AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಿಎಂ ಅಖಿಲೇಶ್ ಯಾದವ್​ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ: ಲೋಕಸಭೆ ಚುನಾವಣೆ ಬಗ್ಗೆ ಸುದೀರ್ಘ ಚರ್ಚೆ

ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರನ್ನು ಜೆಡಿಎಸ್​ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಗುರುವಾರ ಭೇಟಿ ಮಾಡಿದ್ದು, ಲೋಕಸಭೆ ಚುನಾವಣೆ ಸೇರಿದಂತೆ ರಾಜ್ಯ, ರಾಷ್ಟ್ರ ರಾಜಕೀಯದ ಬಗ್ಗೆ ಸುದೀರ್ಘ ಸಮಾಲೋಚನೆ ಮಾಡಿದ್ದಾರೆ.

ಮಾಜಿ ಸಿಎಂ ಅಖಿಲೇಶ್ ಯಾದವ್​ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ: ಲೋಕಸಭೆ ಚುನಾವಣೆ ಬಗ್ಗೆ ಸುದೀರ್ಘ ಚರ್ಚೆ
ಅಖಿಲೇಶ್ ಯಾದವ್, ನಿಖಿಲ್ ಕುಮಾರಸ್ವಾಮಿ
ಗಂಗಾಧರ​ ಬ. ಸಾಬೋಜಿ
|

Updated on: Jun 15, 2023 | 8:22 PM

Share

ಲಖನೌ: ಜಾತ್ಯತೀತ ಜನತಾದಳ ರಾಜ್ಯ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ಇಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ನಾಯಕ ಅಖಿಲೇಶ್ ಯಾದವ್ (Akhilesh Yadav) ಅವರನ್ನು ಲಖನೌದ ಅವರ ನಿವಾಸದಲ್ಲಿ ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದರು. ಭೇಟಿ ಬಳಿಕ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಅತ್ಯಂತ ವಿಶ್ವಾಸಪೂರ್ವಕ ಹಾಗೂ ಸಹೋದರ ವಾತ್ಸಲ್ಯದೊಂದಿಗೆ ನಡೆದ ಈ ಭೇಟಿಯ ಸಂದರ್ಭದಲ್ಲಿ ಲೋಕಸಭೆ ಚುನಾವಣೆಯೂ ಸೇರಿದಂತೆ ಭವಿಷ್ಯದ ರಾಜಕೀಯ ಬೆಳವಣಿಗೆಗಳ ಕುರಿತಂತೆ ಮಹತ್ವದ ಸಮಾಲೋಚನೆ ನಡೆಸಲಾಯಿತು ಎಂದು ಹೇಳಿದರು.

ಸಮಾಜವಾದಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಹಾಗೂ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರ ಕುಟುಂಬ ವಿಶೇಷ ಬಾಂಧವ್ಯ ಹೊಂದಿದ್ದಾರೆ. ಈ ಬಗ್ಗೆ ವಿಶೇಷವಾಗಿ ತಮ್ಮ ನೆನಪುಗಳನ್ನು ಅಖಿಲೇಶ್ ಯಾದವ್ ಅವರು ಮೆಲುಕು ಹಾಕಿದರು ಎಂದರು. ಬಹುಮುಖ್ಯವಾಗಿ ಹೆಚ್.ಡಿ.ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಕ್ಷೇಮವನ್ನು ವಿಚಾರಿಸಿದರು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Cyclone Biparjoy: ಗುಜರಾತ್ ಕರಾವಳಿಗೆ ಅಪ್ಪಳಿಸಿದ ಬಿಪೋರ್​​ಜಾಯ್ ಚಂಡಮಾರುತ; ಜೋರು ಗಾಳಿ ಮಳೆ, ಅಬ್ಬರಿಸಿದ ಕಡಲು

ಕರ್ನಾಟಕ ವಿಧಾನಸಭೆ ಚುನಾವಣೆ ಹಾಗೂ ರಾಷ್ಟ್ರ ಮಟ್ಟದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಾಕಷ್ಟು ವಿಷಯಗಳನ್ನು ಅಖಿಲೇಶ್ ಅವರು ಚರ್ಚೆ ಮಾಡಿದ್ದು, ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳನ್ನು ಅವರು ಹಂಚಿಕೊಂಡಿದ್ದಾರೆ ಎಂದು ತಿಳಿಸಿದರು.

ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ:

ಮುಂದಿನ ಲೋಕಸಭೆ ಚುನಾವಣೆಯನ್ನು ಎದುರಿಸುವ ಬಗ್ಗೆ ಅಖಿಲೇಶ್ ಅವರು ತಮ್ಮದೇ ಆದ ವಿಶೇಷ ಕಾರ್ಯಸೂಚಿ ರೂಪಿಸಿಕೊಂಡಿದ್ದಾರೆ ಹಾಗೂ ಈಗಿನಿಂದಲೇ ಚುನಾವಣೆಯ ಸಿದ್ಧತೆಗಳನ್ನು ಭರದಿಂದ ನಡೆಸಿದ್ದಾರೆ. ಜತೆಗೆ, ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಸಮೀಕರಣಗಳ ಬಗ್ಗೆ ನನ್ನ ಜೊತೆ ಕೂಲಂಕಷವಾಗಿ ಚರ್ಚಿಸಿದರು.

ಇದನ್ನೂ ಓದಿ: ಕಾಂಗ್ರೆಸ್​​​ಗೆ ಮರಳಿದ ಮಧ್ಯ ಪ್ರದೇಶದ ಬಿಜೆಪಿ ನಾಯಕ; 400 ಕಾರುಗಳೊಂದಿಗೆ ಸೈರನ್ ಮೊಳಗಿಸಿ ಗತ್ತು ಪ್ರದರ್ಶನ

ಮೂಲತಃ ಮೈಸೂರು ನಗರದಲ್ಲಿ ವಿದ್ಯಾಭ್ಯಾಸ ಮಾಡಿದ್ದ ಅಖಿಲೇಶ್ ಅವರು ಅಂದಿನ ದಿನಗಳನ್ನು ಸ್ಮರಿಸಿಕೊಂಡರು. ಕರ್ನಾಟಕ, ಕನ್ನಡಿಗರ ಬಗ್ಗೆ ತಮಗಿರುವ ಅಪಾರ ಗೌರವ, ಆದರಾಭಿಮಾನವನ್ನು ಹೃದಯಪೂರ್ವಕವಾಗಿ ವ್ಯಕ್ತಪಡಿಸಿದರು. ಅವರ ವಿಶ್ವಾಸ, ಪ್ರೀತಿಗೆ ನಾನು ಅಭಿನಂದನೆಗಳನ್ನು ಸಲ್ಲಿಸಿದ್ದೇನೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ