AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವದೆಹಲಿ: ನೈಜೀರಿಯಾ ಮೂಲದ ವ್ಯಕ್ತಿಗೆ ಮಂಕಿಪಾಕ್ಸ್ ದೃಢ; ದೇಶದಲ್ಲಿ 6ನೇ ಪ್ರಕರಣ

ದೆಹಲಿಯಲ್ಲಿ ವಾಸಿಸುತ್ತಿರುವ 35 ವರ್ಷದ ನೈಜೀರಿಯಾದ ವ್ಯಕ್ತಿಗೆ ಮಂಕಿಫಾಕ್ಸ್​ ದೃಡಪಟ್ಟಿದೆ.

ನವದೆಹಲಿ: ನೈಜೀರಿಯಾ ಮೂಲದ ವ್ಯಕ್ತಿಗೆ ಮಂಕಿಪಾಕ್ಸ್ ದೃಢ; ದೇಶದಲ್ಲಿ 6ನೇ ಪ್ರಕರಣ
ಮಂಕಿಪಾಕ್ಸ್
TV9 Web
| Edited By: |

Updated on:Aug 01, 2022 | 9:24 PM

Share

ನವದೆಹಲಿ: ದೆಹಲಿಯಲ್ಲಿ ವಾಸಿಸುತ್ತಿರುವ 35 ವರ್ಷದ ನೈಜೀರಿಯಾದ ವ್ಯಕ್ತಿಗೆ ಮಂಕಿಪಾಕ್ಸ್​ ದೃಢಪಟ್ಟಿದೆ. ಈ ಮೂಲಕ ದೆಹಲಿಯ 2 ನೇ ಪ್ರಕರಣವಾಗಿದ್ದು, ದೇಶದ 6 ನೇ ಪ್ರಕರಣವಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ

ಭಾರತದಲ್ಲಿ ಮಂಕಿಪಾಕ್ಸ್‌ ಮೊದಲ ಬಲಿ

ಭಾರತದಲ್ಲಿ ಮಂಕಿಪಾಕ್ಸ್‌(Monkeypox) ಸೋಂಕಿಗೆ ಮೊದಲ ಬಲಿಯಾಗಿದೆ. ದುಬೈನಿಂದ ಕೇರಳಕ್ಕೆ ವಾಪಸಾಗಿದ್ದ 22 ವರ್ಷದ ಯುವಕ ಶನಿವಾರ (ಜುಲೈ 30) ಮೃತಪಟ್ಟಿದ್ದರು. ಮೃತನ ಸ್ಯಾಂಪಲ್ಸ್‌ ಟೆಸ್ಟ್‌ನಲ್ಲಿ ಮಂಕಿಪಾಕ್ಸ್‌ ಸೋಂಕು ಇದ್ದದ್ದು ದೃಢವಾಗಿದೆ. ಹೀಗಾಗಿ ಯುವಕ ಮಂಕಿಪಾಕ್ಸ್‌ ಸೋಂಕಿನಿಂದಲೇ ಮೃತಪಟ್ಟಿದ್ದಾನೆಂದು ಕೇರಳದ ಆರೋಗ್ಯ ಸಚಿವರು ಸ್ಪಷ್ಟಪಡಿಸಿದ್ದಾರೆ.

ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಶನಿವಾರ 22 ವರ್ಷದ ಯುವಕ ಮೃತಪಟ್ಟಿದ್ದು ಆತನಿಗೆ ಮಂಕಿಪಾಕ್ಸ್‌ ಸೋಂಕು ಇದದ್ದು ಪತ್ತೆಯಾಗಿದೆ ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ಇದು ಕೇರಳದಲ್ಲಿ ವರದಿಯಾದ ಮೊದಲ ಮಂಕಿಪಾಕ್ಸ್‌ ಸಾವು. ಈ ಹಿಂದೆ ದೇಶದ ಮೊದಲ ಮೂರು ಮಂಕಿಪಾಕ್ಸ್ ಪ್ರಕರಣಗಳು ಕೇರಳದಲ್ಲಿ ವರದಿಯಾಗಿದ್ದವು. ಎಲ್ಲರೂ ಯುಎಇಯಿಂದ ಬಂದವರು. ನಂತರ ದೆಹಲಿಯಲ್ಲಿ ಮತ್ತೊಂದು ಪ್ರಕರಣ ಪತ್ತೆಯಾಗಿತ್ತು. ಮೃತ ಯುವಕ ತ್ರಿಶೂರ್ ಜಿಲ್ಲೆಯ ಚಾವಕ್ಕಾಡ್ ಮೂಲದವರಾಗಿದ್ದು, ಜುಲೈ 21 ರಂದು ಯುಎಇಯಿಂದ ಹಿಂದಿರುಗಿದ್ದರು. ಜುಲೈ 27 ರಂದು ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ಸೇರಿದ ಕೇವಲ 3 ದಿನಗಳ ನಂತರ ನಿಧನರಾಗಿದ್ದಾರೆ. ಅವರ ಮಾದರಿಗಳನ್ನು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯಲ್ಲಿ ಪರೀಕ್ಷೆಗೆ ಕಳುಹಿಸಲಾಗಿದೆ ಮತ್ತು ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ.

ಭಾರತಕ್ಕೆ ಹೊರಡುವ ಒಂದು ದಿನದ ಮೊದಲು ಯುಎಇಯಲ್ಲಿ ನಡೆಸಿದ ಪರೀಕ್ಷೆಯಲ್ಲಿ ಯುವಕನಿಗೆ ಮಂಕಿಪಾಕ್ಸ್ ಸೋಂಕು ತಗುಲಿರುವುದು ಕಂಡುಬಂದಿದೆ ಎಂದು ಶನಿವಾರವಷ್ಟೇ ಅವರ ಸಂಬಂಧಿಕರು ಆಸ್ಪತ್ರೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎಂದು ಆರೋಗ್ಯ ಸಚಿವರು ತಿಳಿಸಿದರು. ಹಾಗೂ ಇದೇ ವೇಳೆ ಮೃತ ಯುವಕ ಇತರ ಕೆಲವು ಕಾಯಿಲೆಗಳಿಂದ ಬಳಲುತ್ತಿದ್ದರು ಎಂಬ ಶಂಕೆ ಇದೆ. ಯುವಕನ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆಯನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದರು. ಮೃತ ಯುವಕನ ನಿಕಟ ಸಂಪರ್ಕದಲ್ಲಿದ್ದವರು ಹಾಗೂ ಯುವಕನ ಕುಟುಂಬ ಸದಸ್ಯರ ಮೇಲೆ ನಿಗಾ ಇಡಲಾಗಿದೆ.

Published On - 9:17 pm, Mon, 1 August 22

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ