AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರ್ವರ್ಡ್​ ವಿಶ್ವವಿದ್ಯಾಲಯದ ಹೆಸರು ಹೇಳಿ ಪತ್ರಕರ್ತೆ ನಿಧಿ ರಜ್ದಾನ್​ಗೆ ವಂಚನೆ

ಕಳೆದ ಜೂನ್​ ತಿಂಗಳಲ್ಲಿ ನಿಧಿ ಟ್ವೀಟ್​ ಮಾಡಿ, ಸುದ್ದಿ ವಾಹಿನಿ ತೊರೆಯುತ್ತಿದ್ದೇನೆ. ಹಾರ್ವರ್ಡ್​ ವಿಶ್ವ ವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಪಕಿಯಾಗಿ ಕೆಲಸ ಸಿಕ್ಕಿದೆ ಎಂದು ಬರೆದುಕೊಂಡಿದ್ದರು. ಆದರೆ, ಇದು ಮೋಸದ ಜಾಲ ಎಂದು ಆರು ತಿಂಗಳ ನಂತರ ಗೊತ್ತಾಗಿದೆ.

ಹಾರ್ವರ್ಡ್​ ವಿಶ್ವವಿದ್ಯಾಲಯದ ಹೆಸರು ಹೇಳಿ ಪತ್ರಕರ್ತೆ ನಿಧಿ ರಜ್ದಾನ್​ಗೆ ವಂಚನೆ
ಪತ್ರಕರ್ತೆ ನಿಧಿ ರಜ್ದಾನ್​
ರಾಜೇಶ್ ದುಗ್ಗುಮನೆ
| Edited By: |

Updated on: Jan 15, 2021 | 7:58 PM

Share

ಹಿರಿಯ ಪತ್ರಕರ್ತೆ ಹಾಗೂ ನ್ಯೂಸ್​ ಆ್ಯಂಕರ್​ ನಿಧಿ ರಜ್ದಾನ್ ಫಿಶಿಂಗ್​ (phishing) ಜಾಲಕ್ಕೆ ಸಿಲುಕಿ ಮೋಸ ಹೋಗಿದ್ದಾರೆ. ಹಾರ್ವರ್ಡ್​ ವಿಶ್ವವಿದ್ಯಾಲಯದಲ್ಲಿ ಕೆಲಸ ನೀಡುವುದಾಗಿ ನಂಬಿಸಿ ನಿಧಿಗೆ ಮೋಸ ಮಾಡಲಾಗಿದೆ.

ಕಳೆದ ಜೂನ್​ ತಿಂಗಳಲ್ಲಿ ನಿಧಿ ಟ್ವೀಟ್​ ಮಾಡಿ, ಸುದ್ದಿ ವಾಹಿನಿ ತೊರೆಯುತ್ತಿದ್ದೇನೆ. ಹಾರ್ವರ್ಡ್​ ವಿಶ್ವ ವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕೆಲಸ ಸಿಕ್ಕಿದೆ ಎಂದು ಬರೆದುಕೊಂಡಿದ್ದರು. ಆದರೆ, ಇದು ಮೋಸದ ಜಾಲ ಎಂದು ಆರು ತಿಂಗಳ ನಂತರ ಗೊತ್ತಾಗಿದೆ.

ಹಾರ್ವರ್ಡ್​ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಪಾಠ ಮಾಡಲು ಅವಕಾಶ ನೀಡುತ್ತಿದ್ದೇವೆ. ನೀವು ಸಹಾಯಕ ಪ್ರಾಧ್ಯಾಪಕಿಯಾಗಿ ಸೇರ್ಪಡೆಯಾಗಿ ಎಂದು ಕಳೆದ ವರ್ಷ ನಿಧಿ ಅವರಿಗೆ ಇ-ಮೇಲ್​ ಮೂಲಕ ಕೋರಲಾಗಿತ್ತು. ಹಾರ್ವರ್ಡ್​ ವಿಶ್ವವಿದ್ಯಾಲಯದವರೇ ಇದನ್ನು ಕಳುಹಿಸಿದ್ದಾರೆ ಎಂದು ನಂಬಿದ ನಿಧಿ, ಆಫರ್​ ಒಪ್ಪಿಕೊಂಡಿದ್ದರು. ಅಲ್ಲದೆ, ಇ-ಮೇಲ್​ ಕಳುಹಿಸಿದವರ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದರು.

ಆಫರ್​ ಲೆಟರ್​ ಸಿಕ್ಕ ಬೆನ್ನಲ್ಲೇ ನಿಧಿ ತಾವು ಕೆಲಸ ಮಾಡುತ್ತಿದ್ದ ಸಂಸ್ಥೆಗೆ ರಾಜೀನಾಮೆ ನೀಡಿದ್ದರು. ಸೆಪ್ಟೆಂಬರ್​ 2020ರಂದು ಇವರಿಗೆ ಹಾರ್ವರ್ಡ್​ ವಿಶ್ವವಿದ್ಯಾಲಯಕ್ಕೆ ಜಾಯಿನ್​ ಆಗಲು ಸೂಚಿಸಲಾಗಿತ್ತು. ಆದರೆ, ಕೊರೊನಾ ಕಾರಣದಿಂದ ಹಾರ್ವರ್ಡ್​ ವಿಶ್ವವಿದ್ಯಾಲಯದ ತರಗತಿಗಳು ಜನವರಿ 2021ರವರೆಗೆ ಮುಂದೂಡಲ್ಪಟ್ಟಿವೆ ಎಂದು ನಿಧಿಗೆ ಇ-ಮೇಲ್​ ಮೂಲಕ ತಿಳಿಸಲಾಗಿತ್ತು.

ಈಗ ಮತ್ತೆ ವಿಚಾರಣೆ ಮಾಡಿದಾಗ, ತರಗತಿಗೆ ಆರಂಭ ಆಗೋದು ಕೊಂಚ ವಿಳಂಬವಾಗಬಹುದು ಎಂದು ಆ ಕಡೆಯಿಂದ ಉತ್ತರ ಬಂದಿತ್ತು. ಈ ವೇಳೆ ಅನುಮಾನಗೊಂಡ ನಿಧಿ, ನೇರವಾಗಿ ಹಾರ್ವರ್ಡ್​ ವಿಶ್ವವಿದ್ಯಾಲಯದ ಉನ್ನತ ಅಧಿಕಾರಿಗಳನ್ನು ಸಂಪರ್ಕಿಸಿದ್ದರು. ಈ ವೇಳೆ ಆ ರೀತಿಯ ಯಾವುದೇ ಆಫರ್​ ಕೊಟ್ಟಿಲ್ಲ ಎನ್ನುವ ವಿಚಾರ ಬಯಲಾಗಿದೆ. ಅಲ್ಲದೆ, ನಿಧಿ ಅವರ ಖಾಸಗಿ ಮಾಹಿತಿ ಕೂಡ ಕದ್ದಿರುವ ವಿಚಾರ ಕೂಡ ಹೊರ ಬಿದ್ದಿದೆ. ಸದ್ಯ, ನಿಧಿ ಪೊಲೀಸ್​ ಠಾಣೆಗೆ ದೂರು ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.

ಫಿಶಿಂಗ್​ ವಂಚನೆ ಕೆಲ ಕಂಪೆನಿ ಹೆಸರನ್ನು ಅಥವಾ ವ್ಯಕ್ತಿ ಬಳಕೆ ಮಾಡಿಕೊಂಡು ನಡೆಸುವ ವಂಚನೆ. ಖಾಸಗಿ ಮಾಹಿತಿ ಕದಿಯಲು ಈ ತಂತ್ರ ಬಳಕೆ ಮಾಡಲಾಗುತ್ತದೆ.

ವಿವಾದಿತ ‘ಕೊವ್ಯಾಕ್ಸಿನ್​’ ಲಸಿಕೆ ಸ್ವೀಕರಿಸಿದ ಪತ್ರಕರ್ತೆ.. ನೀವೂ ಲಸಿಕೆ ಸ್ವೀಕರಿಸಿ ಎಂದು ಜನಸಾಮಾನ್ಯರಿಗೆ ಕರೆ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ