AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ ನಿಮೋ ಮೋಡಿ; ಫಲಿತಾಂಶಕ್ಕೂ ಮೊದಲೇ ಗೆಲುವಿನ ನಗು ಬೀರಿದ ನಿತೀಶ್-ಮೋದಿ ಜೋಡಿ

ಬಿಹಾರದಲ್ಲಿ 2 ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆದಿತ್ತು. ಇಂದು (ನವೆಂಬರ್ 14) ಮತ ಎಣಿಕೆ ನಡೆಯುತ್ತಿದೆ. ಇಂದು ಸಂಜೆಯೇ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ ಬಿಜೆಪಿ-ಜೆಡಿಯು ಮೈತ್ರಿಯ ಎನ್​ಡಿಎ 200ಕ್ಕೂ ಹೆಚ್ಚು ಸ್ಥಾನಗಳ ಗಡಿ ದಾಟಿದೆ. ಕಾಂಗ್ರೆಸ್-ಆರ್​ಜೆಡಿ ಮೈತ್ರಿಯ ಮಹಾಘಟಬಂಧನಕ್ಕೆ ಭಾರೀ ಮುಖಭಂಗವಾಗಿದೆ. ಈ ಚುನಾವಣೆಯಲ್ಲಿ ಸಿಎಂ ನಿತೀಶ್ ಕುಮಾರ್- ಪಿಎಂ ನರೇಂದ್ರ ಮೋದಿ ಜೋಡಿ ಯಾವ ರೀತಿ ಕರಾಮತ್ತು ಮಾಡಿತು ಎಂಬುದರ ಹಿನ್ನೋಟ ಇಲ್ಲಿದೆ.

ಬಿಹಾರದಲ್ಲಿ ನಿಮೋ ಮೋಡಿ; ಫಲಿತಾಂಶಕ್ಕೂ ಮೊದಲೇ ಗೆಲುವಿನ ನಗು ಬೀರಿದ ನಿತೀಶ್-ಮೋದಿ ಜೋಡಿ
Nitish Kumar- Pm Modi
ಸುಷ್ಮಾ ಚಕ್ರೆ
|

Updated on: Nov 14, 2025 | 3:21 PM

Share

ನವದೆಹಲಿ, ನವೆಂಬರ್ 14: ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ-ಮುಖ್ಯಮಂತ್ರಿ ನಿತೀಶ್ ಕುಮಾರ್ ‘ಜೋಡಿ’ ಮತ್ತೆ ಕಮಾಲ್ ಮಾಡಿದೆ. ಈ ಜೋಡಿಯ ಜನಪ್ರಿಯತೆಯು ಬಿಹಾರದ ಚುನಾವಣೆಯಲ್ಲಿ (Bihar Assembly Elections) ಎನ್​ಡಿಎ ಗೆಲ್ಲಲು ಕಾರಣವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಭಾರತೀಯ ರಾಜಕೀಯದ ಇಬ್ಬರು ಪ್ರಮುಖ ನಾಯಕರು. ಈ ಬಾರಿಯ ಚುನಾವಣಾ ಪ್ರಚಾರದಲ್ಲಿ ನಿತೀಶ್ ಕುಮಾರ್- ನರೇಂದ್ರ ಮೋದಿ (PM Narendra Modi) ಒಗ್ಗಟ್ಟಾಗಿ ಭರ್ಜರಿ ಪ್ರಚಾರ ನಡೆಸಿದ್ದರು. ಮಹಾಘಟಬಂಧನ್ ಅನ್ನು ಸೋಲಿಸಲೇಬೇಕೆಂದು ಪಣ ತೊಟ್ಟಿದ್ದ ಎನ್​ಡಿಎ ಎಲ್ಲ ರೀತಿಯ ರಾಜಕೀಯ ತಂತ್ರಗಳನ್ನು ಬಳಸಿತ್ತು, ಆರ್​ಜೆಡಿಯ ಹಗರಣಗಳನ್ನು ಅಸ್ತ್ರವಾಗಿ ಬಳಸಿಕೊಂಡು ಜನರ ಮತವನ್ನು ತನ್ನತ್ತ ಸೆಳೆಯಲು ಪ್ರಯತ್ನಿಸಿತ್ತು.

2025ರ ಬಿಹಾರ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಭರ್ಜರಿ ಗೆಲುವಿನತ್ತ ಸಾಗುತ್ತಿದೆ. ಚುನಾವಣಾ ಆಯೋಗದ ಆರಂಭಿಕ ಪ್ರವೃತ್ತಿಗಳು ಮೈತ್ರಿಕೂಟವು ಒಟ್ಟು 243 ಬಿಹಾರ ವಿಧಾನಸಭಾ ಸ್ಥಾನಗಳಲ್ಲಿ 200ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಬಹುಮತದ ಗಡಿಯನ್ನು ದಾಟುತ್ತಿದೆ ಎಂದು ತೋರಿಸುತ್ತದೆ.

2025ರ ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಕ್ತಾಯದ ಹಂತಕ್ಕೆ ಬಂದಿದೆ. ಬಿಹಾರದಲ್ಲಿ NDA ಮೈತ್ರಿಕೂಟವು ಸ್ಪಷ್ಟವಾಗಿ ಮುಂಚೂಣಿಯಲ್ಲಿದೆ. ಹೀಗಾಗಿ, ಭರ್ಜರಿ ಅಂತರದಿಂದ ಎನ್​ಡಿಎ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ. NDA ಪ್ರಸ್ತುತ 200 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಸರ್ಕಾರ ರಚಿಸಲು 122 ಸ್ಥಾನಗಳ ಅಗತ್ಯವಿದೆ. ಎನ್​ಡಿಎಯ ಎರಡು ಪ್ರಮುಖ ಪ್ರತಿಸ್ಪರ್ಧಿಗಳಲ್ಲಿ, ಆರ್‌ಜೆಡಿ ಕೇವಲ 27 ಸ್ಥಾನಗಳನ್ನು ಪಡೆದಿದ್ದರೆ ಕಾಂಗ್ರೆಸ್ ಕೇವಲ 6 ಸ್ಥಾನಗಳಲ್ಲಿ ಮಾತ್ರ ಗೆದ್ದಿದೆ.

ಇದನ್ನೂ ಓದಿ: Bihar Election Results: ಬಿಹಾರದಲ್ಲಿ ಎನ್​ಡಿಎಗೆ ಬಹುಮತ ಬರುತ್ತಿದ್ದಂತೆ ಕಾಂಗ್ರೆಸ್​ನಿಂದ ಶುರುವಾಯ್ತು ‘ವೋಟ್ ಚೋರಿ’ ಪ್ರತಿಭಟನೆ

2020ರಲ್ಲಿ ಎನ್‌ಡಿಎ 125 ಸ್ಥಾನಗಳನ್ನು ಗೆದ್ದರೆ, ಮಹಾಘಟಬಂಧನ್ 110 ಸ್ಥಾನಗಳನ್ನು ಗೆದ್ದಿತ್ತು. ರಾಜ್ಯ ಮಟ್ಟದಲ್ಲಿ ನಿತೀಶ್ ಮತ್ತು ಕೇಂದ್ರದಲ್ಲಿ ಪ್ರಧಾನಿ ಮೋದಿ ಇಬ್ಬರಿಂದಲೂ ಐದು ವರ್ಷಗಳ ಕೆಲಸ ಮತ್ತು ಅಭಿವೃದ್ಧಿ ಕೆಲಸ ಮಾಡಿದೆ ಎಂದು ತೋರುತ್ತದೆ. ಪ್ರಧಾನಿ ಮೋದಿ-ಮುಖ್ಯಮಂತ್ರಿ ನಿತೀಶ್ ಕುಮಾರ್ ಜೋಡಿಯ ಡಬಲ್-ಎಂಜಿನ್ ಸರ್ಕಾರದ ಮೇಲೆ ನಂಬಿಕೆಯಿಟ್ಟ ಜನರು ಬಹುಮತ ನೀಡಿದ್ದಾರೆ.

ಬಿಹಾರದಲ್ಲಿ ‘ಸುಶಾಸನ್ ಬಾಬು’ (ಮಿಸ್ಟರ್ ಗುಡ್ ಗವರ್ನೆನ್ಸ್) ಎಂದು ಕರೆಯಲ್ಪಡುವ ನಿತೀಶ್ ಕುಮಾರ್, ಮಹಿಳೆಯರಿಗೆ ಮೀಸಲಾತಿ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಕಲ್ಯಾಣ ಯೋಜನೆಗಳ ಕಾನೂನುಗಳನ್ನು ಒಳಗೊಂಡಂತೆ ತಮ್ಮ ನೀತಿ ನಿರ್ಧಾರಗಳ ಮೂಲಕ ಬಿಹಾರ ರಾಜಕೀಯದಲ್ಲಿ ಜನಪ್ರಿಯತೆ ಗಳಿಸಿದ್ದಾರೆ. ಮೋದಿಯ ಮ್ಯಾಜಿಕ್ ಜೊತೆಗೆ ನಿತೀಶ್ ಕುಮಾರ್ ಅವರ ಕೆಲಸವೂ ಇಲ್ಲಿ ಮದಾರರನ್ನು ಸೆಳೆದಿರಲು ಮುಖ್ಯ ಕಾರಣವಾಗಿರಬಹುದು.

ಇದನ್ನೂ ಓದಿ: Bihar Election Exit Poll Results 2025: ಬಿಹಾರದಲ್ಲಿ ಮತ್ತೊಮ್ಮೆ ಎನ್​ಡಿಎಗೆ ಗೆಲುವಿನ ಮಾಲೆ; ಚುನಾವಣೋತ್ತರ ಸಮೀಕ್ಷೆಗಳ ಲೆಕ್ಕಾಚಾರ ಇಲ್ಲಿದೆ

ನಿತೀಶ್ ಕುಮಾರ್ ಅವರ ಜೆ(ಯು) ಮೇಲ್ವರ್ಗದ (ಜನಸಂಖ್ಯೆಯ 10%), ಇಬಿಸಿಗಳು (ಜನಸಂಖ್ಯೆಯ 31%), ಇತರ ಹಿಂದುಳಿದ ವರ್ಗಗಳ ಬೆಂಬಲವನ್ನು ಹೊಂದಿದೆ. ಇದರ ಜೊತೆಗೆ, ಮಹಿಳಾ ರಿಜ್‌ಗಾರ್ ಯೋಜನೆಯಂತಹ ಯೋಜನೆಗಳ ಮೂಲಕ ಮಹಿಳಾ ಮತದಾರರನ್ನು ಆಕರ್ಷಿಸಲು ನಿತೀಶ್ ಕುಮಾರ್ ಯಾವುದೇ ಅವಕಾಶವನ್ನು ಬಿಟ್ಟುಕೊಡಲಿಲ್ಲ.

ಮಹಿಳಾ ಮತದಾರರಲ್ಲಿ ನಿತೀಶ್ ಕುಮಾರ್ ಅವರ ನಿರಂತರ ಜನಪ್ರಿಯತೆಯು ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಗೆಲುವಿಗೆ ಕಾರಣವಾಯಿತು. 2025ರ ರಾಜ್ಯ ಚುನಾವಣೆಯಲ್ಲಿ ಮಹಿಳೆಯರು ಕಿಂಗ್‌ಮೇಕರ್‌ಗಳಾಗಿ ಹೊರಹೊಮ್ಮುತ್ತಾರೆ ಎಂದು ಹಲವಾರು ರಾಜಕೀಯ ವಿಶ್ಲೇಷಕರು ಹೇಳಿದ್ದರು.

2025ರ ಬಿಹಾರ ಚುನಾವಣೆಯಲ್ಲಿ NDAಯ ನಿರೀಕ್ಷೆಗಳನ್ನು ಹೆಚ್ಚಿಸಿದ ಮತ್ತೊಂದು ಅಂಶವೆಂದರೆ ದುರ್ಬಲ ವಿರೋಧ ಎಂದು ವಿಶ್ಲೇಷಕರು ಭಾವಿಸಿದ್ದಾರೆ. ಮಹಾಘಟಬಂಧನ್ ಚುನಾವಣಾ ಪ್ರಚಾರದ ವೇಳೆಯೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಆರ್​ಜೆಡಿ ನಾಯಕ ತೇಜಸ್ವಿ ಯಾದವ್ ನಡುವಿನ ಒಗ್ಗಟ್ಟು ಹೆಚ್ಚಾಗಿ ಪ್ರದರ್ಶಿತವಾಗಲಿಲ್ಲ. ಸರಿಯಾದ ವಿರೋಧ ಪಕ್ಷದ ಪ್ರಚಾರವಿಲ್ಲದಿದ್ದುದು ಕೂಡ ಎನ್​ಡಿಎ ಗೆಲುವಿಗೆ ಕಾರಣವೆನ್ನಲಾಗಿದೆ.

ಇದಲ್ಲದೆ, ಆರ್‌ಜೆಡಿ ಮತ್ತು ಮಹಾಘಟಬಂಧನ್‌ಗೆ ನಿರ್ಣಾಯಕವಾಗಿರುವ ಮುಸ್ಲಿಂ ಮತದಾರರು ಕಾಂಗ್ರೆಸ್‌ನ ಮತದಾರರ ಅಧಿಕಾರ ಯಾತ್ರೆಯಲ್ಲಿ ತಮ್ಮನ್ನು ಸೇರಿಸಿಕೊಳ್ಳದ ಕಾರಣ ಅಸಮಾಧಾನಗೊಂಡಿರಬಹುದು. ಇದಲ್ಲದೆ, ಮಹಾಘಟಬಂಧನ್‌ನ ಯಾವುದೇ ಮುಖ್ಯಮಂತ್ರಿ ಅಥವಾ ಉಪಮುಖ್ಯಮಂತ್ರಿ ಅಭ್ಯರ್ಥಿ ಮುಸ್ಲಿಮರಲ್ಲ.

ಆದರೆ, ಪ್ರಚಾರದ ಉದ್ದಕ್ಕೂ ಪ್ರಧಾನಿ ನರೇಂದ್ರ ಮೋದಿ ನಿತೀಶ್ ಕುಮಾರ್ ಪಕ್ಕದಲ್ಲಿ ದೃಢವಾಗಿ ನಿಂತರು. ಎನ್​ಡಿಎ ಮೈತ್ರಿಕೂಟವು ಕಲ್ಯಾಣ ವಿತರಣೆ, ಮೂಲಸೌಕರ್ಯ ವಿಸ್ತರಣೆ, ಸಾಮಾಜಿಕ ಯೋಜನೆಗಳು ಮತ್ತು ಆಡಳಿತಾತ್ಮಕ ಸ್ಥಿರತೆಗೆ ಒತ್ತು ನೀಡುವ ಒಗ್ಗಟ್ಟಿನ ಘೋಷಣೆಯನ್ನು ಮಾಡಿತು. ಛತ್ ಪೂಜೆಯನ್ನು ಯುನೆಸ್ಕೋದ ಅಮೂರ್ತ ಸಾಂಸ್ಕೃತಿಕ ಪರಂಪರೆಯ ವಿಭಾಗದಲ್ಲಿ ಪಟ್ಟಿ ಮಾಡಲು ಪ್ರಧಾನಿ ಮೋದಿಯವರು ಮಾಡಿದ ಒತ್ತಾಯವನ್ನು ಬಿಹಾರದ ಸಾಂಸ್ಕೃತಿಕ ಗುರುತಿನ ಬಗೆಗಿನ ತನ್ನ ಬದ್ಧತೆಯ ಪುರಾವೆಯಾಗಿ ಎನ್‌ಡಿಎ ಇರಿಸಿದೆ. ಇದು ಕೂಡ ಬಿಹಾರಿಗರ ಮನ ಸೆಳೆಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ