Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ 4 ಮಹಡಿ ಕಟ್ಟಡ ಕುಸಿತ, 11 ಜನರ ಸಾವು

ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 15 ಜನರನ್ನು ರಕ್ಷಿಸಲಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಹೆಚ್ಚಿನ ಜನರು ಸಿಲುಕಿಕೊಂಡಿರುವ ಸಾಧ್ಯತೆಯಿದೆ. ಜನರನ್ನು ರಕ್ಷಿಸಲು ತಂಡಗಳು ಸಜ್ಜಾಗಿದ್ದು ರಕ್ಷಣಾ ಕಾರ್ಯದಲ್ಲಿ ಮುಳುಗಿದ್ದಾರೆ." ಎಂದು ಜೋನ್ 11, ಮುಂಬೈನ ಉಪ ಪೊಲೀಸ್ ಆಯುಕ್ತ (ಡಿಸಿಪಿ) ವಿಶಾಲ್ ಠಾಕೂರ್ ಹೇಳಿದರು.

ಮುಂಬೈನಲ್ಲಿ 4 ಮಹಡಿ ಕಟ್ಟಡ ಕುಸಿತ, 11 ಜನರ ಸಾವು
ಮುಂಬೈನಲ್ಲಿ 4 ಮಹಡಿ ಕಟ್ಟಡ ಕುಸಿತ
Follow us
TV9 Web
| Updated By: ಆಯೇಷಾ ಬಾನು

Updated on:Jun 10, 2021 | 8:04 AM

ಮುಂಬೈ: ಪಶ್ಚಿಮ ಮುಂಬೈನ ಮಲಾಡ್‌ನಲ್ಲಿ ನ್ಯೂ ಕಲೆಕ್ಟರ್ ಕಾಂಪೌಂಡ್ನಲ್ಲಿ ಬುಧವಾರ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. 4 ಮಹಡಿ ಕಟ್ಟಡ ಕುಸಿದು ಸುಮಾರು 11 ಜನ ಮೃತಪಟ್ಟಿದ್ದಾರೆ. ಹಾಗೂ 18 ಮಂದಿಗೆ ಗಾಯಗಳಾಗಿವೆ ಎಂದು ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಶನ್ (ಬಿಎಂಸಿ) ತಿಳಿಸಿದೆ.

ಬಿಎಂಸಿಯ ಪ್ರಕಾರ, ಹತ್ತಿರದ ಕಟ್ಟದ ನಿರ್ಮಾಣ ರಚನೆಯಿಂದಾಗಿ ಈ ಕಟ್ಟಡ ಕುಸಿದಿದೆ. ಹಾಗೂ ಸದ್ಯ ಈಗ ಅಪಾಯಯದ ಸ್ಥಿತಿ ಹೆಚ್ಚಿದೆ. ಈಗ ಬಿದ್ದಿರುವ ಕಟ್ಟಡದಿಂದಾಗಿ ಮತ್ತೊಂದು ಕಟ್ಟಡ ಕೂಡ ಬೀಳುವ ಪರಿಸ್ಥಿತಿಯಲ್ಲಿದೆ ಎಂದು ಪುರಸಭೆ ತಿಳಿಸಿದೆ. ಸದ್ಯ ಈಗ ಪಕ್ಕದ ಕಟ್ಟಡಗಳಲ್ಲಿದ್ದ ಜನರನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದೆ.

ಕಟ್ಟಡದ ಅವಶೇಷಗಳಡಿ ಸಿಲುಕಿದವರಿಗಾಗಿ ಶೋಧ ಕಾರ್ಯ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಬಿಡಿಬಿಎ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 15 ಜನರನ್ನು ರಕ್ಷಿಸಲಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಹೆಚ್ಚಿನ ಜನರು ಸಿಲುಕಿಕೊಂಡಿರುವ ಸಾಧ್ಯತೆಯಿದೆ. ಜನರನ್ನು ರಕ್ಷಿಸಲು ತಂಡಗಳು ಸಜ್ಜಾಗಿದ್ದು ರಕ್ಷಣಾ ಕಾರ್ಯದಲ್ಲಿ ಮುಳುಗಿದ್ದಾರೆ.” ಎಂದು ಜೋನ್ 11, ಮುಂಬೈನ ಉಪ ಪೊಲೀಸ್ ಆಯುಕ್ತ (ಡಿಸಿಪಿ) ವಿಶಾಲ್ ಠಾಕೂರ್ ಹೇಳಿದರು.

ಘಟನಾ ಸ್ಥಳಕ್ಕೆ ತಲುಪಿರುವ ಮಹಾರಾಷ್ಟ್ರ ಸಚಿವ ಅಸ್ಲಾಮ್ ಶೇಖ್, “ಮಳೆಯಿಂದಾಗಿ ಕಟ್ಟಡಗಳು ಕುಸಿದಿವೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಗೊಂಡ ಜನರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಹೆಚ್ಚಿನ ಜನರು ಇದ್ದಾರೆಯೇ ಎಂದು ನೋಡಿ ಕಟ್ಟಡಗಳ ಅವಶೇಷಗಳನ್ನು ತೆಗೆದು ಜನರನ್ನು ರಕ್ಷಿಸಲಾಗುತ್ತಿದೆ. ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಸ್ಥಳದಲ್ಲಿದ್ದ ಸ್ಥಳೀಯರು ತಿಳಿಸಿದ್ದಾರೆ.

“ರಾತ್ರಿ 10:15 ರ ಸುಮಾರಿಗೆ ಈ ಘಟನೆ ನಡೆದಿದೆ. ಇಬ್ಬರು ವ್ಯಕ್ತಿಗಳು ನಮ್ಮನ್ನು ಕಟ್ಟಡದಿಂದ ಹೊರಹೋಗುವಂತೆ ಹೇಳಿದ ನಂತರ ನಾನು ಹೊರಬಂದೆ. ನಾನು ಹೊರಗೆ ಓಡುತ್ತಿರುವಾಗ, ನಮ್ಮ ಕಟ್ಟಡದ ಬಳಿ ಡೈರಿ ಸೇರಿದಂತೆ ಮೂರು ಕಟ್ಟಡಗಳು ನೆಲಸಮಗೊಂಡಿರುವುದನ್ನು ನಾನು ನೋಡಿದೆ” ಎಂದು ಸ್ಥಳೀಯರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದೂ ದೇಗುಲಗಳ ಹಣ ಅನ್ಯ ಧಾರ್ಮಿಕ ಕೇಂದ್ರಗಳಿಗೆ ಬಳಕೆ ತಡೆಹಿಡಿಯಲು ಕೋಟ ಶ್ರೀನಿವಾಸ ಪೂಜಾರಿ ಆದೇಶ

Published On - 6:48 am, Thu, 10 June 21

‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು