AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರ್ವರ್ಡ್​ ವಿಶ್ವವಿದ್ಯಾಲಯದ ಹೆಸರು ಹೇಳಿ ಪತ್ರಕರ್ತೆ ನಿಧಿ ರಜ್ದಾನ್​ಗೆ ವಂಚನೆ

ಕಳೆದ ಜೂನ್​ ತಿಂಗಳಲ್ಲಿ ನಿಧಿ ಟ್ವೀಟ್​ ಮಾಡಿ, ಸುದ್ದಿ ವಾಹಿನಿ ತೊರೆಯುತ್ತಿದ್ದೇನೆ. ಹಾರ್ವರ್ಡ್​ ವಿಶ್ವ ವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಪಕಿಯಾಗಿ ಕೆಲಸ ಸಿಕ್ಕಿದೆ ಎಂದು ಬರೆದುಕೊಂಡಿದ್ದರು. ಆದರೆ, ಇದು ಮೋಸದ ಜಾಲ ಎಂದು ಆರು ತಿಂಗಳ ನಂತರ ಗೊತ್ತಾಗಿದೆ.

ಹಾರ್ವರ್ಡ್​ ವಿಶ್ವವಿದ್ಯಾಲಯದ ಹೆಸರು ಹೇಳಿ ಪತ್ರಕರ್ತೆ ನಿಧಿ ರಜ್ದಾನ್​ಗೆ ವಂಚನೆ
ಪತ್ರಕರ್ತೆ ನಿಧಿ ರಜ್ದಾನ್​
ರಾಜೇಶ್ ದುಗ್ಗುಮನೆ
| Edited By: |

Updated on: Jan 15, 2021 | 7:58 PM

Share

ಹಿರಿಯ ಪತ್ರಕರ್ತೆ ಹಾಗೂ ನ್ಯೂಸ್​ ಆ್ಯಂಕರ್​ ನಿಧಿ ರಜ್ದಾನ್ ಫಿಶಿಂಗ್​ (phishing) ಜಾಲಕ್ಕೆ ಸಿಲುಕಿ ಮೋಸ ಹೋಗಿದ್ದಾರೆ. ಹಾರ್ವರ್ಡ್​ ವಿಶ್ವವಿದ್ಯಾಲಯದಲ್ಲಿ ಕೆಲಸ ನೀಡುವುದಾಗಿ ನಂಬಿಸಿ ನಿಧಿಗೆ ಮೋಸ ಮಾಡಲಾಗಿದೆ.

ಕಳೆದ ಜೂನ್​ ತಿಂಗಳಲ್ಲಿ ನಿಧಿ ಟ್ವೀಟ್​ ಮಾಡಿ, ಸುದ್ದಿ ವಾಹಿನಿ ತೊರೆಯುತ್ತಿದ್ದೇನೆ. ಹಾರ್ವರ್ಡ್​ ವಿಶ್ವ ವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕೆಲಸ ಸಿಕ್ಕಿದೆ ಎಂದು ಬರೆದುಕೊಂಡಿದ್ದರು. ಆದರೆ, ಇದು ಮೋಸದ ಜಾಲ ಎಂದು ಆರು ತಿಂಗಳ ನಂತರ ಗೊತ್ತಾಗಿದೆ.

ಹಾರ್ವರ್ಡ್​ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಪಾಠ ಮಾಡಲು ಅವಕಾಶ ನೀಡುತ್ತಿದ್ದೇವೆ. ನೀವು ಸಹಾಯಕ ಪ್ರಾಧ್ಯಾಪಕಿಯಾಗಿ ಸೇರ್ಪಡೆಯಾಗಿ ಎಂದು ಕಳೆದ ವರ್ಷ ನಿಧಿ ಅವರಿಗೆ ಇ-ಮೇಲ್​ ಮೂಲಕ ಕೋರಲಾಗಿತ್ತು. ಹಾರ್ವರ್ಡ್​ ವಿಶ್ವವಿದ್ಯಾಲಯದವರೇ ಇದನ್ನು ಕಳುಹಿಸಿದ್ದಾರೆ ಎಂದು ನಂಬಿದ ನಿಧಿ, ಆಫರ್​ ಒಪ್ಪಿಕೊಂಡಿದ್ದರು. ಅಲ್ಲದೆ, ಇ-ಮೇಲ್​ ಕಳುಹಿಸಿದವರ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದರು.

ಆಫರ್​ ಲೆಟರ್​ ಸಿಕ್ಕ ಬೆನ್ನಲ್ಲೇ ನಿಧಿ ತಾವು ಕೆಲಸ ಮಾಡುತ್ತಿದ್ದ ಸಂಸ್ಥೆಗೆ ರಾಜೀನಾಮೆ ನೀಡಿದ್ದರು. ಸೆಪ್ಟೆಂಬರ್​ 2020ರಂದು ಇವರಿಗೆ ಹಾರ್ವರ್ಡ್​ ವಿಶ್ವವಿದ್ಯಾಲಯಕ್ಕೆ ಜಾಯಿನ್​ ಆಗಲು ಸೂಚಿಸಲಾಗಿತ್ತು. ಆದರೆ, ಕೊರೊನಾ ಕಾರಣದಿಂದ ಹಾರ್ವರ್ಡ್​ ವಿಶ್ವವಿದ್ಯಾಲಯದ ತರಗತಿಗಳು ಜನವರಿ 2021ರವರೆಗೆ ಮುಂದೂಡಲ್ಪಟ್ಟಿವೆ ಎಂದು ನಿಧಿಗೆ ಇ-ಮೇಲ್​ ಮೂಲಕ ತಿಳಿಸಲಾಗಿತ್ತು.

ಈಗ ಮತ್ತೆ ವಿಚಾರಣೆ ಮಾಡಿದಾಗ, ತರಗತಿಗೆ ಆರಂಭ ಆಗೋದು ಕೊಂಚ ವಿಳಂಬವಾಗಬಹುದು ಎಂದು ಆ ಕಡೆಯಿಂದ ಉತ್ತರ ಬಂದಿತ್ತು. ಈ ವೇಳೆ ಅನುಮಾನಗೊಂಡ ನಿಧಿ, ನೇರವಾಗಿ ಹಾರ್ವರ್ಡ್​ ವಿಶ್ವವಿದ್ಯಾಲಯದ ಉನ್ನತ ಅಧಿಕಾರಿಗಳನ್ನು ಸಂಪರ್ಕಿಸಿದ್ದರು. ಈ ವೇಳೆ ಆ ರೀತಿಯ ಯಾವುದೇ ಆಫರ್​ ಕೊಟ್ಟಿಲ್ಲ ಎನ್ನುವ ವಿಚಾರ ಬಯಲಾಗಿದೆ. ಅಲ್ಲದೆ, ನಿಧಿ ಅವರ ಖಾಸಗಿ ಮಾಹಿತಿ ಕೂಡ ಕದ್ದಿರುವ ವಿಚಾರ ಕೂಡ ಹೊರ ಬಿದ್ದಿದೆ. ಸದ್ಯ, ನಿಧಿ ಪೊಲೀಸ್​ ಠಾಣೆಗೆ ದೂರು ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.

ಫಿಶಿಂಗ್​ ವಂಚನೆ ಕೆಲ ಕಂಪೆನಿ ಹೆಸರನ್ನು ಅಥವಾ ವ್ಯಕ್ತಿ ಬಳಕೆ ಮಾಡಿಕೊಂಡು ನಡೆಸುವ ವಂಚನೆ. ಖಾಸಗಿ ಮಾಹಿತಿ ಕದಿಯಲು ಈ ತಂತ್ರ ಬಳಕೆ ಮಾಡಲಾಗುತ್ತದೆ.

ವಿವಾದಿತ ‘ಕೊವ್ಯಾಕ್ಸಿನ್​’ ಲಸಿಕೆ ಸ್ವೀಕರಿಸಿದ ಪತ್ರಕರ್ತೆ.. ನೀವೂ ಲಸಿಕೆ ಸ್ವೀಕರಿಸಿ ಎಂದು ಜನಸಾಮಾನ್ಯರಿಗೆ ಕರೆ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ