಸಿಗ್ನಲ್​​​ಗಳು ಪತ್ತೆಯಾಗಿದೆ. ಪಹಲ್ಗಾಮ್​​​​​​ನಲ್ಲಿ ರೇಡಿಯೋ ಸಿಗ್ನಲ್​​ ಬಳಸಿರುವುದು ಪತ್ತೆಯಾಗಿದೆ. ರೇಡಿಯೋ ಸಿಗ್ನಲ್​ ಸಂಚಾರ ಪತ್ತೆಗೆ ಇಸ್ರೋ ಮೂಲಕ ತನಿಖೆ ನಡೆಸಲಾಗುತ್ತಿದೆ. ಸ್ಥಳೀಯರನ್ನು ಬಳಸಿಕೊಂಡು ಉಗ್ರರು ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಉಗ್ರರ ದಾಳಿಗೂ ಮುನ್ನ ಬೈಸರನ್​ ಪ್ರದೇಶ ಪರಿಶೀಲಿಸಿರುವ ಉಗ್ರರು ಪರಿಶೀಲನೆಗಾಗಿ ಕುದುರೆ ಸವಾರರಿಗೆ ಹಣ ಪಾವತಿಸಿರುವ ಶಂಕೆ ವ್ಯಕ್ತವಾಗಿದೆ. ಪ್ರವಾಸಿಗರೊಂದಿಗೆ ಬೆರೆಯಲು ಸ್ಥಳೀಯ ವೇಷಭೂಷಣ ಮತ್ತು ಗುರುತಿನ ಚೀಟಿಗಳನ್ನು ಉಗ್ರರು ಬಳಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಪಾಕಿಸ್ತಾನಕ್ಕೆ ಕಳಿಸುವ ಬದಲು ಭಾರತದಲ್ಲೇ ಗುಂಡಿಕ್ಕಿ ಸಾಯಿಸಿಬಿಡಿ: ಭಾರತದಲ್ಲಿರುವ ಪಾಕಿಸ್ತಾನೀ ಹಿಂದೂಗಳು

ಇದನ್ನೂ ಓದಿ
Image
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
Image
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
Image
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು
Image
ಮದುವೆ ಮನೆಗಳಲ್ಲಿ ಇನ್ಮುಂದೆ ನೀರಿನ ಪ್ಲಾಸ್ಟಿಕ್ ಬಾಟಲಿ ಬಳಕೆ ಮಾಡುವಂತಿಲ್ಲ

ಪ್ರವಾಸಿಗರ ಮೇಲೆ ದಾಳಿ ನಡೆಸಿ ಬೈಸರನ್​ನಿಂದ ನಾಗ್ಬಾಲ್​​​ ಅರಣ್ಯ ಪ್ರದೇಶದ ಕಡೆ ಪರಾರಿಯಾಗಿರುವ ಉಗ್ರರು ದಾಳಿ ಬಳಿಕ ನಾಗ್ಬಾಲ್​, ಖಿರಾಮ್​​, ಶ್ರೀಶೈಲಂ, ಪುಲ್ವಾಮಾ ಅಥವಾ ಅನಂತನಾಗ್​​ಗೆ ತೆರಳುವ ಚಾರಣ ಮಾರ್ಗದ ಮೂಲಕ ಪರಾರಿಯಾಗಿರುವ ಅನುಮಾನ ವ್ಯಕ್ತವಾಗಿದೆ.

ಈ ನಡುವೆ, ಬೇರೆ ದೇಶಗಳು ಪಹಲ್ಗಾಮ್ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ್ದರೂ ಚೀನಾ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ಸಂಯಮದಿಂದ ವರ್ತಿಸುವಂತೆ ಚೀನಾ ಮನವಿ ಮಾಡಿತ್ತು.

ಇದನ್ನೂ ಓದಿ: ಪಹಲ್ಗಾಮ್ ದಾಳಿ ಕುರಿತು ಅಪಹಾಸ್ಯ, ಭಾರತದಲ್ಲಿ ನೂರಾರು ಪಾಕಿಸ್ತಾನಿ ಯೂಟ್ಯೂಬ್​ ಚಾನೆಲ್​ಗಳಿಗೆ ನಿಷೇಧ

ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವಹಿಸಿಕೊಂಡಿದ್ದು, ದಾಳಿ ನಡೆದ ದಿನ ಅದೇ ಪ್ರದೇಶದಲ್ಲಿ ಹುವಾವೇ ಉಪಗ್ರಹ ಫೋನ್‌ನ ಚಲನೆಯನ್ನು ತನಿಖೆ ಮಾಡುತ್ತಿದೆ. ಚೀನಾದ ಕಂಪನಿಯಾದ ಹುವಾವೇ ಭಾರತದಲ್ಲಿ ನಿಷೇಧಿಸಲ್ಪಟ್ಟಿದೆ ಮತ್ತು ಅಧಿಕಾರಿಗಳು ಉಪಗ್ರಹ ಫೋನ್‌ಗಳನ್ನು ಪಾಕಿಸ್ತಾನದಿಂದ ದೇಶಕ್ಕೆ ಕಳ್ಳಸಾಗಣೆ ಮಾಡಲಾಗಿದೆ ಎಂದು ಶಂಕಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:38 pm, Mon, 28 April 25

‘ಎಕ್ಕ’ ಸಿನಿಮಾಗೆ ಭರ್ಜರಿ ಓಪನಿಂಗ್; ಯುವ ರಾಜ್​ಕುಮಾರ್ ಹೇಳಿದ್ದೇನು?
‘ಎಕ್ಕ’ ಸಿನಿಮಾಗೆ ಭರ್ಜರಿ ಓಪನಿಂಗ್; ಯುವ ರಾಜ್​ಕುಮಾರ್ ಹೇಳಿದ್ದೇನು?
ಪ್ರವಾಹದಲ್ಲಿ ಸಿಲುಕಿದ ಶಾಲಾ ವಾಹನ; ಮರ ಹತ್ತಿ ಅಳುತ್ತಿರುವ ಮಕ್ಕಳು
ಪ್ರವಾಹದಲ್ಲಿ ಸಿಲುಕಿದ ಶಾಲಾ ವಾಹನ; ಮರ ಹತ್ತಿ ಅಳುತ್ತಿರುವ ಮಕ್ಕಳು
7000 ಕೋಟಿ ಒಡೆಯ KGF ಬಾಬು ಬಳಿ ಯಾವೆಲ್ಲಾ ಕಾರುಗಳಿವೆ ನೋಡಿ
7000 ಕೋಟಿ ಒಡೆಯ KGF ಬಾಬು ಬಳಿ ಯಾವೆಲ್ಲಾ ಕಾರುಗಳಿವೆ ನೋಡಿ
ಕೇವಲ 3000 ರೂ.ನಿಂದ 7000 ಕೋಟಿ ದುಡಿದ ಬಾಬು ಪ್ಯಾಲೇಸ್ ಹೇಗಿದೆ ನೋಡಿ
ಕೇವಲ 3000 ರೂ.ನಿಂದ 7000 ಕೋಟಿ ದುಡಿದ ಬಾಬು ಪ್ಯಾಲೇಸ್ ಹೇಗಿದೆ ನೋಡಿ
ಮೊದಲ ಹೆಂಡತಿ ನನ್ನ ವಿರುದ್ಧ ಕೌಟುಂಬಿಕ ಹಿಂಸೆ ಕೇಸ್ ಹಾಕಿದ್ದಳು: ಬಾಬು
ಮೊದಲ ಹೆಂಡತಿ ನನ್ನ ವಿರುದ್ಧ ಕೌಟುಂಬಿಕ ಹಿಂಸೆ ಕೇಸ್ ಹಾಕಿದ್ದಳು: ಬಾಬು
ಮಾಧ್ಯಮಗಳ ಪ್ರಶ್ನೆಗೆ ಕಾಲವೇ ಉತ್ತರ ನೀಡಲಿದೆ: ವಿ ಸೋಮಣ್ಣ
ಮಾಧ್ಯಮಗಳ ಪ್ರಶ್ನೆಗೆ ಕಾಲವೇ ಉತ್ತರ ನೀಡಲಿದೆ: ವಿ ಸೋಮಣ್ಣ
‘ಎಕ್ಕ’ ಚಿತ್ರ ನೋಡಿದ ವಿನಯ್ ರಾಜ್​ಕುಮಾರ್​; ತಮ್ಮನ ಸಿನಿಮಾ ಇಷ್ಟ ಆಯ್ತಾ?
‘ಎಕ್ಕ’ ಚಿತ್ರ ನೋಡಿದ ವಿನಯ್ ರಾಜ್​ಕುಮಾರ್​; ತಮ್ಮನ ಸಿನಿಮಾ ಇಷ್ಟ ಆಯ್ತಾ?
‘ಜೂನಿಯರ್’ ಸಿನಿಮಾ ನೋಡಿದ ಪ್ರೇಕ್ಷಕರು ಹೇಳಿದ್ದೇನು?
‘ಜೂನಿಯರ್’ ಸಿನಿಮಾ ನೋಡಿದ ಪ್ರೇಕ್ಷಕರು ಹೇಳಿದ್ದೇನು?
ಬದುಕು ಇಲ್ಲವಾಗಿಸಿಕೊಳ್ಳುವುದನ್ನು ಬಿಟ್ಟರೆ ದಾರಿಯಿಲ್ಲ: ಹೂವಿನ ವ್ಯಾಪಾರಿ
ಬದುಕು ಇಲ್ಲವಾಗಿಸಿಕೊಳ್ಳುವುದನ್ನು ಬಿಟ್ಟರೆ ದಾರಿಯಿಲ್ಲ: ಹೂವಿನ ವ್ಯಾಪಾರಿ
ಕಾವಿ-ಖಾದಿ ನಡುವಿನ ಸೂಕ್ಷ್ಮತೆ ಸೂಚ್ಯವಾಗಿ ತೋರಿಸಿದ ಸುತ್ತೂರು ಶ್ರೀಗಳು
ಕಾವಿ-ಖಾದಿ ನಡುವಿನ ಸೂಕ್ಷ್ಮತೆ ಸೂಚ್ಯವಾಗಿ ತೋರಿಸಿದ ಸುತ್ತೂರು ಶ್ರೀಗಳು