AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ಈ ಜಿಲ್ಲೆಯಲ್ಲಿ ದಟ್ಟ ಮಂಜು; ಜನಜೀವನದ ಮೇಲೆ ಪರಿಣಾಮ ಬೀರಿದ ‘ಅಕಾಲಿಕ’ ಚಳಿ

ಲಭ್ಯವಿರುವ ಅಧಿಕೃತ ಮಾಹಿತಿಯ ಪ್ರಕಾರ, ಉದಕಮಂಡಲದ ಕಾಂತಲ್ ಮತ್ತು ತಲೈಕುಂಠದಲ್ಲಿ ತಾಪಮಾನವು 1 ಡಿಗ್ರಿ ಸೆಲ್ಸಿಯಸ್‌ನಲ್ಲಿ ದಾಖಲಾಗಿದ್ದರೆ, ಬೊಟಾನಿಕಲ್ ಗಾರ್ಡನ್‌ನಲ್ಲಿ 2 ಡಿಗ್ರಿ ಸೆಲ್ಸಿಯಸ್‌. ಸ್ಯಾಂಡಿನಲ್ಲಾ 3 ಡಿಗ್ರಿ ಸೆಲ್ಸಿಯಸ್ ಇತ್ತು. ಈ 'ಅಕಾಲಿಕ' ಚಳಿಯ ಬಗ್ಗೆ ನಿವಾಸಿಗಳು ಮತ್ತು ಪರಿಸರ ಕಾರ್ಯಕರ್ತರು ಚಿಂತಿತರಾಗಿದ್ದಾರೆ.

ತಮಿಳುನಾಡಿನ ಈ ಜಿಲ್ಲೆಯಲ್ಲಿ ದಟ್ಟ ಮಂಜು; ಜನಜೀವನದ ಮೇಲೆ ಪರಿಣಾಮ ಬೀರಿದ 'ಅಕಾಲಿಕ' ಚಳಿ
ನೀಲಗಿರಿಯಲ್ಲಿ ದಟ್ಟ ಮಂಜುImage Credit source: NDTV
ರಶ್ಮಿ ಕಲ್ಲಕಟ್ಟ
|

Updated on: Jan 18, 2024 | 7:01 PM

Share

ನೀಲಗಿರಿ, ತಮಿಳುನಾಡು ಜನವರಿ 18: ತಮಿಳುನಾಡಿನ (Tamil Nadu) ನೀಲಗಿರಿ (Nilgiris) ಜಿಲ್ಲೆಯಲ್ಲಿ ತಾಪಮಾನ ಕುಸಿಯುತ್ತಿದ್ದು ಜನರು ಕೊರೆಯುವ ಚಳಿಯಿಂದ (Cold) ತತ್ತರಿಸುತ್ತಿದ್ದಾರೆ. ಇದು ಅಕಾಲಿಕ ಹವಾಮಾನದ ವಿದ್ಯಮಾನವಾಗಿದ್ದು, ಕೃಷಿಯ ಮೇಲೂ ಪರಿಣಾಮ ಬೀರಿದೆ. ಹಚ್ಚ ಹಸಿರಿನ ಹುಲ್ಲುಹಾಸುಗಳು ಹಿಮದಿಂದ ಆವೃತವಾಗಿವೆ. ದಟ್ಟವಾದ ಮಂಜು ಗೋಚರತೆಯ ಮೇಲೆ ಪರಿಣಾಮ ಬೀರಿದೆ. ಹೀಗೆ ಕುಸಿಯುತ್ತಿರುವ ತಾಪಮಾನದಿಂದಾಗಿ ಸ್ಥಳೀಯರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಎನ್​​​ಡಿಟಿವಿ ವರದಿ ಮಾಡಿದೆ.

ಇಂತಹ ಚಳಿ, ಶುಷ್ಕ ವಾತಾವರಣ ಅಸಾಮಾನ್ಯವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಹಲವೆಡೆ ಜನರು ಬೆಂಕಿಯ ಸುತ್ತ ಕುಳಿತು ಬೆಚ್ಚಗಾಗಲು ಪ್ರಯತ್ನಿಸುತ್ತಿರುವುದು ಕಂಡುಬಂದಿತು.

ಲಭ್ಯವಿರುವ ಅಧಿಕೃತ ಮಾಹಿತಿಯ ಪ್ರಕಾರ, ಉದಕಮಂಡಲದ ಕಾಂತಲ್ ಮತ್ತು ತಲೈಕುಂಠದಲ್ಲಿ ತಾಪಮಾನವು 1 ಡಿಗ್ರಿ ಸೆಲ್ಸಿಯಸ್‌ನಲ್ಲಿ ದಾಖಲಾಗಿದ್ದರೆ, ಬೊಟಾನಿಕಲ್ ಗಾರ್ಡನ್‌ನಲ್ಲಿ 2 ಡಿಗ್ರಿ ಸೆಲ್ಸಿಯಸ್‌. ಸ್ಯಾಂಡಿನಲ್ಲಾ 3 ಡಿಗ್ರಿ ಸೆಲ್ಸಿಯಸ್ ಇತ್ತು. ಈ ‘ಅಕಾಲಿಕ’ ಚಳಿಯ ಬಗ್ಗೆ ನಿವಾಸಿಗಳು ಮತ್ತು ಪರಿಸರ ಕಾರ್ಯಕರ್ತರು ಚಿಂತಿತರಾಗಿದ್ದಾರೆ.

ನೀಲಗಿರಿ ಎನ್ವಿರೋಮೆಂಟ್ ಸೋಶಿಯಲ್ ಟ್ರಸ್ಟ್ (NEST) ನ ವಿ ಶಿವದಾಸ್ ಅವರು ಜಾಗತಿಕ ತಾಪಮಾನ ಮತ್ತು ಎಲ್-ನಿನೊ ಪರಿಣಾಮವೇ ಈ ಬದಲಾವಣೆಗೆ ಕಾರಣವೆಂದು ನಂಬುತ್ತಾರೆ. ಚಳಿ ಆರಂಭವಾಗುವುದು ತಡವಾಗಿದ್ದು, ಇಂತಹ ಹವಾಮಾನ ಬದಲಾವಣೆ ನೀಲಗಿರಿಗೆ ದೊಡ್ಡ ಸವಾಲಾಗಿದ್ದು, ಈ ಬಗ್ಗೆ ಅಧ್ಯಯನ ನಡೆಸಬೇಕು ಎಂದರು.ಇಲ್ಲಿ ದೊಡ್ಡ ಪ್ರಮಾಣದಲ್ಲಿರುವ ಚಹಾ ತೋಟದ ಮೇಲೂ ಇದು ಪರಿಣಾಮ ಬೀರಿದೆ.

ಡಿಸೆಂಬರ್‌ನಲ್ಲಿ ಸುರಿದ ಭಾರೀ ಮಳೆ ಮತ್ತು ನಂತರದ ಶೀತದ ಅವಧಿಯು ಚಹಾ ತೋಟದ ಮೇಲೆ ಪರಿಣಾಮ ಬೀರಿದೆ ಎಂದು ಸ್ಥಳೀಯ ಚಹಾ ಕಾರ್ಮಿಕರ ಸಂಘದ ಕಾರ್ಯದರ್ಶಿ ಆರ್ ಸುಕುಮಾರನ್ ಹೇಳಿದ್ದಾರೆ.

ಇದನ್ನೂ ಓದಿ:ನಿರ್ಮಲಾ ಸೀತಾರಾಮನ್​​ರನ್ನು ವಜಾಗೊಳಿಸಿ ಎಂದು ರಾಷ್ಟ್ರಪತಿಗೆ ಪತ್ರ ಬರೆದ ತಮಿಳುನಾಡು IRS ಅಧಿಕಾರಿ

ಇದು ಮುಂಬರುವ ತಿಂಗಳುಗಳಲ್ಲಿ ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಹವಾಮಾನವು ವಿಶೇಷವಾಗಿ ಎಲೆಕೋಸುಗಳ ಮೇಲೆ ಪರಿಣಾಮ ಬೀರಿದೆ ಎಂದು ತರಕಾರಿ ಬೆಳೆಯುವ ರೈತರು ಹೇಳಿದರು. ಚಳಿಯಿಂದಾಗಿ ಬೇಗ ಕೆಲಸ ನಿಮಿತ್ತ ಮನೆಯಿಂದ ಹೊರಡುವುದು ಕಷ್ಟವಾಗುತ್ತಿದೆ ಎನ್ನುತ್ತಾರೆ ಸರ್ಕಾರಿ ನೌಕರ ಎನ್ ರವಿಚಂದ್ರನ್. ಬೆಚ್ಚಗಾಗಲು ಬೇಕಾದ ಉಡುಪನ್ನು ಧರಿಸಿದರೂ, ದ್ವಿಚಕ್ರ ವಾಹನಗಳನ್ನು ಓಡಿಸುವುದು ಇನ್ನೂ ಕಷ್ಟಕರವಾಗಿತ್ತು, ಇದು ಉಸಿರಾಟದ ತೊಂದರೆ, ತೀವ್ರ ತಲೆನೋವು ಮತ್ತು ಜ್ವರದಂತಹ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ ಅಂತಾರೆ ಅವರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?