AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ಈ ಜಿಲ್ಲೆಯಲ್ಲಿ ದಟ್ಟ ಮಂಜು; ಜನಜೀವನದ ಮೇಲೆ ಪರಿಣಾಮ ಬೀರಿದ ‘ಅಕಾಲಿಕ’ ಚಳಿ

ಲಭ್ಯವಿರುವ ಅಧಿಕೃತ ಮಾಹಿತಿಯ ಪ್ರಕಾರ, ಉದಕಮಂಡಲದ ಕಾಂತಲ್ ಮತ್ತು ತಲೈಕುಂಠದಲ್ಲಿ ತಾಪಮಾನವು 1 ಡಿಗ್ರಿ ಸೆಲ್ಸಿಯಸ್‌ನಲ್ಲಿ ದಾಖಲಾಗಿದ್ದರೆ, ಬೊಟಾನಿಕಲ್ ಗಾರ್ಡನ್‌ನಲ್ಲಿ 2 ಡಿಗ್ರಿ ಸೆಲ್ಸಿಯಸ್‌. ಸ್ಯಾಂಡಿನಲ್ಲಾ 3 ಡಿಗ್ರಿ ಸೆಲ್ಸಿಯಸ್ ಇತ್ತು. ಈ 'ಅಕಾಲಿಕ' ಚಳಿಯ ಬಗ್ಗೆ ನಿವಾಸಿಗಳು ಮತ್ತು ಪರಿಸರ ಕಾರ್ಯಕರ್ತರು ಚಿಂತಿತರಾಗಿದ್ದಾರೆ.

ತಮಿಳುನಾಡಿನ ಈ ಜಿಲ್ಲೆಯಲ್ಲಿ ದಟ್ಟ ಮಂಜು; ಜನಜೀವನದ ಮೇಲೆ ಪರಿಣಾಮ ಬೀರಿದ 'ಅಕಾಲಿಕ' ಚಳಿ
ನೀಲಗಿರಿಯಲ್ಲಿ ದಟ್ಟ ಮಂಜುImage Credit source: NDTV
ರಶ್ಮಿ ಕಲ್ಲಕಟ್ಟ
|

Updated on: Jan 18, 2024 | 7:01 PM

Share

ನೀಲಗಿರಿ, ತಮಿಳುನಾಡು ಜನವರಿ 18: ತಮಿಳುನಾಡಿನ (Tamil Nadu) ನೀಲಗಿರಿ (Nilgiris) ಜಿಲ್ಲೆಯಲ್ಲಿ ತಾಪಮಾನ ಕುಸಿಯುತ್ತಿದ್ದು ಜನರು ಕೊರೆಯುವ ಚಳಿಯಿಂದ (Cold) ತತ್ತರಿಸುತ್ತಿದ್ದಾರೆ. ಇದು ಅಕಾಲಿಕ ಹವಾಮಾನದ ವಿದ್ಯಮಾನವಾಗಿದ್ದು, ಕೃಷಿಯ ಮೇಲೂ ಪರಿಣಾಮ ಬೀರಿದೆ. ಹಚ್ಚ ಹಸಿರಿನ ಹುಲ್ಲುಹಾಸುಗಳು ಹಿಮದಿಂದ ಆವೃತವಾಗಿವೆ. ದಟ್ಟವಾದ ಮಂಜು ಗೋಚರತೆಯ ಮೇಲೆ ಪರಿಣಾಮ ಬೀರಿದೆ. ಹೀಗೆ ಕುಸಿಯುತ್ತಿರುವ ತಾಪಮಾನದಿಂದಾಗಿ ಸ್ಥಳೀಯರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಎನ್​​​ಡಿಟಿವಿ ವರದಿ ಮಾಡಿದೆ.

ಇಂತಹ ಚಳಿ, ಶುಷ್ಕ ವಾತಾವರಣ ಅಸಾಮಾನ್ಯವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಹಲವೆಡೆ ಜನರು ಬೆಂಕಿಯ ಸುತ್ತ ಕುಳಿತು ಬೆಚ್ಚಗಾಗಲು ಪ್ರಯತ್ನಿಸುತ್ತಿರುವುದು ಕಂಡುಬಂದಿತು.

ಲಭ್ಯವಿರುವ ಅಧಿಕೃತ ಮಾಹಿತಿಯ ಪ್ರಕಾರ, ಉದಕಮಂಡಲದ ಕಾಂತಲ್ ಮತ್ತು ತಲೈಕುಂಠದಲ್ಲಿ ತಾಪಮಾನವು 1 ಡಿಗ್ರಿ ಸೆಲ್ಸಿಯಸ್‌ನಲ್ಲಿ ದಾಖಲಾಗಿದ್ದರೆ, ಬೊಟಾನಿಕಲ್ ಗಾರ್ಡನ್‌ನಲ್ಲಿ 2 ಡಿಗ್ರಿ ಸೆಲ್ಸಿಯಸ್‌. ಸ್ಯಾಂಡಿನಲ್ಲಾ 3 ಡಿಗ್ರಿ ಸೆಲ್ಸಿಯಸ್ ಇತ್ತು. ಈ ‘ಅಕಾಲಿಕ’ ಚಳಿಯ ಬಗ್ಗೆ ನಿವಾಸಿಗಳು ಮತ್ತು ಪರಿಸರ ಕಾರ್ಯಕರ್ತರು ಚಿಂತಿತರಾಗಿದ್ದಾರೆ.

ನೀಲಗಿರಿ ಎನ್ವಿರೋಮೆಂಟ್ ಸೋಶಿಯಲ್ ಟ್ರಸ್ಟ್ (NEST) ನ ವಿ ಶಿವದಾಸ್ ಅವರು ಜಾಗತಿಕ ತಾಪಮಾನ ಮತ್ತು ಎಲ್-ನಿನೊ ಪರಿಣಾಮವೇ ಈ ಬದಲಾವಣೆಗೆ ಕಾರಣವೆಂದು ನಂಬುತ್ತಾರೆ. ಚಳಿ ಆರಂಭವಾಗುವುದು ತಡವಾಗಿದ್ದು, ಇಂತಹ ಹವಾಮಾನ ಬದಲಾವಣೆ ನೀಲಗಿರಿಗೆ ದೊಡ್ಡ ಸವಾಲಾಗಿದ್ದು, ಈ ಬಗ್ಗೆ ಅಧ್ಯಯನ ನಡೆಸಬೇಕು ಎಂದರು.ಇಲ್ಲಿ ದೊಡ್ಡ ಪ್ರಮಾಣದಲ್ಲಿರುವ ಚಹಾ ತೋಟದ ಮೇಲೂ ಇದು ಪರಿಣಾಮ ಬೀರಿದೆ.

ಡಿಸೆಂಬರ್‌ನಲ್ಲಿ ಸುರಿದ ಭಾರೀ ಮಳೆ ಮತ್ತು ನಂತರದ ಶೀತದ ಅವಧಿಯು ಚಹಾ ತೋಟದ ಮೇಲೆ ಪರಿಣಾಮ ಬೀರಿದೆ ಎಂದು ಸ್ಥಳೀಯ ಚಹಾ ಕಾರ್ಮಿಕರ ಸಂಘದ ಕಾರ್ಯದರ್ಶಿ ಆರ್ ಸುಕುಮಾರನ್ ಹೇಳಿದ್ದಾರೆ.

ಇದನ್ನೂ ಓದಿ:ನಿರ್ಮಲಾ ಸೀತಾರಾಮನ್​​ರನ್ನು ವಜಾಗೊಳಿಸಿ ಎಂದು ರಾಷ್ಟ್ರಪತಿಗೆ ಪತ್ರ ಬರೆದ ತಮಿಳುನಾಡು IRS ಅಧಿಕಾರಿ

ಇದು ಮುಂಬರುವ ತಿಂಗಳುಗಳಲ್ಲಿ ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಹವಾಮಾನವು ವಿಶೇಷವಾಗಿ ಎಲೆಕೋಸುಗಳ ಮೇಲೆ ಪರಿಣಾಮ ಬೀರಿದೆ ಎಂದು ತರಕಾರಿ ಬೆಳೆಯುವ ರೈತರು ಹೇಳಿದರು. ಚಳಿಯಿಂದಾಗಿ ಬೇಗ ಕೆಲಸ ನಿಮಿತ್ತ ಮನೆಯಿಂದ ಹೊರಡುವುದು ಕಷ್ಟವಾಗುತ್ತಿದೆ ಎನ್ನುತ್ತಾರೆ ಸರ್ಕಾರಿ ನೌಕರ ಎನ್ ರವಿಚಂದ್ರನ್. ಬೆಚ್ಚಗಾಗಲು ಬೇಕಾದ ಉಡುಪನ್ನು ಧರಿಸಿದರೂ, ದ್ವಿಚಕ್ರ ವಾಹನಗಳನ್ನು ಓಡಿಸುವುದು ಇನ್ನೂ ಕಷ್ಟಕರವಾಗಿತ್ತು, ಇದು ಉಸಿರಾಟದ ತೊಂದರೆ, ತೀವ್ರ ತಲೆನೋವು ಮತ್ತು ಜ್ವರದಂತಹ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ ಅಂತಾರೆ ಅವರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು