AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರ್ಕಾರ ಸಾಧ್ಯವಿರುವ ಎಲ್ಲಾ ಸಹಾಯ ಮಾಡುತ್ತಿದೆ’; ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ಬಗ್ಗೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ

ಕೇರಳದ ನರ್ಸ್ ನಿಮಿಷಾ ಪ್ರಿಯಾ 2017ರಲ್ಲಿ ತನ್ನ ಬ್ಯುಸಿನೆಸ್ ಪಾರ್ಟನರ್ ಆಗಿದ್ದ ತಲಾಲ್ ಅಬ್ದೋ ಮೆಹ್ದಿ ಅವರ ಕೊಲೆ ಆರೋಪದ ಮೇಲೆ ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದಾರೆ. ಜುಲೈ 16ರಂದೇ ಅವರು ಗಲ್ಲಿಗೇರಬೇಕಿತ್ತು. ಆದರೆ, ಭಾರತದ ಮಧ್ಯಪ್ರವೇಶದ ನಂತರ ಗಲ್ಲಿಗೇರಿಸುವ ದಿನಾಂಕವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

'ಸರ್ಕಾರ ಸಾಧ್ಯವಿರುವ ಎಲ್ಲಾ ಸಹಾಯ ಮಾಡುತ್ತಿದೆ'; ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ಬಗ್ಗೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ
Nimisha Priya
ಸುಷ್ಮಾ ಚಕ್ರೆ
|

Updated on: Jul 17, 2025 | 5:38 PM

Share

ನವದೆಹಲಿ, ಜುಲೈ 17: ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆ ಎದುರಿಸುತ್ತಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಪ್ರಕರಣದಲ್ಲಿ ( Nimisha Priya Case) ಮಧ್ಯಪ್ರವೇಶಿಸಬೇಕೆಂಬ ಒತ್ತಾಯ ಹೆಚ್ಚುತ್ತಿರುವ ನಡುವೆ ಭಾರತದ ವಿದೇಶಾಂಗ ಸಚಿವಾಲಯ (MEA) ಇಂದು ಪ್ರತಿಕ್ರಿಯಿಸಿದ್ದು, “ಕೇಂದ್ರ ಸರ್ಕಾರ ರಾಜತಾಂತ್ರಿಕ ಮಾರ್ಗಗಳನ್ನು ಸಕ್ರಿಯವಾಗಿ ಅನುಸರಿಸುತ್ತಿದೆ. ಈ ವಿಷಯವನ್ನು ಪರಿಹರಿಸಲು ಕೆಲವು ಸ್ನೇಹಪರ ಸರ್ಕಾರಗಳೊಂದಿಗೆ ಹಾಗೂ ಯೆಮೆನ್​​ನಲ್ಲಿರುವ ಸಂಘ-ಸಂಸ್ಥೆಗಳ ಜೊತೆ ಸಂಪರ್ಕದಲ್ಲಿದೆ” ಎಂದು ಹೇಳಿದೆ.

“ಇದು ಸೂಕ್ಷ್ಮ ವಿಷಯ. ಭಾರತ ಸರ್ಕಾರವು ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡುತ್ತಿದೆ. ನಾವು ಕಾನೂನು ನೆರವು ನೀಡಿದ್ದೇವೆ. ಆಕೆಯ ಕುಟುಂಬಕ್ಕೆ ಸಹಾಯ ಮಾಡಲು ವಕೀಲರನ್ನು ಸಹ ನೇಮಿಸಿದ್ದೇವೆ. ಸಮಸ್ಯೆಯನ್ನು ಪರಿಹರಿಸಲು ನಾವು ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ. ಜುಲೈ 16ರಂದು ನಿಗದಿಯಾಗಿದ್ದ ಅವರ ಮರಣದಂಡನೆಯನ್ನು ಯೆಮೆನ್ ಸರ್ಕಾರ ಮುಂದೂಡಿದೆ. ಸಮಸ್ಯೆಯನ್ನು ಪರಿಹರಿಸಲು ಸ್ಥಳೀಯ ಅಧಿಕಾರಿಗಳು ಮತ್ತು ಕುಟುಂಬ ಸದಸ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಈ ವಿಷಯದಲ್ಲಿ ಶೇಖ್ ಅಬುಬಕರ್ ಅಹ್ಮದ್ ಪಾತ್ರದ ಬಗ್ಗೆ ಹಂಚಿಕೊಳ್ಳಲು ನನಗೆ ಯಾವುದೇ ಮಾಹಿತಿ ಇಲ್ಲ” ಎಂದು ವಿದೇಶಾಂಗ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಕೇರಳದ ನರ್ಸ್​ ನಿಮಿಷಾ ಪ್ರಿಯಾಳ ಗಲ್ಲು ಶಿಕ್ಷೆ ಮುಂದೂಡಿದ ಯೆಮೆನ್

“ನಾವು ಈ ವಿಷಯವನ್ನು ಬಹಳ ಸೂಕ್ಷ್ಮವಾಗಿ ಅನುಸರಿಸುತ್ತಿದ್ದೇವೆ. ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡುತ್ತಿದ್ದೇವೆ. ನಾವು ಕೆಲವು ಸ್ನೇಹಪರ ಸರ್ಕಾರಗಳೊಂದಿಗೆ ಸಂಪರ್ಕದಲ್ಲಿದ್ದೇವೆ” ಎಂದು MEA ಹೇಳಿದೆ.

ನಿಮಿಷಾ ಪ್ರಿಯಾ ಯಾರು?: 

ಕೇರಳದ ಪಾಲಕ್ಕಾಡ್ ಜಿಲ್ಲೆಯವರಾದ ನಿಮಿಷಾ ಪ್ರಿಯಾ, 2011ರಲ್ಲಿ ತನ್ನ ನರ್ಸಿಂಗ್ ತರಬೇತಿಯನ್ನು ಪೂರ್ಣಗೊಳಿಸಿದ ನಂತರ ಯೆಮೆನ್‌ಗೆ ತೆರಳಿದರು. ಅವರು ತಮ್ಮ ದೈನಂದಿನ ಕೂಲಿ ಕಾರ್ಮಿಕರಾದ ಪೋಷಕರಿಗೆ ಆರ್ಥಿಕ ಸಹಾಯ ನೀಡಲು ಯೆಮೆನ್​ಗೆ ತೆರಳಿದ್ದರು. ಯೆಮೆನ್‌ನಲ್ಲಿ ತನ್ನ ಕ್ಲಿನಿಕ್ ಅನ್ನು ಪ್ರಾರಂಭಿಸಲು ಸಹಾಯ ಮಾಡುವುದಾಗಿ ತಲಾಲ್ 2014ರಲ್ಲಿ ಭರವಸೆ ನೀಡಿದಾಗ ಆಕೆ ತಲಾಲ್ ಅಬ್ದೋ ಮಹ್ದಿ ಅವರ ಜೊತೆ ಒಡನಾಟ ಬೆಳೆಸಿಕೊಂಡರು.

ಯೆಮೆನ್ ವ್ಯವಹಾರ ಕಾನೂನಿನ ಪ್ರಕಾರ ಅಲ್ಲಿ ಬ್ಯುಸಿನೆಸ್ ಪ್ರಾರಂಭಿಸಲು ವಿದೇಶಿಯೊಬ್ಬ ಸ್ಥಳೀಯರೊಂದಿಗೆ ಪಾಲುದಾರಿಕೆ ಮಾಡಿಕೊಳ್ಳಬೇಕಾಗುತ್ತದೆ. ಹೀಗಾಗಿ, ನಿಮಿಷಾ ತಲಾಲ್ ಜೊತೆ 2015ರಲ್ಲಿ ಸನಾದಲ್ಲಿ ತನ್ನ ಕ್ಲಿನಿಕ್ ಪ್ರಾರಂಭಿಸಿದರು. ಸ್ವಲ್ಪ ದಿನದಲ್ಲೇ ಅವರ ನಡುವೆ ಭಿನ್ನಾಭಿಪ್ರಾಯಗಳು ಹುಟ್ಟಿಕೊಂಡವು. ಆಕೆ ಯೆಮೆನ್ ಬಿಟ್ಟು ಹೋಗದಂತೆ ನೋಡಿಕೊಳ್ಳಲು ತಲಾಲ್ ನಿಮಿಷಾರ ಪಾಸ್‌ಪೋರ್ಟ್ ಅನ್ನು ಸಹ ತೆಗೆದುಕೊಂಡಿದ್ದ ಎನ್ನಲಾಗಿದೆ. ಆತನಿಂದ ನಿಮಿಷಾ ತನ್ನ ಪಾಸ್‌ಪೋರ್ಟ್ ಮರಳಿ ಪಡೆದು ಭಾರತಕ್ಕೆ ಹಿಂತಿರುಗಲು ಅವನಿಗೆ ಅಮಲಿನ ಡ್ರಗ್ ಚುಚ್ಚಿದಳು. ಆದರೆ, ಅದು ಓವರ್ ಡೋಸ್ ಆಗಿ ಆತ ಸಾವನ್ನಪ್ಪಿದನು. ಇದರಿಂದ ಆಕೆಯನ್ನು ಬಂಧಿಸಿ, ಗಲ್ಲು ಶಿಕ್ಷೆಗೆ ಗುರಿಪಡಿಸಲಾಯಿತು.

ಇದನ್ನೂ ಓದಿ:  ಬ್ಲಡ್ ಮನಿ ನಿರಾಕರಿಸಿದ ಮೃತನ ಸೋದರ; ಯೆಮೆನ್​ನಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಬಹುತೇಕ ಖಚಿತ

ಬ್ಲಡ್ ಮನಿಗೆ ನಿರಾಕರಣೆ:

ನಿಮಿಷಾಳ ಮರಣದಂಡನೆಯನ್ನು ಮುಂದೂಡಿರುವುದನ್ನು ಮೃತ ವ್ಯಕ್ತಿ ತಲಾಲ್ ಮಹ್ದಿ ಅವರ ಸಹೋದರ ಅಬ್ದೆಲ್‌ಫತ್ತಾ ಮಹ್ದಿ ಟೀಕಿಸಿದ್ದಾರೆ. ಮೃತರ ಕುಟುಂಬದಿಂದ ನಿಮಿಷಾಗೆ ಕ್ಷಮೆ ಪಡೆಯುವ ಪ್ರಯತ್ನಗಳನ್ನು ಮತ್ತು ಭಾರತ ಸರ್ಕಾರ ಸೇರಿದಂತೆ ವಿವಿಧ ಪಕ್ಷಗಳಿಂದ ಮಧ್ಯಸ್ಥಿಕೆಯ ಮಾತುಕತೆಗಳನ್ನು ಅವರು ಬಲವಾಗಿ ತಿರಸ್ಕರಿಸಿದ್ದಾರೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಅಬ್ದುಲ್‌ ಫತ್ತಾಹ್, ಇಸ್ಲಾಮಿಕ್ ಶರಿಯಾ ಕಾನೂನಿನ ಪ್ರಕಾರ ಕ್ವಿಸಾಸ್ (ಪ್ರತೀಕಾರ)ಗಾಗಿ ನಮ್ಮ ಬೇಡಿಕೆ ದೃಢವಾಗಿದೆ. ಮರಣದಂಡನೆ ಜಾರಿಯಾಗುವವರೆಗೆ ಕಾನೂನು ಕ್ರಮಗಳನ್ನು ಮುಂದುವರಿಸುತ್ತೇವೆ. ಮರಣದಂಡನೆಯನ್ನು ಮುಂದೂಡಿದ ಮಾತ್ರಕ್ಕೆ ಆಕೆ ಗಲ್ಲಿಗೇರುವುದು ತಪ್ಪುವುದಿಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ