ಪಿಎಫ್‌ಐ ವಿರುದ್ಧ ಕ್ರಮ: ಉತ್ತರ ಪ್ರದೇಶ, ದೆಹಲಿ, ಮಹಾರಾಷ್ಟ್ರ ಸೇರಿದಂತೆ ಹಲವು ಸ್ಥಳಗಳಲ್ಲಿ ಎನ್​ಐಎ ದಾಳಿ

ಮಹಾರಾಷ್ಟ್ರ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ದೆಹಲಿ ಸೇರಿದಂತೆ ವಿವಿಧ ರಾಜ್ಯಗಳ ಹಲವು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಬುಧವಾರ ಬೆಳಗ್ಗೆ ಹಠಾತ್ ದಾಳಿ ನಡೆಸಿದೆ. ನಿಷೇಧಿತ ಸಂಘಟನೆ ಪಿಎಫ್‌ಐ ವಿರುದ್ಧ ಕ್ರಮ ಕೈಗೊಳ್ಳುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದೇಶದ ಹತ್ತಾರು ಕಡೆ ದಾಳಿ ನಡೆಸಿದೆ. ಕಳೆದ ವರ್ಷ ಭಯೋತ್ಪಾದನಾ ವಿರೋಧಿ ಕಾನೂನುಬಾಹಿರ ಚಟುವಟಿಕೆಗಳ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪಿಎಫ್‌ಐ ಅನ್ನು ನಿಷೇಧಿಸಲಾಗಿತ್ತು.

ಪಿಎಫ್‌ಐ ವಿರುದ್ಧ ಕ್ರಮ: ಉತ್ತರ ಪ್ರದೇಶ, ದೆಹಲಿ, ಮಹಾರಾಷ್ಟ್ರ ಸೇರಿದಂತೆ ಹಲವು ಸ್ಥಳಗಳಲ್ಲಿ ಎನ್​ಐಎ ದಾಳಿ
ಎನ್​ಐಎ

Updated on: Oct 11, 2023 | 9:40 AM

ಮಹಾರಾಷ್ಟ್ರ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ದೆಹಲಿ ಸೇರಿದಂತೆ ವಿವಿಧ ರಾಜ್ಯಗಳ ಹಲವು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಬುಧವಾರ ಬೆಳಗ್ಗೆ ಹಠಾತ್ ದಾಳಿ ನಡೆಸಿದೆ. ನಿಷೇಧಿತ ಸಂಘಟನೆ ಪಿಎಫ್‌ಐ ವಿರುದ್ಧ ಕ್ರಮ ಕೈಗೊಳ್ಳುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದೇಶದ ಹತ್ತಾರು ಕಡೆ ದಾಳಿ ನಡೆಸಿದೆ. ಕಳೆದ ವರ್ಷ ಭಯೋತ್ಪಾದನಾ ವಿರೋಧಿ ಕಾನೂನುಬಾಹಿರ ಚಟುವಟಿಕೆಗಳ(ತಡೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪಿಎಫ್‌ಐ ಅನ್ನು ನಿಷೇಧಿಸಲಾಗಿತ್ತು.

ಪ್ರಕರಣ ಸಂಖ್ಯೆ 31/2022 ಅಡಿಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಆರೋಪಿಗಳು ಹಿಂಸಾತ್ಮಕ ಮತ್ತು ಕಾನೂನುಬಾಹಿರ ಚಟುವಟಿಕೆಗಳ ಉದ್ದೇಶಕ್ಕಾಗಿ ಪಾಟ್ನಾದ ಫುಲ್ವಾರಿ ಷರೀಫ್ ಪ್ರದೇಶದಲ್ಲಿ ಜಮಾಯಿಸಿದ್ದರು.

ಯಾವ ಸ್ಥಳಗಳಲ್ಲಿ ದಾಳಿ ನಡೆಯುತ್ತಿದೆ?
ದೆಹಲಿಯ ಹೌಜ್ ಖಾಜಿ ಪೊಲೀಸ್ ಠಾಣೆ ವ್ಯಾಪ್ತಿಯ ಬಲ್ಲಿ ಮಾರನ್, ರಾಜಸ್ಥಾನದ ಟೋಂಕ್, ತಮಿಳುನಾಡಿನ ಮಧುರೈ, ಉತ್ತರ ಪ್ರದೇಶದ ಬಾರಾಬಂಕಿ, ಲಕ್ನೋ, ಬಹ್ರೈಚ್, ಸೀತಾಪುರ್ ಮತ್ತು ಹರ್ದೋಯಿ ಸೇರಿದಂತೆ ಹಲವು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಲಕ್ನೋದ ಮಡೆಗಂಜ್‌ನ ಬಡಿ ಪಕಾರಿಯಾ ಪ್ರದೇಶದ ಮೇಲೆ ಏಜೆನ್ಸಿ ದಾಳಿ ನಡೆಸಿತು. ಮತ್ತೊಂದೆಡೆ, ಮಹಾರಾಷ್ಟ್ರದಲ್ಲಿ ಅನೇಕ ಸ್ಥಳಗಳಲ್ಲಿ NIA PFI ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿದೆ.

ಮತ್ತಷ್ಟು ಓದಿ: NIA Raid: ಕರ್ನಾಟಕ ಸೇರಿದಂತೆ 5 ರಾಜ್ಯಗಳ 14 ಕಡೆ ಏಕಕಾಲಕ್ಕೆ ಎನ್​ಐಎ ದಾಳಿ

ಇದಕ್ಕೂ ಮೊದಲು, ಎನ್‌ಐಎ ಪಿಎಫ್‌ಐ ಶಂಕಿತನನ್ನು ಭಾನುವಾರ (ಅಕ್ಟೋಬರ್ 08) ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬಂಧಿಸಿತ್ತು. ಈ ವ್ಯಕ್ತಿ ಕುವೈತ್‌ಗೆ ತೆರಳುವ ಮುನ್ನವೇ ಸಿಕ್ಕಿಬಿದ್ದಿದ್ದ.

ಮುಂಬೈನ ವಿಕ್ರೋಲಿ ಪ್ರದೇಶದಲ್ಲಿ 7/11 ರೈಲು ಸ್ಫೋಟದ ಖುಲಾಸೆಗೊಂಡ ಆರೋಪಿ ಅಬ್ದುಲ್ ವಾಹಿದ್ ಶೇಖ್ ಅವರ ನಿವಾಸದ ಮೇಲೆ ತನಿಖಾ ಸಂಸ್ಥೆ ದಾಳಿ ನಡೆಸುತ್ತಿದೆ. ಶೇಖ್ PFI ನೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಶಂಕಿಸಲಾಗಿದೆ. ಉತ್ತರ ಪ್ರದೇಶದ ಬಾರಾಬಂಕಿಯಲ್ಲೂ ಶೋಧ ನಡೆಸಲಾಗುತ್ತಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us